Advertisement
ಸುದ್ದಿಗಳು

60 ಗಂಟೆಯಲ್ಲಿ 355 ಮಿಮೀ ಮಳೆ…! ಮಳೆಗೆ ನಮ್ಮಲ್ಲಿ ಏನೇನಾಯಿತು ?

Share

ಸುಳ್ಯ: ಮುಂಗಾರು ಬಿರುಸುಗೊಂಡಿದ್ದು ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಸೋಮವಾರ ರಾತ್ರಿಯಿಂದ ಆರಂಭಗೊಂಡ ಭಾರೀ ಮಳೆ ಮಂಗಳವಾರ ದಿನಪೂರ್ತಿ ಮುಂದುವರಿಯಿತು. ಮಂಗಳವಾರ ಬೆಳಿಗ್ಗೆ ಸ್ವಲ್ಪ ಹೊತ್ತು ಬಿಡುವು ನೀಡಿದ ಮಳೆ 11 ಗಂಟೆಯ ವೇಳೆಗೆ ಬಿರುಸುಗೊಂಡಿತು. 60 ಗಂಟೆಯಲ್ಲಿ  355 ಮಿಮೀ ಮಳೆಯಾಗಿದೆ. ಜೂನ್ ತಿಂಗಳು ಪೂರ್ತಿ ಬಂದ  ಮಳೆ ಈಗ ಕೇವಲ 60 ಗಂಟೆಯಲ್ಲಿ  ಸುರಿದಿದೆ.  ಹೀಗಾಗಿ ಜಿಲ್ಲೆಯ ವಿವಿದೆಡೆ ಅವಾಂತರ ಸೃಷ್ಟಿಸಿದೆ.

ಸುಳ್ಯ ತಾಲೂಕಿನಾದ್ಯಂತ ಎಲ್ಲೆಡೆ ಭಾರೀ ಮಳೆ ಸುರಿದಿದೆ. ಕತ್ತಲು ಕವಿದು ನಿರಂತವಾಗಿ ಎಡೆ ಬಿಡದೆ ಸುರಿದ ಜಡಿ ಮಳೆ ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿತು. ಜನರು ಮನೆಯಿಂದ ಹೊರ ಬರಲಾಗದ ರೀತಿಯಲ್ಲಿ ಮಳೆ ಮತ್ತು ಶೀತ ಗಾಳಿ ಬೀಸುತ್ತಿತ್ತು. ಮಧ್ಯಾಹ್ನದ ಬಳಿಕ ಮಳೆ ಮತ್ತಷ್ಟು ಬಿರುಸಾಯಿತು. ಹೀಗಾಗಿ ವಾತಾವರಣ ಶೀತಮಯವಾಗಿದೆ. ಪಯಸ್ವಿನಿ ಸೇರಿದಂತೆ ನದಿ, ಹಳ್ಳ ಕೊಳ್ಳಗಳಲ್ಲಿ ನೀರಿನ ಪ್ರಮಾಣ ಅಧಿಕವಾಗಿದೆ. ಮಳೆಯಿಂದಾಗಿ ಅಲ್ಲಲ್ಲಿ ಕೃಷಿ ತೋಟಗಳಿಗೆ ನೀರು ನುಗ್ಗಿದ, ಗಾಳಿ ಮಳೆಗೆ ಮರಗಳು ಧರಾಶಾಹಿಯಾಗಿ ರಸ್ತೆ ತಡೆ ಉಂಟಾದ ಘಟನೆಗಳು ನಡೆದಿದೆ. ಪ್ರತೀ ಬಾರಿಯೂ ಮಳೆಯಂತೆ ಈ ಬಾರಿಯೂ ಬರೆ ಕುಸಿತ, ಪಾಲ ಕುಸಿತ, ಗೋಡೆ ಕುಸಿತ   ಹಲವು ಕಡೆ ನಡೆದಿದೆ. ಯಾವುದೇ ಆತಂಕಕಾರಿ ದುರ್ಘಟನೆ ನಡೆಯಲಿಲ್ಲ. ಮಳೆಯಿಂದ ಅಲ್ಲಲ್ಲಿ ವಿದ್ಯುತ್ ವ್ಯತ್ಯಯಗೊಂಡಿತು. ಸುಳ್ಯ ನಗರದಲ್ಲಿ ಸೋಮವಾರ ರಾತ್ರಿಯಿಂದಲೇ ವಿದ್ಯುತ್ ವ್ಯತ್ಯಯಗೊಂಡಿತ್ತು. ಚರಂಡಿಗಳು ಬ್ಲಾಕ್ ಆಗಿ ಅಲ್ಲಲ್ಲಿ ನೀರು ರಸ್ತೆಯಲ್ಲಿಯೇ ಹರಿದು ರಸ್ತೆಗಳೂ ಹೊಳೆಯಂತಾಗಿತ್ತು. ಇದರಿಂದ ಸಾರ್ವಜನಿಕರು, ವಾಹನ ಸವಾರರು ಸಮಸ್ಯೆಯಲ್ಲಿ ಸಿಲುಕಿಕೊಂಡರು.

ಮಳೆ ಬಂದರೆ ರಸ್ತೆಯಲ್ಲಿಯೇ ಹರಿಯುವ ನೀರು:

ಮಳೆ ಬಿರುಸುಗೊಂಡಾಗ ಸುಳ್ಯ ನಗರದ ದುಸ್ಥಿತಿಯೂ ಆರಂಭಗೊಂಡಿದೆ. ಕೆಸರು ಮಿಶ್ರಿತ ಮಳೆಯ ನೀರು ರಸ್ತೆಯಲ್ಲಿಯೇ ಹರಿಯುತಿದೆ. ನಗರದಲ್ಲಿ ಬಹುತೇಕ ಕಡೆಗಳಲ್ಲಿ ಸಮರ್ಪಕವಾದ ಚರಂಡಿಗಳೇ ಇಲ್ಲ. ಮಳೆ ಬಂದರೆ ನೀರು ಸರಿಯಾಗಿ ಚರಂಡಿಗೆ ಸೇರದೆ ರಸ್ತೆಯಲ್ಲಿಯೇ ಹರಿಯುತ್ತಿದ್ದು ರಸ್ತೆ ತೋಡಿನಂತಾಗುತ್ತದೆ. ಸುಳ್ಯ ನಗರದ ಹಳೆಗೇಟಿನಲ್ಲಿ ರಸ್ತೆಯ ಮಧ್ಯೆ ಕೆಸರು ನೀರು ಶೇಖರಣೆಯಾಗಿದ್ದು ಹಳ್ಳದಂತೆ ಭಾಸವಾಗುತ್ತಿತ್ತು. ವಾಹನಗಳು ಸಂಚರಿಸುವಾಗ ಕೆಸರು ನೀರು ಪರಿಸರವಿಡೀ ಕಾರಂಜಿಯಂತೆ ಚಿಮ್ಮುತಿದೆ. ಪಾದಚಾರಿಗಳ ಮೇಲೂ ಕೆಸರ ನೀರ ಸಿಂಚನವಾಗುತಿದೆ. ಮಳೆ ಬಂದ ಕೂಡಲೇ ಇಲ್ಲಿ ರಸ್ತೆಯ ಮೇಲೆ ಕೆಸರು ನೀರಿನ ಕೃತಕ ಕೆರೆ ನಿರ್ಮಾಣವಾಗುತ್ತದೆ.

 

 

ಹರಿವು ಹೆಚ್ಚಿಸಿದ ಗೌರಿ ಹೊಳೆ, ಮುಳುಗಿದ ಕಿಂಡಿ ಅಣೆಕಟ್ಟು
ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬೆಳ್ಳಾರೆಯಿಂದ ಪೆರುವಾಜೆ-ಕುಂಡಡ್ಕ -ನಾಡೋಳಿ-ಸಾರಕರೆ-ಸರ್ವೆ-ಮೂಲಕ ವೀರಮಂಗಲ ಮೂಲಕ ಕುಮಾರಧಾರ ತಲುಪುವ ಗೌರಿ ಹೊಳೆ ತನ್ನ ಹರಿವು ಹೆಚ್ಚಿಸಿಕೊಂಡಿದೆ. ಹೀಗೆಯೇ ನಿರಂತರವಾಗಿ ಮಳೆ ಸುರಿದರೆ ಹೊಳೆತಟದ ಕೃಷಿತೋಟಗಳು ಮುಳುಗಡೆಯಾಗಲಿದೆ.ಅಲ್ಲದೆ ಕಡಬ ತಾಲೂಕಿನ ಪಾಲ್ತಾಡಿ ಗ್ರಾಮ ಹಾಗೂ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮವನ್ನು ಜೋಡಿಸುವಲ್ಲಿ ಗೌರಿಹೊಳೆಗೆ ಅಡ್ಡಲಾಗಿರುವ ಕುಂಡಡ್ಕ ಕಿರು ಸೇತುವೆಯಲ್ಲಿ ನೀರು ಅಪಾಯಕಾರಿ ಮಟ್ಟದಲ್ಲಿ ಇದೆ.ಆಲ್ಲದೆ ತೀರಾ ಶಿಥಿಲಾವಸ್ಥೆಗೆ ತಲುಪಿ ಕುಸಿಯುವ ಹಂತಕ್ಕೆ ಬಂದಿರುವ ಸೇತುವೆಯೂ ಕೊಚ್ಚಿಹೋಗುವ ಭೀತಿಯನ್ನು ಜನತೆ ಎದುರಿಸುತ್ತಿದ್ದಾರೆ. ಈ ಸೇತುವೆ ಕುಸಿದು ಸಂಪರ್ಕ ಕಡಿತವಾದರೆ ಪಾಲ್ತಾಡಿ ಭಾಗದಿಂದ ಸವಣೂರು ,ಕಾಣಿಯೂರು ,ಪೆರುವಾಜೆಗೆ ಹೋಗಲು ಪುತ್ತೂರು ಅಥವಾ ಬೆಳ್ಳಾರೆ ಮೂಲಕ ಸುತ್ತಿ ಬಳಸಿ ಹೋಗಬೇಕಾದ ಪರಿಸ್ಥಿತಿ ಬರಲಿದೆ. ಬೆಳ್ಳಾರೆಯ ಗೌರಿ ಹೊಳೆಯ ಕೆಳಸೇತುವೆ ಮುಳುಗಡೆಯಾಗಿದ್ದು, ಅಕ್ಕಪಕ್ಕದ ತೋಟಗಳಿಗೆ ನೀರು ನುಗ್ಗಿ ತೋಟವೂ ಜಲಾವೃತ್ತಗೊಂಡಿದೆ. ತೀರಾ ಅಪಾಯಕಾರಿ ಮಟ್ಟದಲ್ಲಿ ನೀರಿನ ಹರಿವಿದೆ

