Advertisement
MIRROR FOCUS

7.12 ಲಕ್ಷ ಮಲೆನಾಡು ಗಿಡ್ಡ ಗೋವುಗಳ ದಾಖಲೆ | ರಾಜ್ಯದ ದೇಶೀ ತಳಿ ಸಂರಕ್ಷಣೆಗೆ ಹೊಸ ಒತ್ತು

Share

ಕರ್ನಾಟಕದ ಮಲೆನಾಡು ಭಾಗದ ವಿಶಿಷ್ಟ ದೇಶೀಯ ತಳಿ “ಮಲೆನಾಡು ಗಿಡ್ಡ ಗೋವು” ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂಬುದು ವಿಧಾನಪರಿಷತ್ ನಲ್ಲಿ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಒಟ್ಟು 7,12,998 ಮಲೆನಾಡು ಗಿಡ್ಡ ಗೋವುಗಳು ಇರುವುದಾಗಿ ದಾಖಲೆ ತಿಳಿಸುತ್ತದೆ.

ವಿಧಾನಪರಿಷತ್ ಸದಸ್ಯೆ ಬಲ್ಕೀಸ್‌ ಬಾನು ಅವರು ಮಲೆನಾಡು ಗಿಡ್ಡ ಗೋವುಗಳ ಸಂರಕ್ಷಣೆ ಹಾಗೂ ಸಂರಕ್ಷಣೆಗೆ ಜಾಗ ಮೀಸಲಿಟ್ಟಿರುವ ಬಗ್ಗೆ ಪ್ರಶ್ನೆ ಕೇಳಿದ್ದರು.  ಸರ್ಕಾರ ನೀಡಿದ ಉತ್ತರದಲ್ಲಿ, ಮಲೆನಾಡು ಗಿಡ್ಡ ಗೋವುಗಳ ಸಾಕಣೆ ಉತ್ತೇಜಿಸಲು ವಿವಿಧ ಯೋಜನೆಗಳ ಮೂಲಕ ಸಹಾಯಧನ, ಸಂಶೋಧನೆ ಮತ್ತು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಯ್ಲಾದಲ್ಲಿ 275 ಮಲೆನಾಡು ಗಿಡ್ಡ ಗೋತಳಿಯ ಸಂರಕ್ಷಣೆ ನಡೆಯುತ್ತಿದೆ. ಅಲ್ಲಿ 615 ಎಕ್ರೆ ಜಾಗವೂ ಮೀಸಲಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪ್ರಕಾರ, ಮಲೆನಾಡು ಗಿಡ್ಡ ಗೋವುಗಳ ಸಂರಕ್ಷಣೆಗೆ ವೈಜ್ಞಾನಿಕ ಕ್ರಮ ಕೈಗೊಳ್ಳಲಾಗಿದೆ.  ಸ್ಥಳೀಯ ತಳಿಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಹಾಗೂ ಸಾಕಣೆದಾರರಿಗೆ ಉತ್ತೇಜನ ನೀಡಲು ಸಹಾಯಧನ ವ್ಯವಸ್ಥೆ ಇದೆ,  2025-26ರ ಸಾಲಿನಲ್ಲಿ ಈ ಯೋಜನೆಗಳಿಗೆ ಹಣ ಬಿಡುಗಡೆಯಾಗಿದೆ.

ಮಲೆನಾಡು ಗಿಡ್ಡ ಗೋವುಗಳು ಕಡಿಮೆ ಗಾತ್ರದ ಹಾಗೂ ಹೆಚ್ಚು ಸಹನಶೀಲತೆ, ರೋಗ ನಿರೋಧಕ ಶಕ್ತಿ ಮತ್ತು ಕಡಿಮೆ ಆಹಾರದಲ್ಲಿ ಬದುಕುವ ಸಾಮರ್ಥ್ಯ ಹೊಂದಿರುವ ಅಪರೂಪದ ದೇಶೀ ತಳಿ. ಈ ತಳಿ ಮಲೆನಾಡು ರೈತರ ಜೀವನಾಧಾರವಾಗಿದ್ದು, ಹಾಲು ಉತ್ಪಾದನೆ, ಜೈವಿಕ ಕೃಷಿ ಹಾಗೂ ಗ್ರಾಮೀಣ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ. ಜಿಲ್ಲಾವಾರು ಮಲೆನಾಡು ಗಿಡ್ಡ ಗೋವುಗಳ ಸಂಖ್ಯೆಯನ್ನು ಗಮನಿಸಿದರೆ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ – 2,89,178, ಉತ್ತರ ಕನ್ನಡ – 1,72,593,  ಉಡುಪಿ – 81,204, ಚಿಕ್ಕಮಗಳೂರು – 40,837 ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 7,12,998 ಮಲೆನಾಡು ಗಿಡ್ಡ ಗೋವುಗಳು ಇರುವುದಾಗಿ ದಾಖಲೆ ತಿಳಿಸುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

26 minutes ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

2 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

2 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

3 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

6 hours ago