ಸುದ್ದಿಗಳು

ಬಂಡೀಪುರದಲ್ಲಿ ಮೋದಿ ಸಫಾರಿ | ಗಂಧದ ಗುಡಿಯ ಪ್ರಕೃತಿ ಸೌಂದರ್ಯ ಸವಿದ ಪ್ರಧಾನಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ‌ ಮೋದಿ ಅವರು ಬಂಡೀಪುರ ಹುಲಿ‌ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ.

Advertisement
Advertisement

ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ‌ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು. ಬೆಳಗ್ಗೆ 7:35ರ ವೇಳೆಗೆ ಬಂಡೀಪುರ ಕ್ಯಾಂಪಸ್‌ಗೆ ತಲುಪಿದ ಮೋದಿ ಅವರು ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

7:50ಕ್ಕೆ ತೆರೆದ ಜೀಪ್‌ನಲ್ಲಿ (ಮಹೀಂದ್ರಾ ಬೊಲೆರೊ ಕ್ಯಾಂಪರ್) ಸುಮಾರು 2 ಗಂಟೆ (22 ಕಿ.ಮೀ) ಸಫಾರಿ ಮಾಡಿದರು. ಈ ವೇಳೆ ಅರಣ್ಯದಲ್ಲಿ ಪ್ರಧಾನಿ ಸಂಚರಿಸಿ ಸೌಂದರ್ಯ ಸವಿದರು.

ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ‌ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ‌ಇದ್ದರು. ಮೋದಿ ಅವರಿದ್ದ ವಾಹನದ ಜೊತೆಗೆ ಅಂಬುಲೆನ್ಸ್‌ ಸೇರಿದಂತೆ ಒಂಬತ್ತು ವಾಹನಗಳು ಸಾಗಿದ್ದವು.

Advertisement

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…

10 hours ago

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…

10 hours ago

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…

14 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…

15 hours ago

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…

15 hours ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…

20 hours ago