MIRROR FOCUS

ಜಲಸಂರಕ್ಷಣೆಯತ್ತ ಗಟ್ಟಿ ಹೆಜ್ಜೆ : ಸುಳ್ಯ ತಾಲೂಕಿನಲ್ಲಿ ಭರವಸೆ ಮೂಡಿಸಿದ ಇಂಗುಗುಂಡಿ ಅಭಿಯಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯದಲ್ಲಿ  ನಡೆಯುತ್ತಿರುವ ಜಲಾಂದೋಲನ ಭವಿಷ್ಯದ ದೃಷ್ಠಿಯಿಂದ, ಸಮಾಜದ ದೃಷ್ಠಿಯಿಂದಲೂ, ಸಾಮಾಜಿಕ ಕಳಕಳಿಯಿಂದಲೂ ಈ ಅಭಿಯಾನ ಭರವಸೆ ಮೂಡಿಸಿದೆ. ಶಾಲೆಗಳಲ್ಲಿ  ನಡೆಸುತ್ತಿರುವ ಇಂಗುಗುಂಡಿ ಅಭಿಯಾನದ ಮೂಲಕ ಮಕ್ಕಳು ಮನೆಮನೆಯಲ್ಲಿ  ಸಣ್ಣ ಸಣ್ಣ ಇಂಗುಗುಂಡಿ ಮಾಡುತ್ತಿದ್ದಾರೆ. ಯಾವುದೇ ಖರ್ಚಿಲ್ಲದೆ ಮಾಡಬಹುದಾದ ಈ ಕಾರ್ಯದ ಮೇಲೆ ಇಂದಿನ ಬೆಳಕು..

Advertisement
Advertisement

ಸುಳ್ಯ:  ಧನ್ಯವಾದ……

ನಿಹಾರಿಕಾ, 5 ನೇ ತರಗತಿ ಕುಮಾರಸ್ವಾಮಿ ಶಾಲೆ…

ಶುಭಾಶಯ ಇಂಚರ ಶೆಟ್ಟಿ , 7 ನೇ ತರಗತಿ ಕುಮಾರಸ್ವಾಮಿ ಶಾಲೆ…..

ಕಂಗ್ರಾಟ್ಸ್ ರಮೀಜ್..!  9 ನೇ ತರಗತಿ ತೆಕ್ಕಿಲ್ ಶಾಲೆ..

Advertisement

ಇಷ್ಟೇ ಅಲ್ಲ, ಇನ್ನಷ್ಟು ಹೆಸರುಗಳ ಪಟ್ಟಿ ಇದೆ. ಇವರೆಲ್ಲಾ ಮನೆಯಲ್ಲಿ  ಇಂಗುಗುಂಡಿ ನಿರ್ಮಾಣ ಮಾಡಿರುವ ವಿದ್ಯಾರ್ಥಿಗಳು.

 

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ.ಚಂದ್ರಶೇಖರ ದಾಮ್ಲೆ ಅವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಶಾಲೆಗಳಲ್ಲಿ ಜಲಸಂರಕ್ಷಣೆಗಾಗಿ ಮನೆಮನೆ‌ಇಂಗುಗುಂಡಿ ಅಭಿಯಾನ ನಡೆಯುತ್ತಿದೆ. ಜಲಾಮೃತ ಎಂಬ ಹೆಸರಿನಲ್ಲಿ  ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಯೂ ಸಹಕಾರ ನೀಡಿದೆ.

