Advertisement
MIRROR FOCUS

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

Share

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್ ಬಿಡುಗಡೆಯಾಗಬಹುದು. ಶುದ್ಧೀಕರಣ ಪ್ರಕ್ರಿಯೆಯ ನಂತರ, ಜೈವಿಕ ಅನಿಲದ( Compressed Biogas) ಕಾರನ್ನು 5,500 ಕಿ.ಮೀ.ಗಿಂತ ಹೆಚ್ಚು ದೂರ ಓಡಿಸಬಹುದು ಎನ್ನುವುದು ಈಗಿನ ಸುದ್ದಿ. ಉತ್ತರಪ್ರದೇಶದ ಈ ಸುದ್ದಿ ಈ ಬಗ್ಗೆ ಚರ್ಚೆಯಾಗುತ್ತಿದೆ.

ಉತ್ತರ ಪ್ರದೇಶದ ಗ್ರಾಮೀಣ ಆರ್ಥಿಕತೆಯು ಮೊದಲ ಬಾರಿಗೆ ಹಸುವಿನ ಸಗಣಿಯಿಂದ ದೊಡ್ಡ ಪ್ರಮಾಣದಲ್ಲಿ ಮೀಥೇನ್ ಉತ್ಪಾದಿಸಲಿದ್ದು, ವಾಹನಗಳಿಗೆ ಶಕ್ತಿ ತುಂಬುವ ಇಂಧನವನ್ನು ಉತ್ಪಾದಿಸುವ ಸಿದ್ಧತೆ ನಡೆಯುತ್ತಿದೆ. ಗ್ರಾಮೀಣ ಉದ್ಯೋಗ ಸೃಷ್ಟಿ ಮತ್ತು ಗ್ರೀನ್‌ ಇಕಾನಮಿ ಬಲಪಡಿಸುವ ಹೆಜ್ಜೆಗಳಲ್ಲಿ ಇದೂ ಒಂದಾಗಿದೆ. ಈ ಬಗ್ಗೆ ಅಭಿಪ್ರಾಯಪಟ್ಟಿರುವ ತಜ್ಞರು, ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್ ಬಿಡುಗಡೆಯಾಗಬಹುದು. ಶುದ್ಧೀಕರಣ ಪ್ರಕ್ರಿಯೆಯ ನಂತರ,  ಕಂಪ್ರೆಸ್ಡ್ ಬಯೋಗ್ಯಾಸ್ ಕಾರನ್ನು 5,500 ಕಿ.ಮೀ.ಗಿಂತ ಹೆಚ್ಚು ದೂರ ಓಡಿಸಬಹುದು.

ಉತ್ತರ ಪ್ರದೇಶದ ಗೋ-ಸೇವಾ-ಆಯೋಗದ ಅಧ್ಯಕ್ಷ ಶ್ಯಾಮ್ ಬಿಹಾರಿ ಗುಪ್ತಾ ಮಾತನಾಡಿ, ರಾಜ್ಯದಲ್ಲಿ ಬೀದಿ ಗೋವುಗಳಿಂದ ದಿನಕ್ಕೆ ಸರಾಸರಿ 54 ಲಕ್ಷ ಕಿಲೋಗ್ರಾಂಗಳಷ್ಟು ಸಗಣಿ ಉತ್ಪಾದನೆಯಾಗುತ್ತದೆ. ಈ ಸಗಣಿ  ಕಂಪ್ರೆಸ್ಡ್ ಬಯೋಗ್ಯಾಸ್ ‌ ಸ್ಥಾವರಗಳಲ್ಲಿ ಸಂಸ್ಕರಿಸಿ ಮೀಥೇನ್ ಉತ್ಪಾದನೆಯಿಂದ ಹಿಡಿದು ಗ್ರಾಮೀಣ ಪ್ರದೇಶಗಳಲ್ಲಿ ಮನೆಯ ಅಡುಗೆ ಇಂಧನದವರೆಗೆ, ಸಣ್ಣ ಕೈಗಾರಿಕೆಗಳಿಗೆ ಇಂಧನವಾಗಿ ಮತ್ತು ನೈಸರ್ಗಿಕ ಕೃಷಿಯಲ್ಲಿ ಸಾವಯವ ಪರಿಹಾರವಾಗಿ ಬಳಸಬಹುದು. ಇದು ಸಂಭಾವ್ಯವಾಗಿ ಲಕ್ಷಾಂತರ ರೂಪಾಯಿಗಳ ವಾರ್ಷಿಕ ಗಳಿಕೆಯನ್ನು ಗಳಿಸಬಹುದು ಎಂದು ಹೇಳಿದ್ದಾರೆ.

