Advertisement
MIRROR FOCUS

5 ದಶಲಕ್ಷ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದನೆ ಗುರಿ | ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್ ಪೂರೈಕೆ

Share

2030ರ ವೇಳೆಗೆ ವಾರ್ಷಿಕ 5 ದಶಲಕ್ಷ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದನಾ ಗುರಿ ಹೊಂದಿದ್ದು, 2047ರ ವೇಳೆಗೆ ಈ ಪ್ರಮಾಣ 25 ದಶಲಕ್ಷ ಮೆಟ್ರಿಕ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ದೆಹಲಿಯಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

Advertisement
Advertisement

MINT SUSTAINABILITY ಶೃಂಗಸಭೆಯ 3ನೇ ಅವೃತ್ತಿಯಲ್ಲಿ ಭಾಗಿಯಾಗಿದ್ದ ಅವರು, ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಗೆ ದೇಶದಲ್ಲಿ ಅಭೂತ ಪೂರ್ವ ಬೆಂಬಲ ದೊರೆಯುತ್ತಿದೆ. ಈ ಯೋಜನೆಯಡಿ 1 ಕೋಟಿ ಮನೆಗಳಿಗೆ ಮಾಸಿಕ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಗುರಿ ಹೊಂದಲಾಗಿದೆ. ಜೊತೆಗೆ ಪ್ರಧಾನಮಂತ್ರಿ ಕುಸುಮ್ ಯೋಜನೆ ಮೂಲಕವೂ ರೈತರಿಗೆ ಸೌರಶಕ್ತಿ ಪಂಪ್ ಸೆಟ್ ಗಳಿಗಾಗಿ ಸಹಾಯಧನ ಒದಗಿಸಲಾಗುತ್ತಿದೆ ಎಂದರು.ಪ್ರಧಾನಮಂತ್ರಿ ನೇತೃತ್ವದ ಸರ್ಕಾರ ನವೀಕರಿಸಬಹುದಾದ ಇಂಧನ ಮೂಲಗಳನ್ನು ಉತ್ತೇಜಿಸಲು ಹೆಚ್ಚಿನ ಆದ್ಯತೆ ನೀಡಿದ್ದು, ಹಸಿರು ಇಂಧನ ಬಳಕೆಯಲ್ಲಿ ಭಾರತ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ಸಾಗುತ್ತಿದೆ ಎಂದು ತಿಳಿಸಿದರು. ಸೌರ ಘಟಕ ಉತ್ತೇಜಿಸಲು 24 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲಾಗುತ್ತಿದೆ. ಇದರಿಂದ 13 ಸಾವಿರ ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ 9 ಸಾವಿರ ಮೆಗಾವ್ಯಾಟ್ ಸೌರಶಕ್ತಿ , 4 ಸಾವಿರ ಮೆಗಾ ವ್ಯಾಟ್ ಪವನ ಶಕ್ತಿ ಜೊತೆಗೆ ಲಡಾಖ್ ನಲ್ಲಿ 12 ಸಾವಿರ ಮೆಗಾ ವ್ಯಾಟ್ ಬ್ಯಾಟರಿ ಆಧಾರಿತ ಇಂಧನ ಶಕ್ತಿ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.‌

Advertisement

In Delhi, Union Minister of Renewable Energy Pralhad Joshi announced that the target for green hydrogen production is 5 million metric tons by 2030 and aims to increase it to 25 million metric tons by 2047.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಸಿಪ್ಪೆಯ ರಸದಿಂದ ಸೋಪು | ಸೋಪಿನಲ್ಲಿದೆ ಔಷಧೀಯ ಮೌಲ್ಯ | ಪೇಟೆಂಟ್‌ ಪಡೆದ ಪುತ್ತೂರಿನ ಸಂಸ್ಥೆ |

ಅಡಿಕೆ ಸಿಪ್ಪೆಯ ರಸದಿಂದ ತಯಾರಿಸಿ ಸೋಪಿಗೆ ಈಗ ಪೇಟೆಂಟ್‌ ಲಭಿಸಿದೆ. ಪುತ್ತೂರಿನ ಸತ್ವಂ…

14 hours ago

ಕ್ಯಾಶ್ಯೂ ಫಾರ್ಮರ್ಸ್ ಟ್ರ್ಯಾಕಿಂಗ್ ಸಿಸ್ಟಮ್ | ರೈತರಿಗೆ ಇದು ಅನುಕೂಲ ಹೇಗೆ..?

ಕೃಷಿಕರಿಗೆ ತಾವು ಕೊಂಡ ಗಿಡ/ತಳಿಗಳ ಮಾಹಿತಿಯನ್ನು ಸುಲಭದಲ್ಲಿ ಪಡೆಯಲನುವಾಗುವ ಕ್ಯೂಆರ್ ಕೋಡ್ ಹಾಗೂ…

1 day ago

ಹವಾಮಾನ ವರದಿ | 17-09-2024 | ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು-ಮಳೆ| ರಾಜ್ಯದ ಉಳಿದೆಡೆ ಮೋಡ-ಬಿಸಿಲು |

ಈಗಿನ ಹವಾಮಾನ ಪರಿಸ್ಥಿಯಲ್ಲಿ ರಾಜ್ಯದಲ್ಲಿ ನಿರ್ದಿಷ್ಟ ಪರಿಸರದಲ್ಲೇ ಮಳೆಯ ಮುನ್ಸೂಚನೆ ನೀಡಿಲು ಸಾಧ್ಯವಾಗುತ್ತಿಲ್ಲ.

1 day ago

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ…

2 days ago

ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |

ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ…

2 days ago