ತಾಲೂಕಿನ ಬಹುಪಾಲು ಶಾಲೆಗಳಲ್ಲಿ  ಈಗಾಗಲೇ ಈ ಅಭಿಯಾನ ನಡೆದಿದೆ.ಸುಮಾರು 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇಂಗುಗುಂಡಿ ರಚನೆ ಹಾಗೂ ಜಲಸಂರಕ್ಷಣೆಯ ಅನಿವಾರ್ಯತೆಯ ಬಗ್ಗೆ ಮಾಹಿತಿ ನೀಡಲಾಗಿದೆ.  ಇದರ ಫಲವಾಗಿ ಇಂದು ವಿದ್ಯಾರ್ಥಿಗಳು ಮನೆಮನೆಗಳಲ್ಲಿ  ಇಂಗುಗುಂಡಿ ಮಾಡಿ ಶಾಲೆಯ ಅಧ್ಯಾಪಕರಿಗೆ ಮಾಹಿತಿ ನೀಡುತ್ತಿದ್ದಾರೆ. ಒಂದು ಇಂಗುಗುಂಡಿ ಮೂಲಕ ಸಣ್ಣ ಪ್ರಮಾಣದಲ್ಲಿ ಜಲ ಮರುಪುರಣವಾಗುತ್ತದೆ. ಭವಿಷ್ಯದಲ್ಲಿ ಇದರ ಪ್ರಯೋಜನ ಸಾಕಷ್ಟು ಮಂದಿಗೆ ಅರಿವಿಗೆ ಬರುತ್ತದೆ. ಹೀಗಾಗಿ ಸ್ನೇಹ ಶಾಲೆಯ ಈ ಯೋಜನೆ ಹಾಗೂ ಶಿಕ್ಷಣ ಇಲಾಖೆಯ ಸಹಕಾರ ಸಮಾಜಕ್ಕೆ ಕೊಡುಗೆಯನ್ನು  ನೀಡಿದೆ.

Advertisement

 

 

ಇನ್ನಷ್ಟು ಶಾಲೆಗಳಲ್ಲಿ  ಇಂಗುಗುಂಡಿ ರಚನೆಗೆ ಪ್ರೇರೇಪಣೆ ದೊರೆಯಬೇಕಿದೆ. ಶಾಲೆಗಳಲ್ಲಿ  ಒಂದು ಅವಧಿಯಲ್ಲಿ ಜಲಸಂರಕ್ಷಣೆಯ ಮಹತ್ವವನ್ನೇ ತಿಳಿಸುವ ಕೆಲಸ ಆಗಬೇಕಿದೆ.

ಮನೆಮನೆ  ಇಂಗುಗುಂಡಿ ಅಭಿಯಾನದ ಸಂದರ್ಭ ಮರ್ಕಂಜ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾಬಲ ಅವರ ಅನುಭವವನ್ನು ಡಾ.ಚಂದ್ರಶೇಖರ ದಾಮ್ಲೆ ಹೀಗೆ ಹಂಚಿಕೊಂಡಿದ್ದಾರೆ,  ಮರ್ಕಂಜ ಸರಕಾರಿ ಶಾಲೆಯ ಬಾವಿಯಲ್ಲಿ ಈ ವರ್ಷ ನೀರು ಆರಿತ್ತು. ಅಲ್ಲಿಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮಹಾಬಲರು ಕಳೆದವಾರ ಬಾವಿಯಿಂದ  ಆರು ಅಡಿ ದೂರದಲ್ಲಿ  ಎರಡು ಬದಿಗಳಲ್ಲಿ ಒಂದೊಂದು ಇಂಗು ಗುಂಡಿಗಳನ್ನು ಮಾಡಿದರು. ಅಂಗಳದ ಮಳೆನೀರನ್ನು ಆ ಇಂಗು ಗುಂಡಿಗಳಿಗೆ ಹೋಗುವಂತೆ ಮಾಡಿದರು. ಒಂದೇ ದಿನದಲ್ಲಿ ಪರಿಣಾಮ ಕಾಣಿಸಿತು. ಈಗ ಬಾವಿಯಲ್ಲಿ ನೀರು ತುಂಬಿದೆ. ಇದನ್ನು ಶಾಲಾ ಮುಖ್ಯೋಪಾಧ್ಯಾಯ  ರಾಜೀವ್ ಹಾಗೂ ಶಿಕ್ಷಕ ಬಳಗದವರು ಸಂತಸದಿಂದ ಈ ಸುದ್ದಿ  ಹೇಳುತ್ತಾರೆ. 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

22 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago