Advertisement
MIRROR FOCUS

ಜಲಸಂರಕ್ಷಣೆಯತ್ತ ಗಟ್ಟಿ ಹೆಜ್ಜೆ : ಸುಳ್ಯ ತಾಲೂಕಿನಲ್ಲಿ ಭರವಸೆ ಮೂಡಿಸಿದ ಇಂಗುಗುಂಡಿ ಅಭಿಯಾನ

Share

ಸುಳ್ಯದಲ್ಲಿ  ನಡೆಯುತ್ತಿರುವ ಜಲಾಂದೋಲನ ಭವಿಷ್ಯದ ದೃಷ್ಠಿಯಿಂದ, ಸಮಾಜದ ದೃಷ್ಠಿಯಿಂದಲೂ, ಸಾಮಾಜಿಕ ಕಳಕಳಿಯಿಂದಲೂ ಈ ಅಭಿಯಾನ ಭರವಸೆ ಮೂಡಿಸಿದೆ. ಶಾಲೆಗಳಲ್ಲಿ  ನಡೆಸುತ್ತಿರುವ ಇಂಗುಗುಂಡಿ ಅಭಿಯಾನದ ಮೂಲಕ ಮಕ್ಕಳು ಮನೆಮನೆಯಲ್ಲಿ  ಸಣ್ಣ ಸಣ್ಣ ಇಂಗುಗುಂಡಿ ಮಾಡುತ್ತಿದ್ದಾರೆ. ಯಾವುದೇ ಖರ್ಚಿಲ್ಲದೆ ಮಾಡಬಹುದಾದ ಈ ಕಾರ್ಯದ ಮೇಲೆ ಇಂದಿನ ಬೆಳಕು..


ಸುಳ್ಯ:  ಧನ್ಯವಾದ……

ನಿಹಾರಿಕಾ, 5 ನೇ ತರಗತಿ ಕುಮಾರಸ್ವಾಮಿ ಶಾಲೆ…

ಶುಭಾಶಯ ಇಂಚರ ಶೆಟ್ಟಿ , 7 ನೇ ತರಗತಿ ಕುಮಾರಸ್ವಾಮಿ ಶಾಲೆ…..

ಕಂಗ್ರಾಟ್ಸ್ ರಮೀಜ್..!  9 ನೇ ತರಗತಿ ತೆಕ್ಕಿಲ್ ಶಾಲೆ..

ಇಷ್ಟೇ ಅಲ್ಲ, ಇನ್ನಷ್ಟು ಹೆಸರುಗಳ ಪಟ್ಟಿ ಇದೆ. ಇವರೆಲ್ಲಾ ಮನೆಯಲ್ಲಿ  ಇಂಗುಗುಂಡಿ ನಿರ್ಮಾಣ ಮಾಡಿರುವ ವಿದ್ಯಾರ್ಥಿಗಳು.

 

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ.ಚಂದ್ರಶೇಖರ ದಾಮ್ಲೆ ಅವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಶಾಲೆಗಳಲ್ಲಿ ಜಲಸಂರಕ್ಷಣೆಗಾಗಿ ಮನೆಮನೆ‌ಇಂಗುಗುಂಡಿ ಅಭಿಯಾನ ನಡೆಯುತ್ತಿದೆ. ಜಲಾಮೃತ ಎಂಬ ಹೆಸರಿನಲ್ಲಿ  ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಯೂ ಸಹಕಾರ ನೀಡಿದೆ.

ತಾಲೂಕಿನ ಬಹುಪಾಲು ಶಾಲೆಗಳಲ್ಲಿ  ಈಗಾಗಲೇ ಈ ಅಭಿಯಾನ ನಡೆದಿದೆ.ಸುಮಾರು 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇಂಗುಗುಂಡಿ ರಚನೆ ಹಾಗೂ ಜಲಸಂರಕ್ಷಣೆಯ ಅನಿವಾರ್ಯತೆಯ ಬಗ್ಗೆ ಮಾಹಿತಿ ನೀಡಲಾಗಿದೆ.  ಇದರ ಫಲವಾಗಿ ಇಂದು ವಿದ್ಯಾರ್ಥಿಗಳು ಮನೆಮನೆಗಳಲ್ಲಿ  ಇಂಗುಗುಂಡಿ ಮಾಡಿ ಶಾಲೆಯ ಅಧ್ಯಾಪಕರಿಗೆ ಮಾಹಿತಿ ನೀಡುತ್ತಿದ್ದಾರೆ. ಒಂದು ಇಂಗುಗುಂಡಿ ಮೂಲಕ ಸಣ್ಣ ಪ್ರಮಾಣದಲ್ಲಿ ಜಲ ಮರುಪುರಣವಾಗುತ್ತದೆ. ಭವಿಷ್ಯದಲ್ಲಿ ಇದರ ಪ್ರಯೋಜನ ಸಾಕಷ್ಟು ಮಂದಿಗೆ ಅರಿವಿಗೆ ಬರುತ್ತದೆ. ಹೀಗಾಗಿ ಸ್ನೇಹ ಶಾಲೆಯ ಈ ಯೋಜನೆ ಹಾಗೂ ಶಿಕ್ಷಣ ಇಲಾಖೆಯ ಸಹಕಾರ ಸಮಾಜಕ್ಕೆ ಕೊಡುಗೆಯನ್ನು  ನೀಡಿದೆ.

 

 

ಇನ್ನಷ್ಟು ಶಾಲೆಗಳಲ್ಲಿ  ಇಂಗುಗುಂಡಿ ರಚನೆಗೆ ಪ್ರೇರೇಪಣೆ ದೊರೆಯಬೇಕಿದೆ. ಶಾಲೆಗಳಲ್ಲಿ  ಒಂದು ಅವಧಿಯಲ್ಲಿ ಜಲಸಂರಕ್ಷಣೆಯ ಮಹತ್ವವನ್ನೇ ತಿಳಿಸುವ ಕೆಲಸ ಆಗಬೇಕಿದೆ.

ಮನೆಮನೆ  ಇಂಗುಗುಂಡಿ ಅಭಿಯಾನದ ಸಂದರ್ಭ ಮರ್ಕಂಜ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾಬಲ ಅವರ ಅನುಭವವನ್ನು ಡಾ.ಚಂದ್ರಶೇಖರ ದಾಮ್ಲೆ ಹೀಗೆ ಹಂಚಿಕೊಂಡಿದ್ದಾರೆ,  ಮರ್ಕಂಜ ಸರಕಾರಿ ಶಾಲೆಯ ಬಾವಿಯಲ್ಲಿ ಈ ವರ್ಷ ನೀರು ಆರಿತ್ತು. ಅಲ್ಲಿಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮಹಾಬಲರು ಕಳೆದವಾರ ಬಾವಿಯಿಂದ  ಆರು ಅಡಿ ದೂರದಲ್ಲಿ  ಎರಡು ಬದಿಗಳಲ್ಲಿ ಒಂದೊಂದು ಇಂಗು ಗುಂಡಿಗಳನ್ನು ಮಾಡಿದರು. ಅಂಗಳದ ಮಳೆನೀರನ್ನು ಆ ಇಂಗು ಗುಂಡಿಗಳಿಗೆ ಹೋಗುವಂತೆ ಮಾಡಿದರು. ಒಂದೇ ದಿನದಲ್ಲಿ ಪರಿಣಾಮ ಕಾಣಿಸಿತು. ಈಗ ಬಾವಿಯಲ್ಲಿ ನೀರು ತುಂಬಿದೆ. ಇದನ್ನು ಶಾಲಾ ಮುಖ್ಯೋಪಾಧ್ಯಾಯ  ರಾಜೀವ್ ಹಾಗೂ ಶಿಕ್ಷಕ ಬಳಗದವರು ಸಂತಸದಿಂದ ಈ ಸುದ್ದಿ  ಹೇಳುತ್ತಾರೆ. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

9 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

11 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

16 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

18 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

19 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago