ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ.
ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್ಗೆ ಬಂದಿಳಿದ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು. ಬೆಳಗ್ಗೆ 7:35ರ ವೇಳೆಗೆ ಬಂಡೀಪುರ ಕ್ಯಾಂಪಸ್ಗೆ ತಲುಪಿದ ಮೋದಿ ಅವರು ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
7:50ಕ್ಕೆ ತೆರೆದ ಜೀಪ್ನಲ್ಲಿ (ಮಹೀಂದ್ರಾ ಬೊಲೆರೊ ಕ್ಯಾಂಪರ್) ಸುಮಾರು 2 ಗಂಟೆ (22 ಕಿ.ಮೀ) ಸಫಾರಿ ಮಾಡಿದರು. ಈ ವೇಳೆ ಅರಣ್ಯದಲ್ಲಿ ಪ್ರಧಾನಿ ಸಂಚರಿಸಿ ಸೌಂದರ್ಯ ಸವಿದರು.
ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು. ಮೋದಿ ಅವರಿದ್ದ ವಾಹನದ ಜೊತೆಗೆ ಅಂಬುಲೆನ್ಸ್ ಸೇರಿದಂತೆ ಒಂಬತ್ತು ವಾಹನಗಳು ಸಾಗಿದ್ದವು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…