MIRROR FOCUS

ಮುಂದಿನ 10 ವರ್ಷದಲ್ಲಿ 517 ಹೊಸ ವಿಮಾನ ಮಾರ್ಗ, ಉಡಾನ್ ಯೋಜನೆಯಡಿ, ಸಾಮಾನ್ಯ ಜನರಿಗೆ ವಿಮಾನ ಪ್ರಯಾಣದ ಪ್ರಯೋಜನ – ನಿರ್ಮಲಾ ಸೀತಾರಾಮನ್

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಲೋಕಸಭೆಯಲ್ಲಿ ಇಂದು ನರೇಂದ್ರ ಮೋದಿ ಸರ್ಕಾರದ 2ನೇ ಆಡಳಿತಾವಧಿಯ ಕೊನೆಯ ಬಜೆಟ್‌ (Union Budget 2024) ಅನ್ನು ಮಂಡಿಸಿದರು. ಈ ವೇಳೆ ಕೇಂದ್ರ ಸರ್ಕಾರದ 10 ವರ್ಷಗಳ ಸಾಧನೆಗಳನ್ನು ವಿವರಿಸಿದ ನಿರ್ಮಲಾ ಸೀತಾರಾಮನ್, ಮುಂದಿನ 10 ವರ್ಷಗಳಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು ಎಂದರಲ್ಲದೇ, ಮುಂದಿನ 10 ವರ್ಷಗಳಲ್ಲಿ 149 ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸುವುದರ ಜೊತೆಗೆ 517 ಹೊಸ ವಿಮಾನ ಮಾರ್ಗಗಳನ್ನು ಸಹ ನಿರ್ಮಿಸಲಾಗುವುದು. ಉಡಾನ್ ಯೋಜನೆಯಡಿ, ಸಾಮಾನ್ಯ ಜನರಿಗೆ ವಿಮಾನ ಪ್ರಯಾಣದ ಪ್ರಯೋಜನವನ್ನು ಒದಗಿಸಲಾಗುವುದು ಎಂದು ಹೇಳಿದರು.

Advertisement

ಇನ್ನು, 40 ಸಾವಿರ ಹಳೆಯ ಬೋಗಿಗಳನ್ನು ವಂದೇ ಭಾರತ್ ಬೋಗಿಗಳನ್ನಾಗಿ ಪರಿವರ್ತಿಸಲಾಗುವುದು ಎಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇದರಿಂದ ಪ್ರಯಾಣಿಕರ ಸುರಕ್ಷತೆಯೂ ಹೆಚ್ಚಲಿದೆ. 3 ಮೀಸಲಾದ ಸರಕು ಸಾಗಣೆ ಕಾರಿಡಾರ್‌ಗಳನ್ನು ರಚಿಸಲಾಗಿದ್ದು, ಇದು ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು ಸಹಾಯಕವಾಗಲಿದೆ ಎಂದರು.

ಇನ್ನು, ಮೇಲ್ಛಾವಣಿ ಸೌರಶಕ್ತಿಯ ಸಹಾಯದಿಂದ 1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಘೋಷಿಸಿದ ನಿರ್ಮಲಾ ಸೀತಾರಾಮನ್, ಇದಲ್ಲದೇ ಕಳೆದ 10 ವರ್ಷಗಳಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಹೇಗೆ ಕೆಲಸ ಮಾಡಿದೆ ಎಂಬುದನ್ನು ಸಹ ಇದೇ ವೇಳೆ ತಿಳಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಶೇ.70ರಷ್ಟು ಮನೆಗಳನ್ನು ಮಹಿಳೆಯರ ಹೆಸರಿಗೆ ನೀಡಲಾಗಿದೆ. 1 ಕೋಟಿ ಮಹಿಳೆಯರನ್ನು ಲಖ್ಪತಿ ದೀದಿಯನ್ನಾಗಿ ಮಾಡಲಾಗಿದೆ. ಇದಾದ ನಂತರ 3 ಕೋಟಿ ಮಹಿಳೆಯರನ್ನು ಲಖ್ಪತಿ ದೀದಿಯನ್ನಾಗಿ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದರು.

ಇನ್ನು, 9-14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ ಹಾಕಲಾಗುವುದು ಎಂದ ನಿರ್ಮಲಾ ಸೀತಾರಾಮನ್, ಹೈನುಗಾರರಿಗೆ ಉತ್ತೇಜನ ನೀಡಲಾಗುವುದು. 11 ರಷ್ಟು ಹೆಚ್ಚು ಮೂಲಸೌಕರ್ಯಕ್ಕೆ ಖರ್ಚು ಮಾಡಲಾಗುವುದು. ಮಧ್ಯಮ ವರ್ಗದವರಿಗೆ ಹೊಸ ವಸತಿ ಯೋಜನೆ ತರಲಾಗುವುದು. ನೈಸರ್ಗಿಕ ಅನಿಲದ ಆಮದು ಹೆಚ್ಚಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ನ್ಯಾನೊ ಯೂರಿಯಾ ವ್ಯಾಪ್ತಿಯನ್ನು ವಿಸ್ತರಿಸಲಾಗುವುದು. ಐದು ಹೊಸ ಆಕ್ವಾ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು. 50 ವರ್ಷಗಳ ಉಚಿತ ಬಡ್ಡಿಗೆ 1 ಲಕ್ಷ ಕೋಟಿ ರೂ.ಗಳ ಬಜೆಟ್ ಅನ್ನು ವಿನಿಯೋಗಿಸಲಾಗುವುದು ಎಂದರು.

