ಕಳೆದ ಸುಮಾರು ಇಪ್ಪತ್ತು ಶತಮಾನಗಳಲ್ಲಿ ಎಪ್ಪತ್ತೇಳು ಜಾತಿಯ(species) ಮೃಗಗಳು(animal) ಕಣ್ಮರೆಯಾಗಿವೆಯೆಂದು(disappear) ತಜ್ಞರೊಬ್ಬರು(Expert) ಹೇಳುತ್ತಾರೆ. ಇವುಗಳಲ್ಲಿ ನಲವತ್ತೇಳು ಜಾತಿ ನಿಸರ್ಗದ(Natural) ಕಾರಣದಿಂದ ಕಳೆದಿವೆಯಂತೆ. ಮಿಕ್ಕ ಮೂವತ್ತು ಜಾತಿ ಮನುಷ್ಯನ(Human) ಕ್ರೌರ್ಯದಿಂದ ಕಾಣೆಯಾಗಿವೆಯಂತೆ! “ಪ್ರಕೃತಿಯ ವಿರುದ್ಧ ನಿಂತ ಮನುಷ್ಯ ನಿಜಕ್ಕೂ ತನ್ನ ಅವನತಿಯನ್ನು ತಾನೇ ಕಂಡುಕೊಳ್ಳುತ್ತಾನೆ” ಎನ್ನುತ್ತಾರೆ ಅವರು.
“ತಾಜಮಹಲಿನಂತಹ ಒಂದು ದಿವ್ಯ ಕಟ್ಟಡ ನಾಶವಾದರೆ, ಅದನ್ನು ಮರಳಿ ಕಟ್ಟಬಹುದು. ದಿಲ್ಲಿಯ ಕೆಂಪುಕೋಟೆಯೇ ನೆಲಸಮವಾದರೂ ಮತ್ತೆ ಅಂತಹ ಕೋಟೆಗಳನ್ನು ಹತ್ತು ಪಟ್ಟು ಬೃಹತ್ತಾಗಿ ಕಟ್ಟಿಸಬಹುದು. ಆದರೆ ಸಿಂಹದಂತಹ, ಹುಲಿಯಂತಹ ಒಂದು ಜೀವಿ ನಿರ್ನಾಮವಾದರೆ ಯಾರಿಂದಲೂ ಅವುಗಳ ಸಂತತಿಯನ್ನು ಬೆಳೆಸಲಾಗುವುದಿಲ್ಲ.” ಗೊಮ್ಮಟನನ್ನು ನಾವು ಕೆತ್ತಬಹುದು, ಆದರೆ ಅಳಿಯುವ ಗುಬ್ಬಿಯ ಸಂತತಿಯನ್ನು ಬೆಳೆಸುವುದು ಸಾಧ್ಯವಾಗುವುದಿಲ್ಲ ಎಂಬುದನ್ನು ಸದಾ ನಾವು ನೆನಪಿನಲ್ಲಿಟ್ಟುಕೊಂಡು ವರ್ತಿಸಬೇಕು.
ಮನುಷ್ಯನನ್ನೇ ಕೊಲ್ಲುವ, ಅದರಿಂದ ಸಂತೋಷಪಡುವ ಮನುಷ್ಯನಿಗೆ ಪ್ರಾಣಿ ಪಕ್ಷಿಗಳನ್ನು ಕೊಲ್ಲುವುದರಲ್ಲಿ ದುಃಖವಿರಲಾರದು ! ತನ್ನ ಆಹಾರಕ್ಕಾಗಿ ಮನುಷ್ಯ ಹಂದಿಶಿಕಾರಿ ಮಾಡಬಹುದು ; ಆದರೆ ಹಂದಿಗಳು ತಮ್ಮ ಆಹಾರಕ್ಕಾಗಿ ಮನುಷ್ಯನ ಬೆಳೆಗಳನ್ನು ತಿನ್ನಬಾರದು ! ತನ್ನ ರಕ್ಷಣೆಗೆಂದು ಮನುಷ್ಯ ಹುಲಿಶಿಕಾರಿ ಮಾಡಬಹುದು ; ಆದರೆ ತನ್ನ ರಕ್ಷಣೆಗೆಂದು ಹುಲಿ ಮನುಷ್ಯನ ಮೇಲೆ ಬೀಳಬಾರದು ! ಇದು ಮನುಷ್ಯ ನ್ಯಾಯ ; ಮನುಷ್ಯನೇ ನಿರ್ಮಿಸಿಕೊಂಡ ಅರಣ್ಯ ನಿಯಮ ! ಈ ಭೂಮಿ ಮನುಷ್ಯನೊಬ್ಬನಿಗಾಗಿ ಸೃಷ್ಟಿಗೊಂಡಿದ್ದೆ ? ಅವನೊಬ್ಬನಿಗೇ ಬದುಕುವ ಹಕ್ಕಿರುವುದೆ ? ಮಿಕ್ಕ ಪ್ರಾಣಿಪಕ್ಷಿಗಳು ನೆಮ್ಮದಿಯಿಂದ ಜೀವಿಸುವಂತಿಲ್ಲವೆ ?- ಇಂಥ ಪ್ರಶ್ನೆಗಳು ನಮ್ಮ ಮನಸ್ಸಿಗೆ ಬರುವುದಿಲ್ಲ ! ಇನ್ನು ಉತ್ತರ ಹೇಳುವ ಪ್ರಮೇಯವೆಲ್ಲಿದೆ ?
– ಹಾ.ಮಾ.ನಾಯಕ {ಡಾ.ಎಂ.ಪಿ ಮಂಜಪ್ಪ ಶೆಟ್ಟಿ ಅವರ ‘ಮಲೆನಾಡಿನ ಶಿಕಾರಿ’ ಪುಸ್ತಕದ ಮುನ್ನುಡಿ}
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…