Advertisement
MIRROR FOCUS

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

Share

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯವು 32,514 ದಶಲಕ್ಷ ಲೀಟರ್‌ ಗಳಾಗಿದೆ. ಕಳೆದ ಏಪ್ರೀಲ್-2025 ರಲ್ಲಿ ಕೆರೆಗಳ ಒಟ್ಟು ನೀರಿನ ಸಂಗ್ರಹಣೆಯ ಪ್ರಮಾಣವು 10,595 ದಶಲಕ್ಷ ಲೀಟರ್ ಗಳಿಗೆ ಕುಸಿದು ಕೇವಲ 3 ಕೆರೆಗಳಲ್ಲಿ ಮಾತ್ರ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿತ್ತು. ಸುಮಾರು 63 ಕೆರೆಗಳಲ್ಲಿ ನೀರಿಲ್ಲದೆ ಒಣಗುವ ಹಂತದಲ್ಲಿತ್ತು.  ನಗರದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಒಟ್ಟು 26,056 ದಶಲಕ್ಷ ಲೀಟರ್‌ ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದ್ದು, ಏಪ್ರೀಲ್-2025ಕ್ಕೆ ಹೋಲಿಸಿದರೆ ನೀರಿನ ಪ್ರಮಾಣ ಸಾಕಷ್ಟು ಹೆಚ್ಚಾಗಿದೆ. ಇದೀಗ ಪಾಲಿಕೆ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿರುತ್ತವೆ.  ತುಂಬಿರುವ ಎಲ್ಲಾ ಕೆರೆಗಳ ತೂಬುಗಳ ಬಳಿ ಹಾಗೂ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ. ಕೆರೆಗಳು ನೀರು ಹೋಗುವ ಕಾಲುವೆಗಳಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರೆ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಗಳನ್ನು ನಿಯೋಜಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

3 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

7 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

16 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

16 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

16 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

16 hours ago