MIRROR FOCUS

ಒಂದು ಗಂಟೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಯಶಸ್ವಿ ಅಭಿಯಾನ | ದಾಖಲೆ ನಿರ್ಮಿಸಿದ ಪ್ರಾದೇಶಿಕ ಸೇನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಂದು ಗಂಟೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪ್ರಾದೇಶಿ ಸೇನೆಯು ಇತಿಹಾಸ ಸೃಷ್ಟಿಸಿದೆ. ಇದೀಗ ಸಾಧನೆಯು ವಿಶ್ವದಾಖಲೆಯಾಗಿದೆ.…..ಮುಂದೆ ಓದಿ….

Advertisement

ಭಾರತ-ಪಾಕಿಸ್ತಾನ ಗಡಿ ಭಾಗಕ್ಕೆ ಸಮೀಪವಿರುವ ಜೈಸಲ್ಮೇರ್‌ ಜಿಲ್ಲೆಯಲ್ಲಿ ಈ ದಾಖಲೆ ಮಾಡಲಾಗಿದೆ. ಈ ಪ್ರದೇಶದಲ್ಲಿ ಹಸಿರು ಯೋಜನೆಯನ್ನು ಸಂಪೂರ್ಣವಾಗಿ ಜಾರಿ ಮಾಡುವ ಮಹತ್ವದ ಗುರಿಯನ್ನೂ ಹೊಂದಲಾಗಿದೆ.  ಇಲ್ಲಿನ ಪ್ರಾದೇಶಿಕ ಸೇನೆ ಮತ್ತು 128 ಪದಾತಿದಳ ಬೆಟಾಲಿಯನ್ ಭಾನುವಾರ ಈ ಸಾಧನೆ ಮಾಡಿದೆ.  ಸೇನೆಯ ಈ ಕಾರ್ಯವನ್ನು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಸಚಿವ ಭೂಪೇಂದರ್ ಯಾದವ್ ಅವರು  ಸೇನೆಯ ಪರಿಸರ ಕಾರ್ಯಪಡೆಯ  ಕಾರ್ಯವನ್ನು ಅಭಿನಂದಿಸಿದ್ದಾರೆ. ಜೈಸಲ್ಮೇರ್‌ನಲ್ಲಿ ವಿಶೇಷ ಪ್ಲಾಂಟೇಶನ್ ಡ್ರೈವ್ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷ 20 ಸಾವಿರ ಸಸಿಗಳನ್ನು ನೆಡಲಾಗಿದೆ ಎಂದು ಹೇಳಿದ್ದಾರೆ.

ಈ ಯೋಜನೆಯು ಪ್ರಧಾನ ಮಂತ್ರಿಯವರ ಅಭಿಯಾನದ “ಏಕ್ ಪೆಡ್ ಮಾ ಕೆ ನಾಮ್” ಮತ್ತು ಪ್ರಾದೇಶಿಕ ಸೇನೆಯ “ಭಾಗವಹಿಸುವಿಕೆ ಮತ್ತು ಜವಾಬ್ದಾರಿ” ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ಅಭಿಯಾನದ ರೂಪದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಮೂಲಕ   ಪರಿಸರದ ಉಳಿವು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಲಾಗಿದೆ.

‘ಮರಗಳನ್ನು ರಕ್ಷಿಸಿ’ ಎಂಬ ಶೀರ್ಷಿಕೆ ಅಡಿಯಲ್ಲಿ ‘ಮರಗಳನ್ನು ರಕ್ಷಿಸುವವರಿಗೆ ರಕ್ಷಣೆ’ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಅಭಿಯಾನದಲ್ಲಿ ಭಾರತೀಯ ಸೇನೆ, ಭಾರತೀಯ ವಾಯುಪಡೆ, ಗಡಿ ಭದ್ರತಾ ಪಡೆ, ಜೈಸಲ್ಮೇರ್ ಜಿಲ್ಲಾಡಳಿತ, ಪೊಲೀಸ್, ಗೃಹರಕ್ಷಕ ದಳ, ಸಂಕಲ್ಪ ಎನ್‌ಜಿಒ ಮತ್ತು ಸ್ಥಳೀಯ ವಿದ್ಯಾರ್ಥಿಗಳು  ಭಾಗವಹಿಸಿದ್ದರು. ಜೈಸಲ್ಮೇರ್‌ನ ಏಳು ಕಡೆಗಳಲ್ಲಿ ಏಕಕಾಲದಲ್ಲಿ ಗಿಡ ನಡೆಸಲಾಯಿತು.  ಈ ಕಾರ್ಯಕ್ರಮವು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ನಿಂದ  ಗುರುತಿಸಲ್ಪಟ್ಟಿದೆ. ಒಂದು ಗಂಟೆಯಲ್ಲಿ ತಂಡವೊಂದು ನೆಟ್ಟ ಅತಿ ಹೆಚ್ಚು ಸಸಿಗಳು ಹಾಗೂ ಒಂದು ಗಂಟೆಯಲ್ಲಿ ಮಹಿಳೆಯರ ತಂಡ ನೆಟ್ಟ ಅತಿ ಹೆಚ್ಚು ಸಸಿಗಳು ಮತ್ತು ಒಂದೇ ಸ್ಥಳದಲ್ಲಿ ಏಕಕಾಲದಲ್ಲಿ ಅತಿ ಹೆಚ್ಚು ಜನರು ಸಸಿಗಳನ್ನು ನೆಟ್ಟಿರುವುದು ಈ ದಾಖಲೆಯಲ್ಲಿ ಸೇರಿದೆ.

A historic plantation drive took place in Jaisalmer on September 22, where the 128 Infantry Battalion of the Territorial Army and the Ecological Task Force planted more than 5 lakh saplings in just one hour. Union Minister for Environment, Forest and Climate Change, Bhupendra Yadav, congratulated all participants for this significant achievement.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |

ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

1 day ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

1 day ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

1 day ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

2 days ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

2 days ago