ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ.
ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್ಗೆ ಬಂದಿಳಿದ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು. ಬೆಳಗ್ಗೆ 7:35ರ ವೇಳೆಗೆ ಬಂಡೀಪುರ ಕ್ಯಾಂಪಸ್ಗೆ ತಲುಪಿದ ಮೋದಿ ಅವರು ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
7:50ಕ್ಕೆ ತೆರೆದ ಜೀಪ್ನಲ್ಲಿ (ಮಹೀಂದ್ರಾ ಬೊಲೆರೊ ಕ್ಯಾಂಪರ್) ಸುಮಾರು 2 ಗಂಟೆ (22 ಕಿ.ಮೀ) ಸಫಾರಿ ಮಾಡಿದರು. ಈ ವೇಳೆ ಅರಣ್ಯದಲ್ಲಿ ಪ್ರಧಾನಿ ಸಂಚರಿಸಿ ಸೌಂದರ್ಯ ಸವಿದರು.
ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು. ಮೋದಿ ಅವರಿದ್ದ ವಾಹನದ ಜೊತೆಗೆ ಅಂಬುಲೆನ್ಸ್ ಸೇರಿದಂತೆ ಒಂಬತ್ತು ವಾಹನಗಳು ಸಾಗಿದ್ದವು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…