5 ರೂ ಗೆ 20 ಲೀಟರ್ ಶುದ್ಧ ನೀರು : ನ.ಪಂ ವತಿಯಿಂದ ಹೊಸ ಯೋಜನೆ

May 27, 2019
6:58 PM

ಸುಳ್ಯ: ಸುಳ್ಯ ನಗರದಲ್ಲಿ ಐದು ರೂ ನೀಡಿದರೆ ಇನ್ನು 20 ಲೀಟರ್ ಶುದ್ಧ ಕುಡಿಯುವ ನೀರು ದೊರೆಯಲಿದೆ. ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರಿಗೆ ಜನರು ಹಾಹಾಕಾರ ಪಡುವುದನ್ನು ತಪ್ಪಿಸಲು ಸುಳ್ಯ ನಗರ ಪಂಚಾಯತ್ ಹೊಸ ಯೋಜನೆ ರೂಪಿಸಿದೆ. ನ.ಪಂ. ವತಿಯಿಂದ ಎರಡು ಕಡೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದ್ದು ಸೋಮವಾರ ಉದ್ಘಾಟನೆಗೊಂಡಿತು.

Advertisement
Advertisement

 

ನಗರ ಪಂಚಾಯತ್ ಸಮೀಪ ಮತ್ತು ಗಾಂಧಿನಗರದಲ್ಲಿ ಘಟಕಗಳು ಕಾರ್ಯಾಚರಿಸಲಿದೆ. ತಲಾ ನಾಲ್ಕು ಲಕ್ಷ ರೂ ವೆಚ್ಚದಲ್ಲಿ ಒಟ್ಟು ಎಂಟು ಲಕ್ಷ ರೂ ಖರ್ಚಿನಲ್ಲಿ ಎರಡು ಘಟಕವನ್ನು ಸ್ಥಾಪಿಸಲಾಗಿದೆ. ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಆಸಕ್ತಿ ವಹಿಸಿ ಘಟಕವನ್ನು ಸ್ಥಾಪಿಸಲಾಗಿದೆ. ಬೆಳಿಗ್ಗೆ ಒಂಭತ್ತರಿಂದ ಸಂಜೆ ಆರರವರೆಗೆ ಘಟಕ ಕಾರ್ಯಾಚರಿಸಲಿದೆ. ಘಟಕದ ನಿರ್ವಹಣೆಗೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು‌. ಜನರ ಬೇಡಿಕೆಯನ್ನು ಗಮನಿಸಿ ಇನ್ನೂ ಹೆಚ್ಚಿನ ಕಡೆಗಳಲ್ಲಿ ಘಟಕ ತೆರೆಯುವ ಯೋಜನೆ ರೂಪಿಸಲಾಗುತ್ತದೆ. 5 ರೂಗೆ 20 ಲೀಟರ್ ಮತ್ತು 2 ರೂಗೆ 10 ಲೀಟರ್ ನಂತೆ ನೀರು ಸರಬರಾಜು ಮಾಡಲಾಗುತ್ತದೆ. ಕುಡಿಯಲು ಮತ್ತು ಅಡುಗೆ ಮಾಡಲು ಈ ನೀರನ್ನು ಬಳಸಬಹುದು.

 

ನ.ಪಂ. ಅಡಳಿತಾಧಿಕಾರಿಯಾದ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉದ್ಘಾಟಿಸಿದರು. ನ.ಪಂ.ಮುಖ್ಯಾಧಿಕಾರಿ ಶ್ರೀಧರ್, ಇಂಜಿನಿಯರ್ ಶಿವಕುಮಾರ್, ಕಂದಾಯ ನಿರೀಕ್ಷಕ ದೀಪಕ್, ಗ್ರಾಮ ಕರಣಿಕ ತಿಪ್ಪೇಶ್, ನ.ಪಂ.ಆರೋಗ್ಯಾಧಿಕಾರಿ ರವಿಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror