Advertisement
MIRROR FOCUS

ಜಲಸಂರಕ್ಷಣೆಯತ್ತ ಗಟ್ಟಿ ಹೆಜ್ಜೆ : ಸುಳ್ಯ ತಾಲೂಕಿನಲ್ಲಿ ಭರವಸೆ ಮೂಡಿಸಿದ ಇಂಗುಗುಂಡಿ ಅಭಿಯಾನ

Share

ಸುಳ್ಯದಲ್ಲಿ  ನಡೆಯುತ್ತಿರುವ ಜಲಾಂದೋಲನ ಭವಿಷ್ಯದ ದೃಷ್ಠಿಯಿಂದ, ಸಮಾಜದ ದೃಷ್ಠಿಯಿಂದಲೂ, ಸಾಮಾಜಿಕ ಕಳಕಳಿಯಿಂದಲೂ ಈ ಅಭಿಯಾನ ಭರವಸೆ ಮೂಡಿಸಿದೆ. ಶಾಲೆಗಳಲ್ಲಿ  ನಡೆಸುತ್ತಿರುವ ಇಂಗುಗುಂಡಿ ಅಭಿಯಾನದ ಮೂಲಕ ಮಕ್ಕಳು ಮನೆಮನೆಯಲ್ಲಿ  ಸಣ್ಣ ಸಣ್ಣ ಇಂಗುಗುಂಡಿ ಮಾಡುತ್ತಿದ್ದಾರೆ. ಯಾವುದೇ ಖರ್ಚಿಲ್ಲದೆ ಮಾಡಬಹುದಾದ ಈ ಕಾರ್ಯದ ಮೇಲೆ ಇಂದಿನ ಬೆಳಕು..


ಸುಳ್ಯ:  ಧನ್ಯವಾದ……

ನಿಹಾರಿಕಾ, 5 ನೇ ತರಗತಿ ಕುಮಾರಸ್ವಾಮಿ ಶಾಲೆ…

ಶುಭಾಶಯ ಇಂಚರ ಶೆಟ್ಟಿ , 7 ನೇ ತರಗತಿ ಕುಮಾರಸ್ವಾಮಿ ಶಾಲೆ…..

ಕಂಗ್ರಾಟ್ಸ್ ರಮೀಜ್..!  9 ನೇ ತರಗತಿ ತೆಕ್ಕಿಲ್ ಶಾಲೆ..

ಇಷ್ಟೇ ಅಲ್ಲ, ಇನ್ನಷ್ಟು ಹೆಸರುಗಳ ಪಟ್ಟಿ ಇದೆ. ಇವರೆಲ್ಲಾ ಮನೆಯಲ್ಲಿ  ಇಂಗುಗುಂಡಿ ನಿರ್ಮಾಣ ಮಾಡಿರುವ ವಿದ್ಯಾರ್ಥಿಗಳು.

 

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ.ಚಂದ್ರಶೇಖರ ದಾಮ್ಲೆ ಅವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಶಾಲೆಗಳಲ್ಲಿ ಜಲಸಂರಕ್ಷಣೆಗಾಗಿ ಮನೆಮನೆ‌ಇಂಗುಗುಂಡಿ ಅಭಿಯಾನ ನಡೆಯುತ್ತಿದೆ. ಜಲಾಮೃತ ಎಂಬ ಹೆಸರಿನಲ್ಲಿ  ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಯೂ ಸಹಕಾರ ನೀಡಿದೆ.

ತಾಲೂಕಿನ ಬಹುಪಾಲು ಶಾಲೆಗಳಲ್ಲಿ  ಈಗಾಗಲೇ ಈ ಅಭಿಯಾನ ನಡೆದಿದೆ.ಸುಮಾರು 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇಂಗುಗುಂಡಿ ರಚನೆ ಹಾಗೂ ಜಲಸಂರಕ್ಷಣೆಯ ಅನಿವಾರ್ಯತೆಯ ಬಗ್ಗೆ ಮಾಹಿತಿ ನೀಡಲಾಗಿದೆ.  ಇದರ ಫಲವಾಗಿ ಇಂದು ವಿದ್ಯಾರ್ಥಿಗಳು ಮನೆಮನೆಗಳಲ್ಲಿ  ಇಂಗುಗುಂಡಿ ಮಾಡಿ ಶಾಲೆಯ ಅಧ್ಯಾಪಕರಿಗೆ ಮಾಹಿತಿ ನೀಡುತ್ತಿದ್ದಾರೆ. ಒಂದು ಇಂಗುಗುಂಡಿ ಮೂಲಕ ಸಣ್ಣ ಪ್ರಮಾಣದಲ್ಲಿ ಜಲ ಮರುಪುರಣವಾಗುತ್ತದೆ. ಭವಿಷ್ಯದಲ್ಲಿ ಇದರ ಪ್ರಯೋಜನ ಸಾಕಷ್ಟು ಮಂದಿಗೆ ಅರಿವಿಗೆ ಬರುತ್ತದೆ. ಹೀಗಾಗಿ ಸ್ನೇಹ ಶಾಲೆಯ ಈ ಯೋಜನೆ ಹಾಗೂ ಶಿಕ್ಷಣ ಇಲಾಖೆಯ ಸಹಕಾರ ಸಮಾಜಕ್ಕೆ ಕೊಡುಗೆಯನ್ನು  ನೀಡಿದೆ.

 

 

ಇನ್ನಷ್ಟು ಶಾಲೆಗಳಲ್ಲಿ  ಇಂಗುಗುಂಡಿ ರಚನೆಗೆ ಪ್ರೇರೇಪಣೆ ದೊರೆಯಬೇಕಿದೆ. ಶಾಲೆಗಳಲ್ಲಿ  ಒಂದು ಅವಧಿಯಲ್ಲಿ ಜಲಸಂರಕ್ಷಣೆಯ ಮಹತ್ವವನ್ನೇ ತಿಳಿಸುವ ಕೆಲಸ ಆಗಬೇಕಿದೆ.

ಮನೆಮನೆ  ಇಂಗುಗುಂಡಿ ಅಭಿಯಾನದ ಸಂದರ್ಭ ಮರ್ಕಂಜ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾಬಲ ಅವರ ಅನುಭವವನ್ನು ಡಾ.ಚಂದ್ರಶೇಖರ ದಾಮ್ಲೆ ಹೀಗೆ ಹಂಚಿಕೊಂಡಿದ್ದಾರೆ,  ಮರ್ಕಂಜ ಸರಕಾರಿ ಶಾಲೆಯ ಬಾವಿಯಲ್ಲಿ ಈ ವರ್ಷ ನೀರು ಆರಿತ್ತು. ಅಲ್ಲಿಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮಹಾಬಲರು ಕಳೆದವಾರ ಬಾವಿಯಿಂದ  ಆರು ಅಡಿ ದೂರದಲ್ಲಿ  ಎರಡು ಬದಿಗಳಲ್ಲಿ ಒಂದೊಂದು ಇಂಗು ಗುಂಡಿಗಳನ್ನು ಮಾಡಿದರು. ಅಂಗಳದ ಮಳೆನೀರನ್ನು ಆ ಇಂಗು ಗುಂಡಿಗಳಿಗೆ ಹೋಗುವಂತೆ ಮಾಡಿದರು. ಒಂದೇ ದಿನದಲ್ಲಿ ಪರಿಣಾಮ ಕಾಣಿಸಿತು. ಈಗ ಬಾವಿಯಲ್ಲಿ ನೀರು ತುಂಬಿದೆ. ಇದನ್ನು ಶಾಲಾ ಮುಖ್ಯೋಪಾಧ್ಯಾಯ  ರಾಜೀವ್ ಹಾಗೂ ಶಿಕ್ಷಕ ಬಳಗದವರು ಸಂತಸದಿಂದ ಈ ಸುದ್ದಿ  ಹೇಳುತ್ತಾರೆ. 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

6 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

7 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

7 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

14 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

19 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago