Advertisement
MIRROR FOCUS

5 ದಶಲಕ್ಷ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದನೆ ಗುರಿ | ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್ ಪೂರೈಕೆ

Share

2030ರ ವೇಳೆಗೆ ವಾರ್ಷಿಕ 5 ದಶಲಕ್ಷ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದನಾ ಗುರಿ ಹೊಂದಿದ್ದು, 2047ರ ವೇಳೆಗೆ ಈ ಪ್ರಮಾಣ 25 ದಶಲಕ್ಷ ಮೆಟ್ರಿಕ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ದೆಹಲಿಯಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

MINT SUSTAINABILITY ಶೃಂಗಸಭೆಯ 3ನೇ ಅವೃತ್ತಿಯಲ್ಲಿ ಭಾಗಿಯಾಗಿದ್ದ ಅವರು, ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಗೆ ದೇಶದಲ್ಲಿ ಅಭೂತ ಪೂರ್ವ ಬೆಂಬಲ ದೊರೆಯುತ್ತಿದೆ. ಈ ಯೋಜನೆಯಡಿ 1 ಕೋಟಿ ಮನೆಗಳಿಗೆ ಮಾಸಿಕ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಗುರಿ ಹೊಂದಲಾಗಿದೆ. ಜೊತೆಗೆ ಪ್ರಧಾನಮಂತ್ರಿ ಕುಸುಮ್ ಯೋಜನೆ ಮೂಲಕವೂ ರೈತರಿಗೆ ಸೌರಶಕ್ತಿ ಪಂಪ್ ಸೆಟ್ ಗಳಿಗಾಗಿ ಸಹಾಯಧನ ಒದಗಿಸಲಾಗುತ್ತಿದೆ ಎಂದರು.ಪ್ರಧಾನಮಂತ್ರಿ ನೇತೃತ್ವದ ಸರ್ಕಾರ ನವೀಕರಿಸಬಹುದಾದ ಇಂಧನ ಮೂಲಗಳನ್ನು ಉತ್ತೇಜಿಸಲು ಹೆಚ್ಚಿನ ಆದ್ಯತೆ ನೀಡಿದ್ದು, ಹಸಿರು ಇಂಧನ ಬಳಕೆಯಲ್ಲಿ ಭಾರತ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ಸಾಗುತ್ತಿದೆ ಎಂದು ತಿಳಿಸಿದರು. ಸೌರ ಘಟಕ ಉತ್ತೇಜಿಸಲು 24 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲಾಗುತ್ತಿದೆ. ಇದರಿಂದ 13 ಸಾವಿರ ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ 9 ಸಾವಿರ ಮೆಗಾವ್ಯಾಟ್ ಸೌರಶಕ್ತಿ , 4 ಸಾವಿರ ಮೆಗಾ ವ್ಯಾಟ್ ಪವನ ಶಕ್ತಿ ಜೊತೆಗೆ ಲಡಾಖ್ ನಲ್ಲಿ 12 ಸಾವಿರ ಮೆಗಾ ವ್ಯಾಟ್ ಬ್ಯಾಟರಿ ಆಧಾರಿತ ಇಂಧನ ಶಕ್ತಿ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.‌

In Delhi, Union Minister of Renewable Energy Pralhad Joshi announced that the target for green hydrogen production is 5 million metric tons by 2030 and aims to increase it to 25 million metric tons by 2047.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

11 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

11 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

11 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

11 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago