Advertisement
MIRROR FOCUS

5 ದಶಲಕ್ಷ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದನೆ ಗುರಿ | ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್ ಪೂರೈಕೆ

Share

2030ರ ವೇಳೆಗೆ ವಾರ್ಷಿಕ 5 ದಶಲಕ್ಷ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದನಾ ಗುರಿ ಹೊಂದಿದ್ದು, 2047ರ ವೇಳೆಗೆ ಈ ಪ್ರಮಾಣ 25 ದಶಲಕ್ಷ ಮೆಟ್ರಿಕ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ದೆಹಲಿಯಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

MINT SUSTAINABILITY ಶೃಂಗಸಭೆಯ 3ನೇ ಅವೃತ್ತಿಯಲ್ಲಿ ಭಾಗಿಯಾಗಿದ್ದ ಅವರು, ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಗೆ ದೇಶದಲ್ಲಿ ಅಭೂತ ಪೂರ್ವ ಬೆಂಬಲ ದೊರೆಯುತ್ತಿದೆ. ಈ ಯೋಜನೆಯಡಿ 1 ಕೋಟಿ ಮನೆಗಳಿಗೆ ಮಾಸಿಕ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಗುರಿ ಹೊಂದಲಾಗಿದೆ. ಜೊತೆಗೆ ಪ್ರಧಾನಮಂತ್ರಿ ಕುಸುಮ್ ಯೋಜನೆ ಮೂಲಕವೂ ರೈತರಿಗೆ ಸೌರಶಕ್ತಿ ಪಂಪ್ ಸೆಟ್ ಗಳಿಗಾಗಿ ಸಹಾಯಧನ ಒದಗಿಸಲಾಗುತ್ತಿದೆ ಎಂದರು.ಪ್ರಧಾನಮಂತ್ರಿ ನೇತೃತ್ವದ ಸರ್ಕಾರ ನವೀಕರಿಸಬಹುದಾದ ಇಂಧನ ಮೂಲಗಳನ್ನು ಉತ್ತೇಜಿಸಲು ಹೆಚ್ಚಿನ ಆದ್ಯತೆ ನೀಡಿದ್ದು, ಹಸಿರು ಇಂಧನ ಬಳಕೆಯಲ್ಲಿ ಭಾರತ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ಸಾಗುತ್ತಿದೆ ಎಂದು ತಿಳಿಸಿದರು. ಸೌರ ಘಟಕ ಉತ್ತೇಜಿಸಲು 24 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲಾಗುತ್ತಿದೆ. ಇದರಿಂದ 13 ಸಾವಿರ ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ 9 ಸಾವಿರ ಮೆಗಾವ್ಯಾಟ್ ಸೌರಶಕ್ತಿ , 4 ಸಾವಿರ ಮೆಗಾ ವ್ಯಾಟ್ ಪವನ ಶಕ್ತಿ ಜೊತೆಗೆ ಲಡಾಖ್ ನಲ್ಲಿ 12 ಸಾವಿರ ಮೆಗಾ ವ್ಯಾಟ್ ಬ್ಯಾಟರಿ ಆಧಾರಿತ ಇಂಧನ ಶಕ್ತಿ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.‌

In Delhi, Union Minister of Renewable Energy Pralhad Joshi announced that the target for green hydrogen production is 5 million metric tons by 2030 and aims to increase it to 25 million metric tons by 2047.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

3 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

8 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

8 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago