ಸಾಂದರ್ಭಿಕ ಚಿತ್ರ
ಇದು ಮಾವಿನ ಕಾಲ.. ಎಲ್ಲೆಲ್ಲೂ ಹಣ್ಣಿನ ರಾಜನದ್ದೇ ಕಾರುಬಾರು. ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರಲ್ಲಿ ರಸಭರಿತ ತರಹೇವಾರಿ ಮಾವಿನ ಹಣ್ಣುಗಳು. ನೋಡಿದವರು ಯಾರು ಒಂದು ಕೆಜಿ ಕೊಳ್ಳದೆ ಇರಲಾರರು. ಆದರೆ ಈ ಮಾವಿನ ಹಣ್ಣುಗಳು ಎಷ್ಟು ಸೇಫ್ಟಿ ಅನ್ನೋದೆ ಪ್ರಶ್ನೆ. ಮಾರುಕಟ್ಟೆಯಲ್ಲಿ ಬರುವ ಬಹುತೇಕ ಹಣ್ಣುಗಳನ್ನು ಕೆಮಿಕಲ್ ಹಾಕಿ ಹಣ್ಣು ಮಾಡಲಾಗುತ್ತದೆ. ಕಳೆದ ವರ್ಷ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಚೆನ್ನೈನ ಲ್ಲಿ 7000 ಕೆಜಿ ಮಾವಿನಹಣ್ಣು ವಶಪಡಿಸಿಕೊಂಡಿದ್ದರು.
ಕಳೆದ ವರ್ಷ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಚೆನ್ನೈನ ಕೊಯಂಬೆಡು ಮಾರುಕಟ್ಟೆಯಲ್ಲಿ ದಾಳಿ ನಡೆಸಿ ಬರೋಬ್ಬರಿ 7 ಸಾವಿರ ಕೆಜಿಯಷ್ಟು ಕೃತಕವಾಗಿ ಮಾಗಿಸಿದ ಮಾವಿನ ಹಣ್ಣನ್ನು ವಶಪಡಿಸಿಕೊಂಡಿದ್ದರು. ಇನ್ನೀಗ ಮಳೆಯಾಗುವ ಆರಂಭದಲ್ಲಿ ಮಾವು ಕಟಾವು ಮಾಡಿ ರಾಸಾಯನಿಕ ಬಳಸಿ ಮಾಗಿಸಿದ ಮಾವಿನ ಹಣ್ಣುಗಳ ಮಾರಾಟ ಮಾಡುವ ದೊಡ್ಡ ಜಾಲ ಸಕ್ರಿಯವಾಗುತ್ತದೆ. ಕೃತಕವಾಗಿ ಮಾಗಿದ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಏರುಪೇರುಗಳಾಗುತ್ತವೆ. ಹೀಗಾಗಿ ರಾಸಾಯನಿಕಗಳಿಂದ ಮಾಗಿಸಿದ ಹಣ್ಣುಗಳ ಮಾರಾಟವನ್ನು ಪರಿಶೀಲಿಸಲು ಮಾರುಕಟ್ಟೆ ಪ್ರದೇಶಗಳಲ್ಲಿ ತಪಾಸಣೆ ಕೈಗೊಳ್ಳುವಂತೆ ಆಹಾರ ಸುರಕ್ಷತಾ ಇಲಾಖೆಗಳು ಸೂಚಿಸಿದರೂ, ಇಲಾಖೆಗಳ ಕಣ್ಣು ತಪ್ಪಿಸಿ ಈ ಮಾರಾಟ ಜಾಲ ಇರುತ್ತದೆ.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…