Advertisement
MIRROR FOCUS

ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್

Share

ಕೃಷಿ ಪಂಪ್ ಸೆಟ್‌ಗಳಿಗೆ ದಿನದ 7 ತಾಸು ತ್ರಿ-ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ……… ಮುಂದೆ ಓದಿ…….

ದಾವಣಗೆರೆ ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಇಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ ಎಂದು ಸ್ಪಷ್ಟಪಡಿಸಿದರು.  ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 18,500 ಮೆಗಾವ್ಯಾಟ್ ಬೇಡಿಕೆ ಇದೆ. ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇಕಡ 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಳವಾಗಲಿದೆ ಎಂದು ಸಚಿವ ಕೆ.ಜೆ. ಜಾರ್ಜ್ ಮಾಹಿತಿ ನೀಡಿದರು.

ಬೇಸಿಗೆಯಲ್ಲಿ ಸಂಭವನೀಯ ವಿದ್ಯುತ್ ಕೊರತೆ ನಿಭಾಯಿಸುವ ನಿಟ್ಟಿನಲ್ಲಿ ಹೊರ ರಾಜ್ಯಗಳಿಂದ ವಿದ್ಯುತ್ ವಿನಿಮಯಕ್ಕೆ ಆದ್ಯತೆ ನೀಡಲಾಗಿದೆ ಎಂದ ಅವರು, ಉತ್ತರ ಪ್ರದೇಶ ಮತ್ತು ಪಂಜಾಬ್ ಜೊತೆ ಈ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಬಾರಿ ಬರಗಾಲ ಇದ್ದರೂ 1 ತಿಂಗಳು ಮಾತ್ರ ವಿದ್ಯುತ್ ಪೂರೈಕೆ ಕಡಿಮೆಯಾಗಿತ್ತು. ಆದರೆ ಈ ಬಾರಿ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುವುದು. ಈಗಾಗಲೇ 18,500 ಮೆಗಾವ್ಯಾಟ್ ಬೇಡಿಕೆ ಹೆಚ್ಚಿದ್ದು, ಇಲಾಖೆಯಿಂದಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

5 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

19 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

19 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

20 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago