ಸಾಂದರ್ಭಿಕ ಚಿತ್ರ
ಇದು ಮಾವಿನ ಕಾಲ.. ಎಲ್ಲೆಲ್ಲೂ ಹಣ್ಣಿನ ರಾಜನದ್ದೇ ಕಾರುಬಾರು. ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರಲ್ಲಿ ರಸಭರಿತ ತರಹೇವಾರಿ ಮಾವಿನ ಹಣ್ಣುಗಳು. ನೋಡಿದವರು ಯಾರು ಒಂದು ಕೆಜಿ ಕೊಳ್ಳದೆ ಇರಲಾರರು. ಆದರೆ ಈ ಮಾವಿನ ಹಣ್ಣುಗಳು ಎಷ್ಟು ಸೇಫ್ಟಿ ಅನ್ನೋದೆ ಪ್ರಶ್ನೆ. ಮಾರುಕಟ್ಟೆಯಲ್ಲಿ ಬರುವ ಬಹುತೇಕ ಹಣ್ಣುಗಳನ್ನು ಕೆಮಿಕಲ್ ಹಾಕಿ ಹಣ್ಣು ಮಾಡಲಾಗುತ್ತದೆ. ಕಳೆದ ವರ್ಷ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಚೆನ್ನೈನ ಲ್ಲಿ 7000 ಕೆಜಿ ಮಾವಿನಹಣ್ಣು ವಶಪಡಿಸಿಕೊಂಡಿದ್ದರು.
ಕಳೆದ ವರ್ಷ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಚೆನ್ನೈನ ಕೊಯಂಬೆಡು ಮಾರುಕಟ್ಟೆಯಲ್ಲಿ ದಾಳಿ ನಡೆಸಿ ಬರೋಬ್ಬರಿ 7 ಸಾವಿರ ಕೆಜಿಯಷ್ಟು ಕೃತಕವಾಗಿ ಮಾಗಿಸಿದ ಮಾವಿನ ಹಣ್ಣನ್ನು ವಶಪಡಿಸಿಕೊಂಡಿದ್ದರು. ಇನ್ನೀಗ ಮಳೆಯಾಗುವ ಆರಂಭದಲ್ಲಿ ಮಾವು ಕಟಾವು ಮಾಡಿ ರಾಸಾಯನಿಕ ಬಳಸಿ ಮಾಗಿಸಿದ ಮಾವಿನ ಹಣ್ಣುಗಳ ಮಾರಾಟ ಮಾಡುವ ದೊಡ್ಡ ಜಾಲ ಸಕ್ರಿಯವಾಗುತ್ತದೆ. ಕೃತಕವಾಗಿ ಮಾಗಿದ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಏರುಪೇರುಗಳಾಗುತ್ತವೆ. ಹೀಗಾಗಿ ರಾಸಾಯನಿಕಗಳಿಂದ ಮಾಗಿಸಿದ ಹಣ್ಣುಗಳ ಮಾರಾಟವನ್ನು ಪರಿಶೀಲಿಸಲು ಮಾರುಕಟ್ಟೆ ಪ್ರದೇಶಗಳಲ್ಲಿ ತಪಾಸಣೆ ಕೈಗೊಳ್ಳುವಂತೆ ಆಹಾರ ಸುರಕ್ಷತಾ ಇಲಾಖೆಗಳು ಸೂಚಿಸಿದರೂ, ಇಲಾಖೆಗಳ ಕಣ್ಣು ತಪ್ಪಿಸಿ ಈ ಮಾರಾಟ ಜಾಲ ಇರುತ್ತದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"