ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ.
ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್ಗೆ ಬಂದಿಳಿದ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು. ಬೆಳಗ್ಗೆ 7:35ರ ವೇಳೆಗೆ ಬಂಡೀಪುರ ಕ್ಯಾಂಪಸ್ಗೆ ತಲುಪಿದ ಮೋದಿ ಅವರು ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
7:50ಕ್ಕೆ ತೆರೆದ ಜೀಪ್ನಲ್ಲಿ (ಮಹೀಂದ್ರಾ ಬೊಲೆರೊ ಕ್ಯಾಂಪರ್) ಸುಮಾರು 2 ಗಂಟೆ (22 ಕಿ.ಮೀ) ಸಫಾರಿ ಮಾಡಿದರು. ಈ ವೇಳೆ ಅರಣ್ಯದಲ್ಲಿ ಪ್ರಧಾನಿ ಸಂಚರಿಸಿ ಸೌಂದರ್ಯ ಸವಿದರು.
ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು. ಮೋದಿ ಅವರಿದ್ದ ವಾಹನದ ಜೊತೆಗೆ ಅಂಬುಲೆನ್ಸ್ ಸೇರಿದಂತೆ ಒಂಬತ್ತು ವಾಹನಗಳು ಸಾಗಿದ್ದವು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.