Advertisement
ಸುದ್ದಿಗಳು

ಬಂಡೀಪುರದಲ್ಲಿ ಮೋದಿ ಸಫಾರಿ | ಗಂಧದ ಗುಡಿಯ ಪ್ರಕೃತಿ ಸೌಂದರ್ಯ ಸವಿದ ಪ್ರಧಾನಿ

Share

ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ‌ ಮೋದಿ ಅವರು ಬಂಡೀಪುರ ಹುಲಿ‌ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ.

ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ‌ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು. ಬೆಳಗ್ಗೆ 7:35ರ ವೇಳೆಗೆ ಬಂಡೀಪುರ ಕ್ಯಾಂಪಸ್‌ಗೆ ತಲುಪಿದ ಮೋದಿ ಅವರು ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

7:50ಕ್ಕೆ ತೆರೆದ ಜೀಪ್‌ನಲ್ಲಿ (ಮಹೀಂದ್ರಾ ಬೊಲೆರೊ ಕ್ಯಾಂಪರ್) ಸುಮಾರು 2 ಗಂಟೆ (22 ಕಿ.ಮೀ) ಸಫಾರಿ ಮಾಡಿದರು. ಈ ವೇಳೆ ಅರಣ್ಯದಲ್ಲಿ ಪ್ರಧಾನಿ ಸಂಚರಿಸಿ ಸೌಂದರ್ಯ ಸವಿದರು.

ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ‌ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ‌ಇದ್ದರು. ಮೋದಿ ಅವರಿದ್ದ ವಾಹನದ ಜೊತೆಗೆ ಅಂಬುಲೆನ್ಸ್‌ ಸೇರಿದಂತೆ ಒಂಬತ್ತು ವಾಹನಗಳು ಸಾಗಿದ್ದವು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

9 minutes ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

29 minutes ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

12 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

22 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

23 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago