ಸಾಂದರ್ಭಿಕ ಚಿತ್ರ
ಇದು ಮಾವಿನ ಕಾಲ.. ಎಲ್ಲೆಲ್ಲೂ ಹಣ್ಣಿನ ರಾಜನದ್ದೇ ಕಾರುಬಾರು. ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರಲ್ಲಿ ರಸಭರಿತ ತರಹೇವಾರಿ ಮಾವಿನ ಹಣ್ಣುಗಳು. ನೋಡಿದವರು ಯಾರು ಒಂದು ಕೆಜಿ ಕೊಳ್ಳದೆ ಇರಲಾರರು. ಆದರೆ ಈ ಮಾವಿನ ಹಣ್ಣುಗಳು ಎಷ್ಟು ಸೇಫ್ಟಿ ಅನ್ನೋದೆ ಪ್ರಶ್ನೆ. ಮಾರುಕಟ್ಟೆಯಲ್ಲಿ ಬರುವ ಬಹುತೇಕ ಹಣ್ಣುಗಳನ್ನು ಕೆಮಿಕಲ್ ಹಾಕಿ ಹಣ್ಣು ಮಾಡಲಾಗುತ್ತದೆ. ಕಳೆದ ವರ್ಷ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಚೆನ್ನೈನ ಲ್ಲಿ 7000 ಕೆಜಿ ಮಾವಿನಹಣ್ಣು ವಶಪಡಿಸಿಕೊಂಡಿದ್ದರು.
ಕಳೆದ ವರ್ಷ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಚೆನ್ನೈನ ಕೊಯಂಬೆಡು ಮಾರುಕಟ್ಟೆಯಲ್ಲಿ ದಾಳಿ ನಡೆಸಿ ಬರೋಬ್ಬರಿ 7 ಸಾವಿರ ಕೆಜಿಯಷ್ಟು ಕೃತಕವಾಗಿ ಮಾಗಿಸಿದ ಮಾವಿನ ಹಣ್ಣನ್ನು ವಶಪಡಿಸಿಕೊಂಡಿದ್ದರು. ಇನ್ನೀಗ ಮಳೆಯಾಗುವ ಆರಂಭದಲ್ಲಿ ಮಾವು ಕಟಾವು ಮಾಡಿ ರಾಸಾಯನಿಕ ಬಳಸಿ ಮಾಗಿಸಿದ ಮಾವಿನ ಹಣ್ಣುಗಳ ಮಾರಾಟ ಮಾಡುವ ದೊಡ್ಡ ಜಾಲ ಸಕ್ರಿಯವಾಗುತ್ತದೆ. ಕೃತಕವಾಗಿ ಮಾಗಿದ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಏರುಪೇರುಗಳಾಗುತ್ತವೆ. ಹೀಗಾಗಿ ರಾಸಾಯನಿಕಗಳಿಂದ ಮಾಗಿಸಿದ ಹಣ್ಣುಗಳ ಮಾರಾಟವನ್ನು ಪರಿಶೀಲಿಸಲು ಮಾರುಕಟ್ಟೆ ಪ್ರದೇಶಗಳಲ್ಲಿ ತಪಾಸಣೆ ಕೈಗೊಳ್ಳುವಂತೆ ಆಹಾರ ಸುರಕ್ಷತಾ ಇಲಾಖೆಗಳು ಸೂಚಿಸಿದರೂ, ಇಲಾಖೆಗಳ ಕಣ್ಣು ತಪ್ಪಿಸಿ ಈ ಮಾರಾಟ ಜಾಲ ಇರುತ್ತದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…