Advertisement
MIRROR FOCUS

ಒಂದು ಗಂಟೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಯಶಸ್ವಿ ಅಭಿಯಾನ | ದಾಖಲೆ ನಿರ್ಮಿಸಿದ ಪ್ರಾದೇಶಿಕ ಸೇನೆ |

Share

ಒಂದು ಗಂಟೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪ್ರಾದೇಶಿ ಸೇನೆಯು ಇತಿಹಾಸ ಸೃಷ್ಟಿಸಿದೆ. ಇದೀಗ ಸಾಧನೆಯು ವಿಶ್ವದಾಖಲೆಯಾಗಿದೆ.…..ಮುಂದೆ ಓದಿ….

ಭಾರತ-ಪಾಕಿಸ್ತಾನ ಗಡಿ ಭಾಗಕ್ಕೆ ಸಮೀಪವಿರುವ ಜೈಸಲ್ಮೇರ್‌ ಜಿಲ್ಲೆಯಲ್ಲಿ ಈ ದಾಖಲೆ ಮಾಡಲಾಗಿದೆ. ಈ ಪ್ರದೇಶದಲ್ಲಿ ಹಸಿರು ಯೋಜನೆಯನ್ನು ಸಂಪೂರ್ಣವಾಗಿ ಜಾರಿ ಮಾಡುವ ಮಹತ್ವದ ಗುರಿಯನ್ನೂ ಹೊಂದಲಾಗಿದೆ.  ಇಲ್ಲಿನ ಪ್ರಾದೇಶಿಕ ಸೇನೆ ಮತ್ತು 128 ಪದಾತಿದಳ ಬೆಟಾಲಿಯನ್ ಭಾನುವಾರ ಈ ಸಾಧನೆ ಮಾಡಿದೆ.  ಸೇನೆಯ ಈ ಕಾರ್ಯವನ್ನು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಸಚಿವ ಭೂಪೇಂದರ್ ಯಾದವ್ ಅವರು  ಸೇನೆಯ ಪರಿಸರ ಕಾರ್ಯಪಡೆಯ  ಕಾರ್ಯವನ್ನು ಅಭಿನಂದಿಸಿದ್ದಾರೆ. ಜೈಸಲ್ಮೇರ್‌ನಲ್ಲಿ ವಿಶೇಷ ಪ್ಲಾಂಟೇಶನ್ ಡ್ರೈವ್ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷ 20 ಸಾವಿರ ಸಸಿಗಳನ್ನು ನೆಡಲಾಗಿದೆ ಎಂದು ಹೇಳಿದ್ದಾರೆ.

ಈ ಯೋಜನೆಯು ಪ್ರಧಾನ ಮಂತ್ರಿಯವರ ಅಭಿಯಾನದ “ಏಕ್ ಪೆಡ್ ಮಾ ಕೆ ನಾಮ್” ಮತ್ತು ಪ್ರಾದೇಶಿಕ ಸೇನೆಯ “ಭಾಗವಹಿಸುವಿಕೆ ಮತ್ತು ಜವಾಬ್ದಾರಿ” ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ಅಭಿಯಾನದ ರೂಪದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಮೂಲಕ   ಪರಿಸರದ ಉಳಿವು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಲಾಗಿದೆ.

‘ಮರಗಳನ್ನು ರಕ್ಷಿಸಿ’ ಎಂಬ ಶೀರ್ಷಿಕೆ ಅಡಿಯಲ್ಲಿ ‘ಮರಗಳನ್ನು ರಕ್ಷಿಸುವವರಿಗೆ ರಕ್ಷಣೆ’ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಅಭಿಯಾನದಲ್ಲಿ ಭಾರತೀಯ ಸೇನೆ, ಭಾರತೀಯ ವಾಯುಪಡೆ, ಗಡಿ ಭದ್ರತಾ ಪಡೆ, ಜೈಸಲ್ಮೇರ್ ಜಿಲ್ಲಾಡಳಿತ, ಪೊಲೀಸ್, ಗೃಹರಕ್ಷಕ ದಳ, ಸಂಕಲ್ಪ ಎನ್‌ಜಿಒ ಮತ್ತು ಸ್ಥಳೀಯ ವಿದ್ಯಾರ್ಥಿಗಳು  ಭಾಗವಹಿಸಿದ್ದರು. ಜೈಸಲ್ಮೇರ್‌ನ ಏಳು ಕಡೆಗಳಲ್ಲಿ ಏಕಕಾಲದಲ್ಲಿ ಗಿಡ ನಡೆಸಲಾಯಿತು.  ಈ ಕಾರ್ಯಕ್ರಮವು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ನಿಂದ  ಗುರುತಿಸಲ್ಪಟ್ಟಿದೆ. ಒಂದು ಗಂಟೆಯಲ್ಲಿ ತಂಡವೊಂದು ನೆಟ್ಟ ಅತಿ ಹೆಚ್ಚು ಸಸಿಗಳು ಹಾಗೂ ಒಂದು ಗಂಟೆಯಲ್ಲಿ ಮಹಿಳೆಯರ ತಂಡ ನೆಟ್ಟ ಅತಿ ಹೆಚ್ಚು ಸಸಿಗಳು ಮತ್ತು ಒಂದೇ ಸ್ಥಳದಲ್ಲಿ ಏಕಕಾಲದಲ್ಲಿ ಅತಿ ಹೆಚ್ಚು ಜನರು ಸಸಿಗಳನ್ನು ನೆಟ್ಟಿರುವುದು ಈ ದಾಖಲೆಯಲ್ಲಿ ಸೇರಿದೆ.

A historic plantation drive took place in Jaisalmer on September 22, where the 128 Infantry Battalion of the Territorial Army and the Ecological Task Force planted more than 5 lakh saplings in just one hour. Union Minister for Environment, Forest and Climate Change, Bhupendra Yadav, congratulated all participants for this significant achievement.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

3 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

23 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

23 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago