Advertisement
MIRROR FOCUS

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

Share

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯವು 32,514 ದಶಲಕ್ಷ ಲೀಟರ್‌ ಗಳಾಗಿದೆ. ಕಳೆದ ಏಪ್ರೀಲ್-2025 ರಲ್ಲಿ ಕೆರೆಗಳ ಒಟ್ಟು ನೀರಿನ ಸಂಗ್ರಹಣೆಯ ಪ್ರಮಾಣವು 10,595 ದಶಲಕ್ಷ ಲೀಟರ್ ಗಳಿಗೆ ಕುಸಿದು ಕೇವಲ 3 ಕೆರೆಗಳಲ್ಲಿ ಮಾತ್ರ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿತ್ತು. ಸುಮಾರು 63 ಕೆರೆಗಳಲ್ಲಿ ನೀರಿಲ್ಲದೆ ಒಣಗುವ ಹಂತದಲ್ಲಿತ್ತು.  ನಗರದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಒಟ್ಟು 26,056 ದಶಲಕ್ಷ ಲೀಟರ್‌ ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದ್ದು, ಏಪ್ರೀಲ್-2025ಕ್ಕೆ ಹೋಲಿಸಿದರೆ ನೀರಿನ ಪ್ರಮಾಣ ಸಾಕಷ್ಟು ಹೆಚ್ಚಾಗಿದೆ. ಇದೀಗ ಪಾಲಿಕೆ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿರುತ್ತವೆ.  ತುಂಬಿರುವ ಎಲ್ಲಾ ಕೆರೆಗಳ ತೂಬುಗಳ ಬಳಿ ಹಾಗೂ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ. ಕೆರೆಗಳು ನೀರು ಹೋಗುವ ಕಾಲುವೆಗಳಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರೆ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಗಳನ್ನು ನಿಯೋಜಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

2 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

13 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

14 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago