Advertisement
ಸುದ್ದಿಗಳು

ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ | ಹೊಸ ಕೋವಿಡ್ ರೂಪಾಂತರ ಮಾದರಿಗಳು ಪತ್ತೆ…! |

Share

ಹೋದೆಯಾ ಪಿಶಾಚಿ ಎಂದ್ರೆ ಬಂದೆಯಾ ಗವಾಕ್ಷಿ ಅನ್ನುವ ಹಾಗೆ ಆಯ್ತು ಈ ಕೊರೋನಾ ಕಥೆ….  ದಿನಕ್ಕೊಂದು ಅವತಾರರದಲ್ಲಿ ಅವತರಿಸುತ್ತಿದೆ ಈ ರಕ್ತಬೀಜಾಸುರ. ದೇಶದಲ್ಲಿ ಇತ್ತೀಚಿಗೆ ಕೋವಿಡ್ ಪ್ರಕರಣಗಳ ಹೆಚ್ಚಳದ ಬೆನ್ನಲ್ಲೆ, ಹೊಸ ರೂಪಾಂತರ ಹೊಸ ಮಾದರಿಗಳು ಪತ್ತೆಯಾಗಿವೆ.  ಕರ್ನಾಟಕದಾದ್ಯಂತ 30, ಮಹಾರಾಷ್ಟ್ರ 29, ಪುದುಚೇರಿ 7, ದೆಹಲಿ 5, ತೆಲಂಗಾಣ 2 ಗುಜರಾತ್, ಹಿಮಾಚಾಲ ಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಒಂದೊಂದು ಮಾದರಿಗಳು ಕಂಡುಬಂದಿವೆ ಎಂದು ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ INSACOG ಡೇಟಾ ಹೇಳಿದೆ.

Advertisement
Advertisement

ಜನವರಿಯಲ್ಲಿ ಮೊದಲ ಬಾರಿಗೆ ಎರಡು ಮಾದರಿಗಳ ಪರೀಕ್ಷೆ ನಡೆಸಿದಾಗ  XBB 1.16 ರೂಪಾಂತರ ದೃಢಪಟ್ಟಿತ್ತು. ಫೆಬ್ರವರಿಯಲ್ಲಿ ಒಟ್ಟು 59 ಮಾದರಿಗಳು ಪತ್ತೆಯಾದರೆ, ಮಾರ್ಚ್ ನಲ್ಲಿ ಇಲ್ಲಿಯವರೆಗೂ  ಇದೀಗ 15 ಮಾದರಿಗಳು ಪತ್ತೆಯಾಗಿವೆ ಎಂದು INSACOG ಹೇಳಿದೆ.

Advertisement

ಈ ರೂಪಾಂತರದ ಕಾರಣದಿಂದ ಇತ್ತೀಚಿಗೆ ಕೋವಿಡ್-19 ಪ್ರಕರಣಗಳು ಹೆಚ್ಚಿವೆ ಎಂದು ಕೆಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. H3N2 ಕಾರಣ ಇನ್ಫ್ಲುಯೆನ್ಸ ಪ್ರಕರಣಗಳು ಹೆಚ್ಚಾದರೆ, XBB 1.16 ರೂಪಾಂತರದ ಪ್ರಭಾವದಿಂದ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ರಾಷ್ಟ್ರೀಯ ಕೋವಿಡ್ ಕಾರ್ಯಪಡೆಯ ನೇತೃತ್ವ ವಹಿಸಿದ್ದ ಮಾಜಿ ಎಐಐಎಂಎಸ್ ನಿರ್ದೇಶಕ ಡಾ ರಂದೀಪ್ ಗುಲೇರಿಯಾ ಹೇಳಿದ್ದಾರೆ. ಕೋವಿಡ್-19 ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದರಿಂದ ಈ ಸೋಂಕು ಹರಡುವಿಕೆಯನ್ನು ತಡೆಯಬಹುದಾಗಿದೆ. ಆದ್ದರಿಂದ ಸದ್ಯಕ್ಕೆ ಭಯಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

Advertisement

ಅಮೆರಿಕ, ಬ್ರೂನಿ, ಸಿಂಗಾಪುರ ಮತ್ತು ಯುಕೆ ನಂತರ ಭಾರತದಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಕನಿಷ್ಠ 12 ದೇಶಗಳಲ್ಲಿ ಹೊಸ ರೂಪಾಂತರ XBB 1.16 ಪತ್ತೆಯಾಗಿದೆ. ಭಾರತದಲ್ಲಿ ಪ್ರಕರಣಗಳಲ್ಲಿ ಶೇ.281 ರಷ್ಟು ಹೆಚ್ಚಾಗಿದೆ. ಕಳೆದ 14 ದಿನಗಳಲ್ಲಿ ಸಾವಿನ ಪ್ರಕರಣದಲ್ಲಿ ಶೇ.17 ರಷ್ಟು ಹೆಚ್ಚಾಗಿದೆ ಎಂದು ಬಿಜ್ನೋರ್ ನ ಮಂಗಳ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಶಿಶು ವೈದ್ಯ ವಿಪಿನ್ ಎಂ ವಶಿಷ್ಠ ಟ್ವೀಟ್ ಮಾಡಿದ್ದಾರೆ.

126 ದಿನಗಳ ನಂತರ ಶನಿವಾರದಂದು ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 800 ದಾಟಿದೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 5,389 ಕ್ಕೆ ಏರಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಲೋಕಸಭಾ ಕ್ಷೇತ್ರದ ಸೋಲು ಗೆಲುವಿನ ಸಿಂಪಲ್ ಲೆಕ್ಕಾಚಾರ……. : ಮತಪೆಟ್ಟಿಗೆಯಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ

ಶಿಕ್ಷಿತರ ನಾಡು, ಬುದ್ದಿವಂತರ ಜಿಲ್ಲೆ ದಕ್ಷಿಣಕನ್ನಡದಲ್ಲಿ(Dakshina Kannada) ಹೆಚ್ಚಿನ ಮತದಾರರು(Voters) ಮತದಾನ ಮಾಡಿ…

12 mins ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

14 mins ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

44 mins ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

16 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

16 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

20 hours ago