ಮಡಿಕೇರಿ : ಕೆಪಿಸಿಸಿ ಆದೇಶದಂತೆ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ 6 ಬ್ಲಾಕ್ ಅಧ್ಯಕ್ಷರುಗಳ ಮುಂದುವರಿಕೆ ಅಥವಾ ಬದಲಾವಣೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಕೆಪಿಸಿಸಿ ವೀಕ್ಷಕರುಗಳು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ಅ.21 ಬೆಳಗ್ಗೆ 11 ಗಂಟೆಗೆ ವೀಕ್ಷಕ ಟಿ.ಎಂ.ಶಾಹಿದ್ ಅವರು ಪೊನ್ನಂಪೇಟೆ ಬ್ಲಾಕ್ ಮತ್ತು ಮಧ್ಯಾಹ್ನ 3 ಗಂಟೆಗೆ ವಿರಾಜಪೇಟೆ ಬ್ಲಾಕ್ಗೆ ಭೇಟಿ ನೀಡಲಿದ್ದಾರೆ.
ಅ.24 ರಂದು ವೀಕ್ಷಕ ವೆಂಕಪ್ಪಗೌಡ ಅವರು ಬೆಳಗ್ಗೆ 11 ಗಂಟೆಗೆ ಸೋಮವಾರಪೇಟೆ ಬ್ಲಾಕ್, ಮಧ್ಯಾಹ್ನ 3 ಗಂಟೆಗೆ ಕುಶಾಲನಗರ ಬ್ಲಾಕ್, ಅ.26 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಬ್ಲಾಕ್ ಹಾಗೂ ಮಧ್ಯಾಹ್ನ 3 ಗಂಟೆಗೆ ನಾಪೊಕ್ಲು ಬ್ಲಾಕ್ಗಳಿಗೆ ಭೇಟಿ ನೀಡಲಿದ್ದಾರೆ.
ಈ ಬ್ಲಾಕ್ಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಎಲ್ಲಾ ಮುಂಚೂಣಿ ಘಟಕ ಮತ್ತು ವಲಯ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರುಗಳು ವೀಕ್ಷಕರು ಆಗಮಿಸುವ ಸಂದರ್ಭ ಹಾಜರಿರಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಭೇಟಿ ಸ್ಥಳವನ್ನು ಆಯಾ ಬ್ಲಾಕ್ ಅಧ್ಯಕ್ಷರುಗಳು ನಿಗದಿಪಡಿಸಿ ತಿಳಿಸಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…