ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ.
ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್ಗೆ ಬಂದಿಳಿದ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು. ಬೆಳಗ್ಗೆ 7:35ರ ವೇಳೆಗೆ ಬಂಡೀಪುರ ಕ್ಯಾಂಪಸ್ಗೆ ತಲುಪಿದ ಮೋದಿ ಅವರು ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
7:50ಕ್ಕೆ ತೆರೆದ ಜೀಪ್ನಲ್ಲಿ (ಮಹೀಂದ್ರಾ ಬೊಲೆರೊ ಕ್ಯಾಂಪರ್) ಸುಮಾರು 2 ಗಂಟೆ (22 ಕಿ.ಮೀ) ಸಫಾರಿ ಮಾಡಿದರು. ಈ ವೇಳೆ ಅರಣ್ಯದಲ್ಲಿ ಪ್ರಧಾನಿ ಸಂಚರಿಸಿ ಸೌಂದರ್ಯ ಸವಿದರು.
ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು. ಮೋದಿ ಅವರಿದ್ದ ವಾಹನದ ಜೊತೆಗೆ ಅಂಬುಲೆನ್ಸ್ ಸೇರಿದಂತೆ ಒಂಬತ್ತು ವಾಹನಗಳು ಸಾಗಿದ್ದವು.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…