 

 

ತೋಟಕ್ಕೆ ನೀರು ನುಗ್ಗುವ ಭೀತಿ:
ಬೆಳ್ಳಾರೆಯಿಂದ ಪೆರುವಾಜೆ-ಕುಂಡಡ್ಕ -ನಾಡೋಳಿ-ಸಾರಕರೆ-ಸರ್ವೆ-ಮೂಲಕ ವೀರಮಂಗಲ ತನಕವೂ ಹೊಳೆಯ ಎರಡೂ ಬದಿಗಳಲ್ಲಿ ತೋಟಗಳಿದ್ದು,ಮಳೆ ಇದೇ ರೀತಿ ಮುಂದುವರಿದರೆ ತೋಟಕ್ಕೆ ಮಳೆ ನೀರು ನುಗ್ಗುವ ಭೀತಿಯನ್ನು ಕೃಷಿಕರು ಎದುರಿಸುತ್ತಿದ್ದಾರೆ.

 

 

ವೀರಮಂಗಲ : ಗುಡ್ಡ ನಿರ್ಮಾಣ ಹಂತದ ಮನೆಗೆ ಹಾನಿ:
ನಿರಂತರ ಸುರಿಯುತ್ತಿರುವ ಮಳೆಯಿಂದ ಗುಡ್ಡ ಕುಸಿದು ನಿರ್ಮಾಣಹಂತದಲ್ಲಿದ್ದ ಮನೆಯೊಂದಕ್ಕೆ ಹಾನಿಯಾಗಿ ಲಕ್ಷಾಂತರ ರೂ.ನಷ್ಟ ಸಂಭವಿಸಿದ ಘಟನೆ ಶಾಂತಿಗೋಡು ಗ್ರಾಮದ ವೀರಮಂಗಲ ಎಂಬಲ್ಲಿ ನಡೆದಿದೆ. ವೀರಮಂಗಲ ಹೊಸಮನೆ ನಿವಾಸಿ ಚಂದ್ರಶೇಖರ ಗೌಡರ ನಿರ್ಮಾಣ ಹಂತದ ಮನೆ ಮೇಲೆಯೇ ಗುಡ್ಡ ಕುಸಿದ ಪರಿಣಾಮ  ನಷ್ಟ ಸಂಭವಿಸಿದೆ . ಜೆಸಿಬಿಯಿಂದ ಮಣ್ಣು ತೆರವು ಕಾರ್ಯ ಮಾಡಲಾಗುತ್ತಿದೆ.

 

ವೀರಮಂಗಲ-ಕೈಲಾಜೆ ರಸ್ತೆ ಕುಸಿತ:
ಇದೇ ಪರಿಸರದಲ್ಲಿರುವ ವೀರಮಂಗಲ-ಕೈಲಾಜೆ ಸಣಪರ್ಕಿಸುವ ರಸ್ತೆಯೂ ಮಳೆಯಿಂದಾಗಿ ಕುಸಿಯುತ್ತಿದ್ದು,ಸಂಪರ್ಕ ಕಡಿತದ ಭೀತಿ ಎದುರಾಗಿತ್ತು.ಕಳೆದ ಬಾರಿ ಕೂಡ ನಿರಂತರ ಮಳೆಯಿಂದಾಗಿ ವೀರಮಂಗಲದ ಹಲವೆಡೆ ಕುಮಾರಾಧಾರ ನದಿ ನೀರು ನುಗ್ಗಿ ಕೆಲವು ಮನೆಗಳು ದ್ವೀಪದಂತಾಗಿತ್ತು.

 

ಕುಮಾರಧಾರಾ ಸ್ನಾನಘಟ್ಟ ಮುಳುಗಡೆ: ಭಾರೀ ಮಳೆಯ ಕಾರಣದಿಂದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು  ಇಲ್ಲಿ ಕೈಗೊಳ್ಳಲಾಗಿದೆ.

 

ಹೊಸ್ಮಠ ಹಳೆ ಮುಳುಗು ಸೇತುವೆ ಮುಳುಗಡೆ :
ಕಳೆದರಡು ದಿನಗಳಿಂದ ಈ ಭಾಗದಲ್ಲಿ ನಿರಂತರ ಧಾರಕಾರ ಮಳೆಯಾಗುತ್ತಿದ್ದು, ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಎಂಬಲ್ಲಿ ಗುಂಡ್ಯ ಹೊಳೆಗೆ ಅಡ್ಡಲಾಗಿರುವ ಹಳೆಯದಾದ  ಮುಳುಗು ಸೇತುವೆ ಕಳೆದ ರಾತ್ರಿಯಿಂದ ಹಲವು ಭಾರಿ ಮುಳುಗಡೆಯಾಗಿ ತೆರವುಗೊಳ್ಳುತ್ತಿದೆ. ಸೇತುವೆ ಮೇಲೆ ಬೃಹತ್ ಮರದ ದಿಮ್ಮಿಗಳು, ಕಸಕಡ್ಡಿಗಳು ಸಂಗ್ರವಾಗಿದೆ. ಈ ಹಳೆ ಸೇತುವೆ ಪಕ್ಕದಲ್ಲಿರುವ   ನೂತನ ಸೇತುವೆ ಈ ಭಾರಿ ಸಂಚಾರಕ್ಕೆ ಮುಕ್ತವಾಗಿದೆ.  ಹಾಗಾಗಿ ಸುಗಮ ಸಂಚಾರಕ್ಕೆ ತೊಡಕಾಗುವುದಿಲ್ಲ.
ದೇವಸ್ಥಾನದ ಒಳಭಾಗ ಜಲಾವೃತ:  ಧಾರಾಕಾರ ಮಳೆಗೆ ಪೆರುವಾಜೆಯ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ಒಳಭಾಗದ ನೆಲವು ಜಲಾವೃತಗೊಂಡಿದೆ.
ಸುಳ್ಯದಲ್ಲಿ ಭಾರೀ ಮಳೆಗೆ ಸುಳ್ಯದ ಗುರುಂಪು ಎಂಬಲ್ಲಿ ಗುಡ್ಡ ಜರಿದು ರಾಶಿಗಟ್ಟಲೆ ಮಣ್ಣು ಮನೆಯ ಒಳಗೆ ಬಂದಿದೆ. ಸ್ಥಳೀಯರಿಂದ ತೆರವು ಕಾರ್ಯ ನಡೆಯುತ್ತಿದೆ. ಸುಳ್ಯ ದ ಗುರಂಪುವಿನಲ್ಲಿ ಅಬೂಬಕರ್ ಎಂಬವರ ಮನೆಗೆ ಬಿರುಸಿನ ಗಾಳಿ ಮಳೆಗೆ ಮನೆಯ ಒಳಗೆ ಬರೆ ಜರೆದು  ಹಾನಿಗೊಳಗಾಗಿದೆ.  ನಗರ ಎಸ್ ಡಿಪಿ ಐ ಕಾರ್ಯಕರ್ತರು  ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಸುಳ್ಯದಲ್ಲಿ  ಭಾರೀ ಮಳೆಗೆ ಸುಳ್ಯ ನಗರದ ಬೋರುಗುಡ್ಡೆಯಲ್ಲಿ ರಫೀಕ್ ಪಡು ಅವರ ಮನೆಯ ಅಂಗಳದ ಕಂಪೌಂಡ್ ಕುಸಿದು ಬಿದ್ದಿದೆ.
ಸುಳ್ಯದ 10ನೇ ವಾರ್ಡ್ ನ ರಂಜಿತ್ ಕುಮಾರ್ ಅವರ ಮನೆ ಬಳಿ  ಬರೆ ಕುಸಿತವಾಗಿದೆ. 4 ಮರಗಳು ಧರೆಗೆ ಒಂದು ಮನೆಯ ತಾರಸಿಗೆ ಹಾನಿಯಾಗಿದೆ.  ನಗರಪಂಚಾಯತ್ ವತಿಯಿಂದ ಅಪಾಯಕಾರಿ ಮರಗಳ ತೆರವು ಕಾರ್ಯಕ್ಕೆ ಮುಂದಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

16 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

23 hours ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

3 days ago