ಗೋ-ಗೋ-ಸೇವಾ-ಆಯೋಗದ ಡಾ. ಅನುರಾಗ್ ಶ್ರೀವಾಸ್ತವ ಅವರು, “ಭವಿಷ್ಯದಲ್ಲಿ ಮೀಥೇನ್ ಕೃಷಿಯು ಇಂಧನಗಳಿಗೆ ಪರ್ಯಾಯವಾಗಬಹುದು. ಈ ಕ್ಷೇತ್ರದಲ್ಲಿ ಉತ್ತರ ಪ್ರದೇಶ ಸರ್ಕಾರದ ಉಪಕ್ರಮವು ‘ತ್ಯಾಜ್ಯದಿಂದ ಸಂಪತ್ತು’ ಎಂಬ ಪರಿಕಲ್ಪನೆಯನ್ನು ಉತ್ತೇಜಿಸುತ್ತಿದೆ, ಇದು ಸಾರಿಗೆ ಮತ್ತು ಗ್ರೀನ್‌ ಇಕಾನಮಿಗೆ  ಪರಿಣಾಮಕಾರಿ ಇಂಧನವನ್ನು ಒದಗಿಸುತ್ತದೆ. ಪ್ರತಿಯೊಂದು ಗೋವಿನ ಸಗಣಿಯಿಂದ ಉತ್ಪತ್ತಿಯಾಗುವ ಮೀಥೇನ್ ನೈಸರ್ಗಿಕ ಅನಿಲದ ಒಂದು ರೂಪವಾಗಿದ್ದು, ಇದು ಪರಿಸರ ಸ್ನೇಹಿ ಮತ್ತು ಆರ್ಥಿಕ ಎರಡೂ ಆಗಿದೆ ಎಂದಿದ್ದಾರೆ.

ಸೆಗಣಿಯಿಂದ ತಯಾರಾಗುವ ಇತರ ಗೊಬ್ಬರ ಹಾಗೂ ಗ್ಯಾಸ್‌ ಬಗ್ಗೆ ಹಲವು ಕಡೆ ಅಧ್ಯಯನಗಳು ನಡೆದಿವೆ ಕೂಡಾ. ಇಂಡೋನೇಷ್ಯಾದಲ್ಲಿ ಹಸುವಿನ ಗೊಬ್ಬರದಿಂದ ಉತ್ಪಾದಿಸುವ ಜೈವಿಕ ಅನಿಲದ ಆರ್ಥಿಕ, ಶಕ್ತಿ ಮತ್ತು ಪರಿಸರ ಪ್ರಯೋಜನಗಳ ಬಗ್ಗೆ ಅಧ್ಯಯನ ನಡೆದಿದೆ.

ಇಂಡೋನೇಷ್ಯಾದಲ್ಲಿ ಹಸುವಿನ ಸಗಣಿ ಅಸಮರ್ಪಕ ನಿರ್ವಹಣೆ ಒಂದು ಸಮಸ್ಯೆಯಾಗಿದೆ. ಬಯೋಗ್ಯಾಸ್ ಉತ್ಪಾದನೆಯನ್ನು ಈ ಹಿಂದೆ  ಸೆಗಣಿಯ ಬಳಕೆಗೆ ಅನುಕೂಲಕರ ವಿಧಾನವೆಂದು ಪರಿಗಣಿಸಲಾಗಿತ್ತು. ಇದಕ್ಕಾಗಿ ಇಂಡೋನೇಷ್ಯಾದಲ್ಲಿ ಕಲ್ಲಿದ್ದಲು ಚಾಲಿತ ವಿದ್ಯುತ್  ಬದಲಿಸಿ ಹಸುವಿನ ಸಗಣಿಯಿಂದ ಉತ್ಪತ್ತಿಯಾಗುವ ಜೈವಿಕ ಅನಿಲದ ಶಕ್ತಿ, ಆರ್ಥಿಕ ಮತ್ತು ಪರಿಸರ ಪ್ರಯೋಜನಗಳ ಬಗ್ಗೆ ಅಧ್ಯಯನ ನಡೆಸಲಾಗಿತ್ತು. ಈ ಅಧ್ಯಯನಗಳ  ಪ್ರಕಾರ, ಬಯೋಗ್ಯಾಸ್ ಸ್ಥಾವರವನ್ನು ಸ್ಥಾಪಿಸುವುದರಿಂದ ಇಂಗಾಲದ ಹೊರಸೂಸುವಿಕೆಯನ್ನು 6.78 ಟನ್  ಪ್ರತೀ ದಿನ ಕಡಿತಗೊಳಿಸಬಹುದು. ಯೂರಿಯಾ ಗೊಬ್ಬರದ ಸುಮಾರು 44% ಅನ್ನು ಸ್ಲರಿಯಿಂದ ಬದಲಾಯಿಸಬಹುದು ಸೇರಿದಂತೆ ದೇಶಕ್ಕೆ ಆಗುವ ವಿವಿಧ ಪ್ರಯೋಜನಗಳ ಬಗ್ಗೆ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

1 hour ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

18 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

20 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago