ಮಡಿಕೇರಿ : ಕೆಪಿಸಿಸಿ ಆದೇಶದಂತೆ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ 6 ಬ್ಲಾಕ್ ಅಧ್ಯಕ್ಷರುಗಳ ಮುಂದುವರಿಕೆ ಅಥವಾ ಬದಲಾವಣೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಕೆಪಿಸಿಸಿ ವೀಕ್ಷಕರುಗಳು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ಅ.21 ಬೆಳಗ್ಗೆ 11 ಗಂಟೆಗೆ ವೀಕ್ಷಕ ಟಿ.ಎಂ.ಶಾಹಿದ್ ಅವರು ಪೊನ್ನಂಪೇಟೆ ಬ್ಲಾಕ್ ಮತ್ತು ಮಧ್ಯಾಹ್ನ 3 ಗಂಟೆಗೆ ವಿರಾಜಪೇಟೆ ಬ್ಲಾಕ್ಗೆ ಭೇಟಿ ನೀಡಲಿದ್ದಾರೆ.
ಅ.24 ರಂದು ವೀಕ್ಷಕ ವೆಂಕಪ್ಪಗೌಡ ಅವರು ಬೆಳಗ್ಗೆ 11 ಗಂಟೆಗೆ ಸೋಮವಾರಪೇಟೆ ಬ್ಲಾಕ್, ಮಧ್ಯಾಹ್ನ 3 ಗಂಟೆಗೆ ಕುಶಾಲನಗರ ಬ್ಲಾಕ್, ಅ.26 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಬ್ಲಾಕ್ ಹಾಗೂ ಮಧ್ಯಾಹ್ನ 3 ಗಂಟೆಗೆ ನಾಪೊಕ್ಲು ಬ್ಲಾಕ್ಗಳಿಗೆ ಭೇಟಿ ನೀಡಲಿದ್ದಾರೆ.
ಈ ಬ್ಲಾಕ್ಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಎಲ್ಲಾ ಮುಂಚೂಣಿ ಘಟಕ ಮತ್ತು ವಲಯ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರುಗಳು ವೀಕ್ಷಕರು ಆಗಮಿಸುವ ಸಂದರ್ಭ ಹಾಜರಿರಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಭೇಟಿ ಸ್ಥಳವನ್ನು ಆಯಾ ಬ್ಲಾಕ್ ಅಧ್ಯಕ್ಷರುಗಳು ನಿಗದಿಪಡಿಸಿ ತಿಳಿಸಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…