ಇನ್ನು, 4 ಕೋಟಿ ರೈತರು ಬೆಳೆ ವಿಮೆಯ ಲಾಭ ಪಡೆದಿದ್ದಾರೆ. ಉಚಿತ ಪಡಿತರದಿಂದಾಗಿ 80 ಕೋಟಿ ಜನರ ಆಹಾರದ ಚಿಂತೆ ದೂರಾವಗಿದೆ ಎಂದ ನಿರ್ಮಲಾ ಸೀತಾರಾಮನ್, ಕಳೆದ 10 ವರ್ಷಗಳಲ್ಲಿ, ಮಹಿಳಾ ಉದ್ಯಮಿಗಳಿಗೆ 30 ಕೋಟಿ ಮುದ್ರಾ ಯೋಜನೆ ಸಾಲಗಳನ್ನು ನೀಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ 70% ಮನೆಗಳನ್ನು ನೀಡಲಾಗಿದೆ. ನಮ್ಮ ಸರ್ಕಾರವು ಜವಾಬ್ದಾರಿಯುತ, ಜನಕೇಂದ್ರಿತ ಮತ್ತು ವಿಶ್ವಾಸ ಆಧಾರಿತ ಆಡಳಿತವನ್ನು ನಾಗರಿಕರ ಮೊದಲ ಆದ್ಯತೆಯನ್ನಾಗಿ ನೀಡಿದೆ ಎಂದು ಹೇಳಿದರು.

2014ರಲ್ಲಿ ಪ್ರಧಾನಿ ಮೋದಿ ಕೆಲಸ ಆರಂಭಿಸಿದಾಗ ಸಾಕಷ್ಟು ಸವಾಲುಗಳಿದ್ದವು ಎಂದ ನಿರ್ಮಲಾ, ಸಾರ್ವಜನಿಕ ಹಿತದೃಷ್ಟಿಯಿಂದ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರಿಗೆ ಗರಿಷ್ಠ ಉದ್ಯೋಗಾವಕಾಶಗಳನ್ನು ನೀಡಲಾಗಿದೆ. ದೇಶದಲ್ಲಿ ಹೊಸ ಉದ್ದೇಶ ಮತ್ತು ಭರವಸೆ ಹುಟ್ಟಿಕೊಂಡಿದೆ. ಸಾರ್ವಜನಿಕರು ನಮ್ಮನ್ನು ಎರಡನೇ ಬಾರಿಗೆ ಆಡಳಿತ ನಡೆಸಲು ಆಯ್ಕೆ ಮಾಡಿದ್ದಾರೆ. ಸಮಗ್ರ ಅಭಿವೃದ್ಧಿ ಬಗ್ಗೆ ಮಾತನಾಡಿದ್ದೇವೆ. ‘ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್‌’ ಮಂತ್ರದ ಮೂಲಕ ಎಲ್ಲರ ಬೆಂಬಲ, ಎಲ್ಲರ ವಿಶ್ವಾಸ ಮತ್ತು ಎಲ್ಲರ ಪ್ರಯತ್ನ ಎಂಬ ಮಂತ್ರದೊಂದಿಗೆ ಮುನ್ನಡೆಯುತ್ತಿದ್ದೇವೆ ಎಂದರು.

ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆಯಲ್ಲಿ ಅಭೂತಪೂರ್ವ ಬದಲಾವಣೆಯಾಗಿದೆ ಎಂದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, 2014ರಲ್ಲಿ ದೇಶ ದೊಡ್ಡ ಸವಾಲುಗಳನ್ನು ಎದುರಿಸುತ್ತಿತ್ತು. ಸರ್ಕಾರವು ಆ ಸವಾಲುಗಳನ್ನು ಮೆಟ್ಟಿ ನಿಂತು ರಚನಾತ್ಮಕ ಸುಧಾರಣೆಗಳು ಮತ್ತು ಜನಸ್ನೇಹಿ ಸುಧಾರಣೆಗಳನ್ನು ಕೈಗೊಂಡಿತು. ದೇಶದ ಜನತೆ ಭವಿಷ್ಯದತ್ತ ನೋಡುತ್ತಿದ್ದಾರೆ. ಅವರು ಆಶಾವಾದಿಗಳಾಗಿದ್ದಾರೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಾವು ಮುನ್ನಡೆಯುತ್ತಿದ್ದೇವೆ ಎಂದರು.

  • ಅಂತರ್ಜಾಲ ಮಾಹಿತಿ

Nirmala Sitharaman, describing the achievements of the Central Government in 10 years, said that not only the number of airports will be doubled in the next 10 years, 149 new airports will also be built in the next 10 years along with 517 new flight routes. Under the Udan scheme, the common man will be provided with the benefit of air travel, he said.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

7 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

8 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

8 hours ago

ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

16 hours ago