ದೇಶದಲ್ಲಿ ಕಳೆದ ವರ್ಷ ಸುಮಾರು 5 ಲಕ್ಷ, ರಸ್ತೆ ಅಪಘಾತಗಳು ಮತ್ತು 1 ಲಕ್ಷದ 80 ಸಾವಿರ ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ಕೇಂದ್ರದ ‘ಪ್ರಾಜೆಕ್ಟ್ ಅಭಯ್’ನ ಸಮಾರೋಪ ಸಮಾರಂಭ ಉದ್ದೇಶಿಸಿ ಅವರು, ಒಟ್ಟು ಮೃತರ ಪೈಕಿ ಶೇಕಡ 66ರಷ್ಟು ಮಂದಿ 18 ರಿಂದ 34ರ ವಯೋಮಾನದವರಾಗಿದ್ದಾರೆ. ರಸ್ತೆ ಅಪಘಾತಗಳಿಂದ ವಾರ್ಷಿಕ ದೇಶದ ಜಿಡಿಪಿಯ , ಶೇಕಡ 3 ರಷ್ಟು ನಷ್ಟವಾಗುತ್ತಿದೆ ಎಂದು ಹೇಳಿದರು. ರಫ್ತು ಹೆಚ್ಚಿಸಲು ಸಾರಿಗೆ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಪ್ರಾಜೆಕ್ಟ್ ಅಭಯ್ನ ಪ್ರಾಯೋಗಿಕ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಶ್ಲಾಘನೀಯ. ದೇಶದಲ್ಲಿ ಪ್ರಸ್ತುತ 22 ಲಕ್ಷ ಚಾಲಕರ ಕೊರತೆ ಇದ್ದು, ಟ್ರಕ್ ಚಾಲಕರ ಸಂಖ್ಯೆಯನ್ನು ಹೆಚ್ಚಿಸುವ ತುರ್ತು ಅಗತ್ಯವಿದೆ ಎಂದರು. ಪ್ರಾಜೆಕ್ಟ್ ಅಭಯ್ , ದೇಶಾದ್ಯಂತ ಟ್ರಕ್ ಚಾಲಕರ ಜೀವನ ಸುಧಾರಿಸುವ ಉದ್ದೇಶ ಹೊಂದಿದ ಉಪಕ್ರಮವಾಗಿದೆ. ಕಳೆದ ವರ್ಷ, ಈ ಉಪಕ್ರಮದಡಿ ಆರು ರಾಜ್ಯಗಳು ಮತ್ತು 15 ನಗರಗಳಾದ್ಯಂತ 50 ಸಾವಿರ ಟ್ರಕ್ ಚಾಲಕರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…