ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 70% ರಷ್ಟು ಕೆಲಸ ನೀಡುವ ಉದ್ದೇಶದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆಯಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶ ಒದಗಿಸುವ ಉದ್ದೇಶದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆಯಲು ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಉದ್ಯಮ ಚಟುವಟಿಕೆ ಆರಂಭಿಸುವ ಪ್ರತಿ ಸಂಸ್ಥೆಯು ಸ್ಥಳೀಯ ಕನ್ನಡಿಗರಿಗೆ ಶೇ. 70 ರಷ್ಟು ಉದ್ಯೋಗ ನೀಡುವುದು ಕಡ್ಡಾಯ. ಈ ಕಾನೂನು ಉಲ್ಲಂಘಿಸಿದ ಉದ್ದಿಮೆಗೆ ರಾಜ್ಯ ಸರ್ಕಾರದ ಸೌಲಭ್ಯ ಹಾಗೂ ರಿಯಾಯಿತಿಗಳನ್ನು ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…