Advertisement
MIRROR FOCUS

ಜಲಸಂರಕ್ಷಣೆಯತ್ತ ಗಟ್ಟಿ ಹೆಜ್ಜೆ : ಸುಳ್ಯ ತಾಲೂಕಿನಲ್ಲಿ ಭರವಸೆ ಮೂಡಿಸಿದ ಇಂಗುಗುಂಡಿ ಅಭಿಯಾನ

Share

ಸುಳ್ಯದಲ್ಲಿ  ನಡೆಯುತ್ತಿರುವ ಜಲಾಂದೋಲನ ಭವಿಷ್ಯದ ದೃಷ್ಠಿಯಿಂದ, ಸಮಾಜದ ದೃಷ್ಠಿಯಿಂದಲೂ, ಸಾಮಾಜಿಕ ಕಳಕಳಿಯಿಂದಲೂ ಈ ಅಭಿಯಾನ ಭರವಸೆ ಮೂಡಿಸಿದೆ. ಶಾಲೆಗಳಲ್ಲಿ  ನಡೆಸುತ್ತಿರುವ ಇಂಗುಗುಂಡಿ ಅಭಿಯಾನದ ಮೂಲಕ ಮಕ್ಕಳು ಮನೆಮನೆಯಲ್ಲಿ  ಸಣ್ಣ ಸಣ್ಣ ಇಂಗುಗುಂಡಿ ಮಾಡುತ್ತಿದ್ದಾರೆ. ಯಾವುದೇ ಖರ್ಚಿಲ್ಲದೆ ಮಾಡಬಹುದಾದ ಈ ಕಾರ್ಯದ ಮೇಲೆ ಇಂದಿನ ಬೆಳಕು..


ಸುಳ್ಯ:  ಧನ್ಯವಾದ……

ನಿಹಾರಿಕಾ, 5 ನೇ ತರಗತಿ ಕುಮಾರಸ್ವಾಮಿ ಶಾಲೆ…

ಶುಭಾಶಯ ಇಂಚರ ಶೆಟ್ಟಿ , 7 ನೇ ತರಗತಿ ಕುಮಾರಸ್ವಾಮಿ ಶಾಲೆ…..

ಕಂಗ್ರಾಟ್ಸ್ ರಮೀಜ್..!  9 ನೇ ತರಗತಿ ತೆಕ್ಕಿಲ್ ಶಾಲೆ..

ಇಷ್ಟೇ ಅಲ್ಲ, ಇನ್ನಷ್ಟು ಹೆಸರುಗಳ ಪಟ್ಟಿ ಇದೆ. ಇವರೆಲ್ಲಾ ಮನೆಯಲ್ಲಿ  ಇಂಗುಗುಂಡಿ ನಿರ್ಮಾಣ ಮಾಡಿರುವ ವಿದ್ಯಾರ್ಥಿಗಳು.

 

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ.ಚಂದ್ರಶೇಖರ ದಾಮ್ಲೆ ಅವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಶಾಲೆಗಳಲ್ಲಿ ಜಲಸಂರಕ್ಷಣೆಗಾಗಿ ಮನೆಮನೆ‌ಇಂಗುಗುಂಡಿ ಅಭಿಯಾನ ನಡೆಯುತ್ತಿದೆ. ಜಲಾಮೃತ ಎಂಬ ಹೆಸರಿನಲ್ಲಿ  ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಯೂ ಸಹಕಾರ ನೀಡಿದೆ.

ತಾಲೂಕಿನ ಬಹುಪಾಲು ಶಾಲೆಗಳಲ್ಲಿ  ಈಗಾಗಲೇ ಈ ಅಭಿಯಾನ ನಡೆದಿದೆ.ಸುಮಾರು 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇಂಗುಗುಂಡಿ ರಚನೆ ಹಾಗೂ ಜಲಸಂರಕ್ಷಣೆಯ ಅನಿವಾರ್ಯತೆಯ ಬಗ್ಗೆ ಮಾಹಿತಿ ನೀಡಲಾಗಿದೆ.  ಇದರ ಫಲವಾಗಿ ಇಂದು ವಿದ್ಯಾರ್ಥಿಗಳು ಮನೆಮನೆಗಳಲ್ಲಿ  ಇಂಗುಗುಂಡಿ ಮಾಡಿ ಶಾಲೆಯ ಅಧ್ಯಾಪಕರಿಗೆ ಮಾಹಿತಿ ನೀಡುತ್ತಿದ್ದಾರೆ. ಒಂದು ಇಂಗುಗುಂಡಿ ಮೂಲಕ ಸಣ್ಣ ಪ್ರಮಾಣದಲ್ಲಿ ಜಲ ಮರುಪುರಣವಾಗುತ್ತದೆ. ಭವಿಷ್ಯದಲ್ಲಿ ಇದರ ಪ್ರಯೋಜನ ಸಾಕಷ್ಟು ಮಂದಿಗೆ ಅರಿವಿಗೆ ಬರುತ್ತದೆ. ಹೀಗಾಗಿ ಸ್ನೇಹ ಶಾಲೆಯ ಈ ಯೋಜನೆ ಹಾಗೂ ಶಿಕ್ಷಣ ಇಲಾಖೆಯ ಸಹಕಾರ ಸಮಾಜಕ್ಕೆ ಕೊಡುಗೆಯನ್ನು  ನೀಡಿದೆ.

 

 

ಇನ್ನಷ್ಟು ಶಾಲೆಗಳಲ್ಲಿ  ಇಂಗುಗುಂಡಿ ರಚನೆಗೆ ಪ್ರೇರೇಪಣೆ ದೊರೆಯಬೇಕಿದೆ. ಶಾಲೆಗಳಲ್ಲಿ  ಒಂದು ಅವಧಿಯಲ್ಲಿ ಜಲಸಂರಕ್ಷಣೆಯ ಮಹತ್ವವನ್ನೇ ತಿಳಿಸುವ ಕೆಲಸ ಆಗಬೇಕಿದೆ.

ಮನೆಮನೆ  ಇಂಗುಗುಂಡಿ ಅಭಿಯಾನದ ಸಂದರ್ಭ ಮರ್ಕಂಜ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾಬಲ ಅವರ ಅನುಭವವನ್ನು ಡಾ.ಚಂದ್ರಶೇಖರ ದಾಮ್ಲೆ ಹೀಗೆ ಹಂಚಿಕೊಂಡಿದ್ದಾರೆ,  ಮರ್ಕಂಜ ಸರಕಾರಿ ಶಾಲೆಯ ಬಾವಿಯಲ್ಲಿ ಈ ವರ್ಷ ನೀರು ಆರಿತ್ತು. ಅಲ್ಲಿಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮಹಾಬಲರು ಕಳೆದವಾರ ಬಾವಿಯಿಂದ  ಆರು ಅಡಿ ದೂರದಲ್ಲಿ  ಎರಡು ಬದಿಗಳಲ್ಲಿ ಒಂದೊಂದು ಇಂಗು ಗುಂಡಿಗಳನ್ನು ಮಾಡಿದರು. ಅಂಗಳದ ಮಳೆನೀರನ್ನು ಆ ಇಂಗು ಗುಂಡಿಗಳಿಗೆ ಹೋಗುವಂತೆ ಮಾಡಿದರು. ಒಂದೇ ದಿನದಲ್ಲಿ ಪರಿಣಾಮ ಕಾಣಿಸಿತು. ಈಗ ಬಾವಿಯಲ್ಲಿ ನೀರು ತುಂಬಿದೆ. ಇದನ್ನು ಶಾಲಾ ಮುಖ್ಯೋಪಾಧ್ಯಾಯ  ರಾಜೀವ್ ಹಾಗೂ ಶಿಕ್ಷಕ ಬಳಗದವರು ಸಂತಸದಿಂದ ಈ ಸುದ್ದಿ  ಹೇಳುತ್ತಾರೆ. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

5 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

14 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

14 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

14 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago