Advertisement
ಸುದ್ದಿಗಳು

ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ | ಹೊಸ ಕೋವಿಡ್ ರೂಪಾಂತರ ಮಾದರಿಗಳು ಪತ್ತೆ…! |

Share

ಹೋದೆಯಾ ಪಿಶಾಚಿ ಎಂದ್ರೆ ಬಂದೆಯಾ ಗವಾಕ್ಷಿ ಅನ್ನುವ ಹಾಗೆ ಆಯ್ತು ಈ ಕೊರೋನಾ ಕಥೆ….  ದಿನಕ್ಕೊಂದು ಅವತಾರರದಲ್ಲಿ ಅವತರಿಸುತ್ತಿದೆ ಈ ರಕ್ತಬೀಜಾಸುರ. ದೇಶದಲ್ಲಿ ಇತ್ತೀಚಿಗೆ ಕೋವಿಡ್ ಪ್ರಕರಣಗಳ ಹೆಚ್ಚಳದ ಬೆನ್ನಲ್ಲೆ, ಹೊಸ ರೂಪಾಂತರ ಹೊಸ ಮಾದರಿಗಳು ಪತ್ತೆಯಾಗಿವೆ.  ಕರ್ನಾಟಕದಾದ್ಯಂತ 30, ಮಹಾರಾಷ್ಟ್ರ 29, ಪುದುಚೇರಿ 7, ದೆಹಲಿ 5, ತೆಲಂಗಾಣ 2 ಗುಜರಾತ್, ಹಿಮಾಚಾಲ ಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಒಂದೊಂದು ಮಾದರಿಗಳು ಕಂಡುಬಂದಿವೆ ಎಂದು ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ INSACOG ಡೇಟಾ ಹೇಳಿದೆ.

ಜನವರಿಯಲ್ಲಿ ಮೊದಲ ಬಾರಿಗೆ ಎರಡು ಮಾದರಿಗಳ ಪರೀಕ್ಷೆ ನಡೆಸಿದಾಗ  XBB 1.16 ರೂಪಾಂತರ ದೃಢಪಟ್ಟಿತ್ತು. ಫೆಬ್ರವರಿಯಲ್ಲಿ ಒಟ್ಟು 59 ಮಾದರಿಗಳು ಪತ್ತೆಯಾದರೆ, ಮಾರ್ಚ್ ನಲ್ಲಿ ಇಲ್ಲಿಯವರೆಗೂ  ಇದೀಗ 15 ಮಾದರಿಗಳು ಪತ್ತೆಯಾಗಿವೆ ಎಂದು INSACOG ಹೇಳಿದೆ.

ಈ ರೂಪಾಂತರದ ಕಾರಣದಿಂದ ಇತ್ತೀಚಿಗೆ ಕೋವಿಡ್-19 ಪ್ರಕರಣಗಳು ಹೆಚ್ಚಿವೆ ಎಂದು ಕೆಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. H3N2 ಕಾರಣ ಇನ್ಫ್ಲುಯೆನ್ಸ ಪ್ರಕರಣಗಳು ಹೆಚ್ಚಾದರೆ, XBB 1.16 ರೂಪಾಂತರದ ಪ್ರಭಾವದಿಂದ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ರಾಷ್ಟ್ರೀಯ ಕೋವಿಡ್ ಕಾರ್ಯಪಡೆಯ ನೇತೃತ್ವ ವಹಿಸಿದ್ದ ಮಾಜಿ ಎಐಐಎಂಎಸ್ ನಿರ್ದೇಶಕ ಡಾ ರಂದೀಪ್ ಗುಲೇರಿಯಾ ಹೇಳಿದ್ದಾರೆ. ಕೋವಿಡ್-19 ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದರಿಂದ ಈ ಸೋಂಕು ಹರಡುವಿಕೆಯನ್ನು ತಡೆಯಬಹುದಾಗಿದೆ. ಆದ್ದರಿಂದ ಸದ್ಯಕ್ಕೆ ಭಯಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಅಮೆರಿಕ, ಬ್ರೂನಿ, ಸಿಂಗಾಪುರ ಮತ್ತು ಯುಕೆ ನಂತರ ಭಾರತದಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಕನಿಷ್ಠ 12 ದೇಶಗಳಲ್ಲಿ ಹೊಸ ರೂಪಾಂತರ XBB 1.16 ಪತ್ತೆಯಾಗಿದೆ. ಭಾರತದಲ್ಲಿ ಪ್ರಕರಣಗಳಲ್ಲಿ ಶೇ.281 ರಷ್ಟು ಹೆಚ್ಚಾಗಿದೆ. ಕಳೆದ 14 ದಿನಗಳಲ್ಲಿ ಸಾವಿನ ಪ್ರಕರಣದಲ್ಲಿ ಶೇ.17 ರಷ್ಟು ಹೆಚ್ಚಾಗಿದೆ ಎಂದು ಬಿಜ್ನೋರ್ ನ ಮಂಗಳ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಶಿಶು ವೈದ್ಯ ವಿಪಿನ್ ಎಂ ವಶಿಷ್ಠ ಟ್ವೀಟ್ ಮಾಡಿದ್ದಾರೆ.

126 ದಿನಗಳ ನಂತರ ಶನಿವಾರದಂದು ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 800 ದಾಟಿದೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 5,389 ಕ್ಕೆ ಏರಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago