Advertisement
MIRROR FOCUS

7.12 ಲಕ್ಷ ಮಲೆನಾಡು ಗಿಡ್ಡ ಗೋವುಗಳ ದಾಖಲೆ | ರಾಜ್ಯದ ದೇಶೀ ತಳಿ ಸಂರಕ್ಷಣೆಗೆ ಹೊಸ ಒತ್ತು

Share

ಕರ್ನಾಟಕದ ಮಲೆನಾಡು ಭಾಗದ ವಿಶಿಷ್ಟ ದೇಶೀಯ ತಳಿ “ಮಲೆನಾಡು ಗಿಡ್ಡ ಗೋವು” ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂಬುದು ವಿಧಾನಪರಿಷತ್ ನಲ್ಲಿ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಒಟ್ಟು 7,12,998 ಮಲೆನಾಡು ಗಿಡ್ಡ ಗೋವುಗಳು ಇರುವುದಾಗಿ ದಾಖಲೆ ತಿಳಿಸುತ್ತದೆ.

ವಿಧಾನಪರಿಷತ್ ಸದಸ್ಯೆ ಬಲ್ಕೀಸ್‌ ಬಾನು ಅವರು ಮಲೆನಾಡು ಗಿಡ್ಡ ಗೋವುಗಳ ಸಂರಕ್ಷಣೆ ಹಾಗೂ ಸಂರಕ್ಷಣೆಗೆ ಜಾಗ ಮೀಸಲಿಟ್ಟಿರುವ ಬಗ್ಗೆ ಪ್ರಶ್ನೆ ಕೇಳಿದ್ದರು.  ಸರ್ಕಾರ ನೀಡಿದ ಉತ್ತರದಲ್ಲಿ, ಮಲೆನಾಡು ಗಿಡ್ಡ ಗೋವುಗಳ ಸಾಕಣೆ ಉತ್ತೇಜಿಸಲು ವಿವಿಧ ಯೋಜನೆಗಳ ಮೂಲಕ ಸಹಾಯಧನ, ಸಂಶೋಧನೆ ಮತ್ತು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಯ್ಲಾದಲ್ಲಿ 275 ಮಲೆನಾಡು ಗಿಡ್ಡ ಗೋತಳಿಯ ಸಂರಕ್ಷಣೆ ನಡೆಯುತ್ತಿದೆ. ಅಲ್ಲಿ 615 ಎಕ್ರೆ ಜಾಗವೂ ಮೀಸಲಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪ್ರಕಾರ, ಮಲೆನಾಡು ಗಿಡ್ಡ ಗೋವುಗಳ ಸಂರಕ್ಷಣೆಗೆ ವೈಜ್ಞಾನಿಕ ಕ್ರಮ ಕೈಗೊಳ್ಳಲಾಗಿದೆ.  ಸ್ಥಳೀಯ ತಳಿಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಹಾಗೂ ಸಾಕಣೆದಾರರಿಗೆ ಉತ್ತೇಜನ ನೀಡಲು ಸಹಾಯಧನ ವ್ಯವಸ್ಥೆ ಇದೆ,  2025-26ರ ಸಾಲಿನಲ್ಲಿ ಈ ಯೋಜನೆಗಳಿಗೆ ಹಣ ಬಿಡುಗಡೆಯಾಗಿದೆ.

ಮಲೆನಾಡು ಗಿಡ್ಡ ಗೋವುಗಳು ಕಡಿಮೆ ಗಾತ್ರದ ಹಾಗೂ ಹೆಚ್ಚು ಸಹನಶೀಲತೆ, ರೋಗ ನಿರೋಧಕ ಶಕ್ತಿ ಮತ್ತು ಕಡಿಮೆ ಆಹಾರದಲ್ಲಿ ಬದುಕುವ ಸಾಮರ್ಥ್ಯ ಹೊಂದಿರುವ ಅಪರೂಪದ ದೇಶೀ ತಳಿ. ಈ ತಳಿ ಮಲೆನಾಡು ರೈತರ ಜೀವನಾಧಾರವಾಗಿದ್ದು, ಹಾಲು ಉತ್ಪಾದನೆ, ಜೈವಿಕ ಕೃಷಿ ಹಾಗೂ ಗ್ರಾಮೀಣ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ. ಜಿಲ್ಲಾವಾರು ಮಲೆನಾಡು ಗಿಡ್ಡ ಗೋವುಗಳ ಸಂಖ್ಯೆಯನ್ನು ಗಮನಿಸಿದರೆ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ – 2,89,178, ಉತ್ತರ ಕನ್ನಡ – 1,72,593,  ಉಡುಪಿ – 81,204, ಚಿಕ್ಕಮಗಳೂರು – 40,837 ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 7,12,998 ಮಲೆನಾಡು ಗಿಡ್ಡ ಗೋವುಗಳು ಇರುವುದಾಗಿ ದಾಖಲೆ ತಿಳಿಸುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

13 minutes ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

6 hours ago

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago