7.12 ಲಕ್ಷ ಮಲೆನಾಡು ಗಿಡ್ಡ ಗೋವುಗಳ ದಾಖಲೆ | ರಾಜ್ಯದ ದೇಶೀ ತಳಿ ಸಂರಕ್ಷಣೆಗೆ ಹೊಸ ಒತ್ತು

January 28, 2026
11:30 PM

ಕರ್ನಾಟಕದ ಮಲೆನಾಡು ಭಾಗದ ವಿಶಿಷ್ಟ ದೇಶೀಯ ತಳಿ “ಮಲೆನಾಡು ಗಿಡ್ಡ ಗೋವು” ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂಬುದು ವಿಧಾನಪರಿಷತ್ ನಲ್ಲಿ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಒಟ್ಟು 7,12,998 ಮಲೆನಾಡು ಗಿಡ್ಡ ಗೋವುಗಳು ಇರುವುದಾಗಿ ದಾಖಲೆ ತಿಳಿಸುತ್ತದೆ.

ವಿಧಾನಪರಿಷತ್ ಸದಸ್ಯೆ ಬಲ್ಕೀಸ್‌ ಬಾನು ಅವರು ಮಲೆನಾಡು ಗಿಡ್ಡ ಗೋವುಗಳ ಸಂರಕ್ಷಣೆ ಹಾಗೂ ಸಂರಕ್ಷಣೆಗೆ ಜಾಗ ಮೀಸಲಿಟ್ಟಿರುವ ಬಗ್ಗೆ ಪ್ರಶ್ನೆ ಕೇಳಿದ್ದರು.  ಸರ್ಕಾರ ನೀಡಿದ ಉತ್ತರದಲ್ಲಿ, ಮಲೆನಾಡು ಗಿಡ್ಡ ಗೋವುಗಳ ಸಾಕಣೆ ಉತ್ತೇಜಿಸಲು ವಿವಿಧ ಯೋಜನೆಗಳ ಮೂಲಕ ಸಹಾಯಧನ, ಸಂಶೋಧನೆ ಮತ್ತು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಯ್ಲಾದಲ್ಲಿ 275 ಮಲೆನಾಡು ಗಿಡ್ಡ ಗೋತಳಿಯ ಸಂರಕ್ಷಣೆ ನಡೆಯುತ್ತಿದೆ. ಅಲ್ಲಿ 615 ಎಕ್ರೆ ಜಾಗವೂ ಮೀಸಲಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪ್ರಕಾರ, ಮಲೆನಾಡು ಗಿಡ್ಡ ಗೋವುಗಳ ಸಂರಕ್ಷಣೆಗೆ ವೈಜ್ಞಾನಿಕ ಕ್ರಮ ಕೈಗೊಳ್ಳಲಾಗಿದೆ.  ಸ್ಥಳೀಯ ತಳಿಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಹಾಗೂ ಸಾಕಣೆದಾರರಿಗೆ ಉತ್ತೇಜನ ನೀಡಲು ಸಹಾಯಧನ ವ್ಯವಸ್ಥೆ ಇದೆ,  2025-26ರ ಸಾಲಿನಲ್ಲಿ ಈ ಯೋಜನೆಗಳಿಗೆ ಹಣ ಬಿಡುಗಡೆಯಾಗಿದೆ.

ಮಲೆನಾಡು ಗಿಡ್ಡ ಗೋವುಗಳು ಕಡಿಮೆ ಗಾತ್ರದ ಹಾಗೂ ಹೆಚ್ಚು ಸಹನಶೀಲತೆ, ರೋಗ ನಿರೋಧಕ ಶಕ್ತಿ ಮತ್ತು ಕಡಿಮೆ ಆಹಾರದಲ್ಲಿ ಬದುಕುವ ಸಾಮರ್ಥ್ಯ ಹೊಂದಿರುವ ಅಪರೂಪದ ದೇಶೀ ತಳಿ. ಈ ತಳಿ ಮಲೆನಾಡು ರೈತರ ಜೀವನಾಧಾರವಾಗಿದ್ದು, ಹಾಲು ಉತ್ಪಾದನೆ, ಜೈವಿಕ ಕೃಷಿ ಹಾಗೂ ಗ್ರಾಮೀಣ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ. ಜಿಲ್ಲಾವಾರು ಮಲೆನಾಡು ಗಿಡ್ಡ ಗೋವುಗಳ ಸಂಖ್ಯೆಯನ್ನು ಗಮನಿಸಿದರೆ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ – 2,89,178, ಉತ್ತರ ಕನ್ನಡ – 1,72,593,  ಉಡುಪಿ – 81,204, ಚಿಕ್ಕಮಗಳೂರು – 40,837 ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 7,12,998 ಮಲೆನಾಡು ಗಿಡ್ಡ ಗೋವುಗಳು ಇರುವುದಾಗಿ ದಾಖಲೆ ತಿಳಿಸುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ
ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror