Advertisement
ಸುದ್ದಿಗಳು

ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ | ಹೊಸ ಕೋವಿಡ್ ರೂಪಾಂತರ ಮಾದರಿಗಳು ಪತ್ತೆ…! |

Share

ಹೋದೆಯಾ ಪಿಶಾಚಿ ಎಂದ್ರೆ ಬಂದೆಯಾ ಗವಾಕ್ಷಿ ಅನ್ನುವ ಹಾಗೆ ಆಯ್ತು ಈ ಕೊರೋನಾ ಕಥೆ….  ದಿನಕ್ಕೊಂದು ಅವತಾರರದಲ್ಲಿ ಅವತರಿಸುತ್ತಿದೆ ಈ ರಕ್ತಬೀಜಾಸುರ. ದೇಶದಲ್ಲಿ ಇತ್ತೀಚಿಗೆ ಕೋವಿಡ್ ಪ್ರಕರಣಗಳ ಹೆಚ್ಚಳದ ಬೆನ್ನಲ್ಲೆ, ಹೊಸ ರೂಪಾಂತರ ಹೊಸ ಮಾದರಿಗಳು ಪತ್ತೆಯಾಗಿವೆ.  ಕರ್ನಾಟಕದಾದ್ಯಂತ 30, ಮಹಾರಾಷ್ಟ್ರ 29, ಪುದುಚೇರಿ 7, ದೆಹಲಿ 5, ತೆಲಂಗಾಣ 2 ಗುಜರಾತ್, ಹಿಮಾಚಾಲ ಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಒಂದೊಂದು ಮಾದರಿಗಳು ಕಂಡುಬಂದಿವೆ ಎಂದು ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ INSACOG ಡೇಟಾ ಹೇಳಿದೆ.

ಜನವರಿಯಲ್ಲಿ ಮೊದಲ ಬಾರಿಗೆ ಎರಡು ಮಾದರಿಗಳ ಪರೀಕ್ಷೆ ನಡೆಸಿದಾಗ  XBB 1.16 ರೂಪಾಂತರ ದೃಢಪಟ್ಟಿತ್ತು. ಫೆಬ್ರವರಿಯಲ್ಲಿ ಒಟ್ಟು 59 ಮಾದರಿಗಳು ಪತ್ತೆಯಾದರೆ, ಮಾರ್ಚ್ ನಲ್ಲಿ ಇಲ್ಲಿಯವರೆಗೂ  ಇದೀಗ 15 ಮಾದರಿಗಳು ಪತ್ತೆಯಾಗಿವೆ ಎಂದು INSACOG ಹೇಳಿದೆ.

ಈ ರೂಪಾಂತರದ ಕಾರಣದಿಂದ ಇತ್ತೀಚಿಗೆ ಕೋವಿಡ್-19 ಪ್ರಕರಣಗಳು ಹೆಚ್ಚಿವೆ ಎಂದು ಕೆಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. H3N2 ಕಾರಣ ಇನ್ಫ್ಲುಯೆನ್ಸ ಪ್ರಕರಣಗಳು ಹೆಚ್ಚಾದರೆ, XBB 1.16 ರೂಪಾಂತರದ ಪ್ರಭಾವದಿಂದ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ರಾಷ್ಟ್ರೀಯ ಕೋವಿಡ್ ಕಾರ್ಯಪಡೆಯ ನೇತೃತ್ವ ವಹಿಸಿದ್ದ ಮಾಜಿ ಎಐಐಎಂಎಸ್ ನಿರ್ದೇಶಕ ಡಾ ರಂದೀಪ್ ಗುಲೇರಿಯಾ ಹೇಳಿದ್ದಾರೆ. ಕೋವಿಡ್-19 ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದರಿಂದ ಈ ಸೋಂಕು ಹರಡುವಿಕೆಯನ್ನು ತಡೆಯಬಹುದಾಗಿದೆ. ಆದ್ದರಿಂದ ಸದ್ಯಕ್ಕೆ ಭಯಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಅಮೆರಿಕ, ಬ್ರೂನಿ, ಸಿಂಗಾಪುರ ಮತ್ತು ಯುಕೆ ನಂತರ ಭಾರತದಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಕನಿಷ್ಠ 12 ದೇಶಗಳಲ್ಲಿ ಹೊಸ ರೂಪಾಂತರ XBB 1.16 ಪತ್ತೆಯಾಗಿದೆ. ಭಾರತದಲ್ಲಿ ಪ್ರಕರಣಗಳಲ್ಲಿ ಶೇ.281 ರಷ್ಟು ಹೆಚ್ಚಾಗಿದೆ. ಕಳೆದ 14 ದಿನಗಳಲ್ಲಿ ಸಾವಿನ ಪ್ರಕರಣದಲ್ಲಿ ಶೇ.17 ರಷ್ಟು ಹೆಚ್ಚಾಗಿದೆ ಎಂದು ಬಿಜ್ನೋರ್ ನ ಮಂಗಳ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಶಿಶು ವೈದ್ಯ ವಿಪಿನ್ ಎಂ ವಶಿಷ್ಠ ಟ್ವೀಟ್ ಮಾಡಿದ್ದಾರೆ.

126 ದಿನಗಳ ನಂತರ ಶನಿವಾರದಂದು ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 800 ದಾಟಿದೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 5,389 ಕ್ಕೆ ಏರಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

20 minutes ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

51 minutes ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

1 hour ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

5 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

5 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

16 hours ago