ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ.
ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್ಗೆ ಬಂದಿಳಿದ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು. ಬೆಳಗ್ಗೆ 7:35ರ ವೇಳೆಗೆ ಬಂಡೀಪುರ ಕ್ಯಾಂಪಸ್ಗೆ ತಲುಪಿದ ಮೋದಿ ಅವರು ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
7:50ಕ್ಕೆ ತೆರೆದ ಜೀಪ್ನಲ್ಲಿ (ಮಹೀಂದ್ರಾ ಬೊಲೆರೊ ಕ್ಯಾಂಪರ್) ಸುಮಾರು 2 ಗಂಟೆ (22 ಕಿ.ಮೀ) ಸಫಾರಿ ಮಾಡಿದರು. ಈ ವೇಳೆ ಅರಣ್ಯದಲ್ಲಿ ಪ್ರಧಾನಿ ಸಂಚರಿಸಿ ಸೌಂದರ್ಯ ಸವಿದರು.
ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು. ಮೋದಿ ಅವರಿದ್ದ ವಾಹನದ ಜೊತೆಗೆ ಅಂಬುಲೆನ್ಸ್ ಸೇರಿದಂತೆ ಒಂಬತ್ತು ವಾಹನಗಳು ಸಾಗಿದ್ದವು.
ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…
2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…