ಮಡಿಕೇರಿ : ಕೆಪಿಸಿಸಿ ಆದೇಶದಂತೆ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ 6 ಬ್ಲಾಕ್ ಅಧ್ಯಕ್ಷರುಗಳ ಮುಂದುವರಿಕೆ ಅಥವಾ ಬದಲಾವಣೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಕೆಪಿಸಿಸಿ ವೀಕ್ಷಕರುಗಳು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ಅ.21 ಬೆಳಗ್ಗೆ 11 ಗಂಟೆಗೆ ವೀಕ್ಷಕ ಟಿ.ಎಂ.ಶಾಹಿದ್ ಅವರು ಪೊನ್ನಂಪೇಟೆ ಬ್ಲಾಕ್ ಮತ್ತು ಮಧ್ಯಾಹ್ನ 3 ಗಂಟೆಗೆ ವಿರಾಜಪೇಟೆ ಬ್ಲಾಕ್ಗೆ ಭೇಟಿ ನೀಡಲಿದ್ದಾರೆ.
ಅ.24 ರಂದು ವೀಕ್ಷಕ ವೆಂಕಪ್ಪಗೌಡ ಅವರು ಬೆಳಗ್ಗೆ 11 ಗಂಟೆಗೆ ಸೋಮವಾರಪೇಟೆ ಬ್ಲಾಕ್, ಮಧ್ಯಾಹ್ನ 3 ಗಂಟೆಗೆ ಕುಶಾಲನಗರ ಬ್ಲಾಕ್, ಅ.26 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಬ್ಲಾಕ್ ಹಾಗೂ ಮಧ್ಯಾಹ್ನ 3 ಗಂಟೆಗೆ ನಾಪೊಕ್ಲು ಬ್ಲಾಕ್ಗಳಿಗೆ ಭೇಟಿ ನೀಡಲಿದ್ದಾರೆ.
ಈ ಬ್ಲಾಕ್ಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಎಲ್ಲಾ ಮುಂಚೂಣಿ ಘಟಕ ಮತ್ತು ವಲಯ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರುಗಳು ವೀಕ್ಷಕರು ಆಗಮಿಸುವ ಸಂದರ್ಭ ಹಾಜರಿರಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಭೇಟಿ ಸ್ಥಳವನ್ನು ಆಯಾ ಬ್ಲಾಕ್ ಅಧ್ಯಕ್ಷರುಗಳು ನಿಗದಿಪಡಿಸಿ ತಿಳಿಸಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ಭಾರತದ 11,000 ಕಿ.ಮೀ ಕರಾವಳಿಗೆ ಮುಂದಿನ 15 ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಗಂಭೀರ…
ಸೂಪರ್ ಎಲ್ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…
ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…
ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…
ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…