Advertisement
ಸುದ್ದಿಗಳು

ರಾಸಾಯನಿಕ ಬಳಕೆಯ ಮಾವು ಬರುತ್ತಿದೆ ಎಚ್ಚರ ಇರಲಿ…! | ನೀವೇ ಪತ್ತೆ ಮಾಡಿ ಅಂತಹ ಮಾವಿನ ಹಣ್ಣು…|

Share

ಇದು ಮಾವಿನ ಕಾಲ.. ಎಲ್ಲೆಲ್ಲೂ ಹಣ್ಣಿನ ರಾಜನದ್ದೇ ಕಾರುಬಾರು. ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರಲ್ಲಿ ರಸಭರಿತ ತರಹೇವಾರಿ ಮಾವಿನ ಹಣ್ಣುಗಳು. ನೋಡಿದವರು ಯಾರು ಒಂದು ಕೆಜಿ ಕೊಳ್ಳದೆ ಇರಲಾರರು. ಆದರೆ ಈ ಮಾವಿನ ಹಣ್ಣುಗಳು ಎಷ್ಟು ಸೇಫ್ಟಿ ಅನ್ನೋದೆ ಪ್ರಶ್ನೆ. ಮಾರುಕಟ್ಟೆಯಲ್ಲಿ ಬರುವ ಬಹುತೇಕ ಹಣ್ಣುಗಳನ್ನು ಕೆಮಿಕಲ್ ಹಾಕಿ ಹಣ್ಣು ಮಾಡಲಾಗುತ್ತದೆ. ಕಳೆದ ವರ್ಷ  ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಚೆನ್ನೈನ ಲ್ಲಿ 7000 ಕೆಜಿ ಮಾವಿನಹಣ್ಣು ವಶಪಡಿಸಿಕೊಂಡಿದ್ದರು. 

ಕಳೆದ ವರ್ಷ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಚೆನ್ನೈನ ಕೊಯಂಬೆಡು ಮಾರುಕಟ್ಟೆಯಲ್ಲಿ  ದಾಳಿ ನಡೆಸಿ ಬರೋಬ್ಬರಿ 7 ಸಾವಿರ ಕೆಜಿಯಷ್ಟು ಕೃತಕವಾಗಿ ಮಾಗಿಸಿದ ಮಾವಿನ ಹಣ್ಣನ್ನು ವಶಪಡಿಸಿಕೊಂಡಿದ್ದರು. ಇನ್ನೀಗ ಮಳೆಯಾಗುವ ಆರಂಭದಲ್ಲಿ ಮಾವು ಕಟಾವು ಮಾಡಿ  ರಾಸಾಯನಿಕ ಬಳಸಿ ಮಾಗಿಸಿದ ಮಾವಿನ ಹಣ್ಣುಗಳ ಮಾರಾಟ ಮಾಡುವ ದೊಡ್ಡ ಜಾಲ ಸಕ್ರಿಯವಾಗುತ್ತದೆ.  ಕೃತಕವಾಗಿ ಮಾಗಿದ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಏರುಪೇರುಗಳಾಗುತ್ತವೆ. ಹೀಗಾಗಿ ರಾಸಾಯನಿಕಗಳಿಂದ ಮಾಗಿಸಿದ ಹಣ್ಣುಗಳ ಮಾರಾಟವನ್ನು ಪರಿಶೀಲಿಸಲು ಮಾರುಕಟ್ಟೆ ಪ್ರದೇಶಗಳಲ್ಲಿ ತಪಾಸಣೆ ಕೈಗೊಳ್ಳುವಂತೆ ಆಹಾರ ಸುರಕ್ಷತಾ ಇಲಾಖೆಗಳು ಸೂಚಿಸಿದರೂ, ಇಲಾಖೆಗಳ ಕಣ್ಣು ತಪ್ಪಿಸಿ ಈ ಮಾರಾಟ ಜಾಲ ಇರುತ್ತದೆ.

ರಾಸಾಯನಿಕವಾಗಿ ಮಾಗಿಸಿದ ಹಣ್ಣುಗಳನ್ನು ಗುರುತಿಸುವುದು ಹೇಗೆ?: ರಾಸಾಯನಿಕವಾಗಿ ಮಾಗಿದ ಮಾವಿನಹಣ್ಣುಗಳು ಅಸ್ವಾಭಾವಿಕವಾಗಿ ಮೃದುವಾದ ಅಥವಾ ಮೆತ್ತಗಿನ ವಿನ್ಯಾಸವನ್ನು ಹೊಂದಿರಬಹುದು. ನಿಧಾನವಾಗಿ ಒತ್ತಿದಾಗ, ನೈಸರ್ಗಿಕವಾಗಿ ಮಾಗಿದ ಮಾವಿನ ಮಾಂಸವು ಸ್ವಲ್ಪಮಟ್ಟಿಗೆ ಒತ್ತಡಕ್ಕೆ ಒಳಗಾಗಬೇಕು. ನೈಸರ್ಗಿಕ ಮಾವಿನಹಣ್ಣುಗಳು ಸಂಪೂರ್ಣವಾಗಿ ಹಣ್ಣಾದಾಗ ಬಲವಾದ, ಸಿಹಿ ಪರಿಮಳವನ್ನು ಹೊಂದಿರುತ್ತವೆ. ರಾಸಾಯನಿಕವಾಗಿ ಮಾಗಿದ ಮಾವಿನಹಣ್ಣುಗಳು ದುರ್ಬಲ ಅಥವಾ ಗಮನಾರ್ಹವಾದ ಪರಿಮಳವನ್ನು ಹೊಂದಿರುವುದಿಲ್ಲ. ಮಾವಿನ ಕಾಂಡದ ತುದಿಯನ್ನು ಪರೀಕ್ಷಿಸಿ. ಇದು ಚಿಕ್ಕದಾದ, ಸುಕ್ಕುಗಟ್ಟಿದ ಕಾಂಡವನ್ನು ಹೊಂದಿದ್ದರೆ, ಅದು ಮಾವು ಸರಿಯಾಗಿ ಹಣ್ಣಾಗಿದೆ ಎಂಬ ಸೂಚನೆಯಾಗಿದೆ. ದೊಡ್ಡದಾದ, ಹಸಿರು ಕಾಂಡಗಳನ್ನು ಹೊಂದಿರುವ ಮಾವಿನಹಣ್ಣುಗಳನ್ನು ತಪ್ಪಿಸಿ ಏಕೆಂದರೆ ಅವು ಇನ್ನೂ ಹಣ್ಣಾಗಿಲ್ಲ ಎಂದರ್ಥ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

20 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago