Advertisement
MIRROR FOCUS

7.12 ಲಕ್ಷ ಮಲೆನಾಡು ಗಿಡ್ಡ ಗೋವುಗಳ ದಾಖಲೆ | ರಾಜ್ಯದ ದೇಶೀ ತಳಿ ಸಂರಕ್ಷಣೆಗೆ ಹೊಸ ಒತ್ತು

Share

ಕರ್ನಾಟಕದ ಮಲೆನಾಡು ಭಾಗದ ವಿಶಿಷ್ಟ ದೇಶೀಯ ತಳಿ “ಮಲೆನಾಡು ಗಿಡ್ಡ ಗೋವು” ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂಬುದು ವಿಧಾನಪರಿಷತ್ ನಲ್ಲಿ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಒಟ್ಟು 7,12,998 ಮಲೆನಾಡು ಗಿಡ್ಡ ಗೋವುಗಳು ಇರುವುದಾಗಿ ದಾಖಲೆ ತಿಳಿಸುತ್ತದೆ.

ವಿಧಾನಪರಿಷತ್ ಸದಸ್ಯೆ ಬಲ್ಕೀಸ್‌ ಬಾನು ಅವರು ಮಲೆನಾಡು ಗಿಡ್ಡ ಗೋವುಗಳ ಸಂರಕ್ಷಣೆ ಹಾಗೂ ಸಂರಕ್ಷಣೆಗೆ ಜಾಗ ಮೀಸಲಿಟ್ಟಿರುವ ಬಗ್ಗೆ ಪ್ರಶ್ನೆ ಕೇಳಿದ್ದರು.  ಸರ್ಕಾರ ನೀಡಿದ ಉತ್ತರದಲ್ಲಿ, ಮಲೆನಾಡು ಗಿಡ್ಡ ಗೋವುಗಳ ಸಾಕಣೆ ಉತ್ತೇಜಿಸಲು ವಿವಿಧ ಯೋಜನೆಗಳ ಮೂಲಕ ಸಹಾಯಧನ, ಸಂಶೋಧನೆ ಮತ್ತು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಯ್ಲಾದಲ್ಲಿ 275 ಮಲೆನಾಡು ಗಿಡ್ಡ ಗೋತಳಿಯ ಸಂರಕ್ಷಣೆ ನಡೆಯುತ್ತಿದೆ. ಅಲ್ಲಿ 615 ಎಕ್ರೆ ಜಾಗವೂ ಮೀಸಲಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪ್ರಕಾರ, ಮಲೆನಾಡು ಗಿಡ್ಡ ಗೋವುಗಳ ಸಂರಕ್ಷಣೆಗೆ ವೈಜ್ಞಾನಿಕ ಕ್ರಮ ಕೈಗೊಳ್ಳಲಾಗಿದೆ.  ಸ್ಥಳೀಯ ತಳಿಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಹಾಗೂ ಸಾಕಣೆದಾರರಿಗೆ ಉತ್ತೇಜನ ನೀಡಲು ಸಹಾಯಧನ ವ್ಯವಸ್ಥೆ ಇದೆ,  2025-26ರ ಸಾಲಿನಲ್ಲಿ ಈ ಯೋಜನೆಗಳಿಗೆ ಹಣ ಬಿಡುಗಡೆಯಾಗಿದೆ.

ಮಲೆನಾಡು ಗಿಡ್ಡ ಗೋವುಗಳು ಕಡಿಮೆ ಗಾತ್ರದ ಹಾಗೂ ಹೆಚ್ಚು ಸಹನಶೀಲತೆ, ರೋಗ ನಿರೋಧಕ ಶಕ್ತಿ ಮತ್ತು ಕಡಿಮೆ ಆಹಾರದಲ್ಲಿ ಬದುಕುವ ಸಾಮರ್ಥ್ಯ ಹೊಂದಿರುವ ಅಪರೂಪದ ದೇಶೀ ತಳಿ. ಈ ತಳಿ ಮಲೆನಾಡು ರೈತರ ಜೀವನಾಧಾರವಾಗಿದ್ದು, ಹಾಲು ಉತ್ಪಾದನೆ, ಜೈವಿಕ ಕೃಷಿ ಹಾಗೂ ಗ್ರಾಮೀಣ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ. ಜಿಲ್ಲಾವಾರು ಮಲೆನಾಡು ಗಿಡ್ಡ ಗೋವುಗಳ ಸಂಖ್ಯೆಯನ್ನು ಗಮನಿಸಿದರೆ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ – 2,89,178, ಉತ್ತರ ಕನ್ನಡ – 1,72,593,  ಉಡುಪಿ – 81,204, ಚಿಕ್ಕಮಗಳೂರು – 40,837 ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 7,12,998 ಮಲೆನಾಡು ಗಿಡ್ಡ ಗೋವುಗಳು ಇರುವುದಾಗಿ ದಾಖಲೆ ತಿಳಿಸುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

2 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

8 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

14 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

15 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

23 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

1 day ago