Advertisement
Opinion

20 ಶತಮಾನಗಳಲ್ಲಿ 77 ಜಾತಿಯ ಮೃಗಗಳು ಕಣ್ಮರೆ | ಪ್ರಕೃತಿಯ ವಿರುದ್ಧ ನಿಂತ ಮನುಷ್ಯ

Share

ಕಳೆದ ಸುಮಾರು ಇಪ್ಪತ್ತು ಶತಮಾನಗಳಲ್ಲಿ ಎಪ್ಪತ್ತೇಳು ಜಾತಿಯ(species) ಮೃಗಗಳು(animal) ಕಣ್ಮರೆಯಾಗಿವೆಯೆಂದು(disappear) ತಜ್ಞರೊಬ್ಬರು(Expert) ಹೇಳುತ್ತಾರೆ. ಇವುಗಳಲ್ಲಿ ನಲವತ್ತೇಳು ಜಾತಿ ನಿಸರ್ಗದ(Natural) ಕಾರಣದಿಂದ ಕಳೆದಿವೆಯಂತೆ. ಮಿಕ್ಕ ಮೂವತ್ತು ಜಾತಿ ಮನುಷ್ಯನ(Human) ಕ್ರೌರ್ಯದಿಂದ ಕಾಣೆಯಾಗಿವೆಯಂತೆ! “ಪ್ರಕೃತಿಯ ವಿರುದ್ಧ ನಿಂತ ಮನುಷ್ಯ ನಿಜಕ್ಕೂ ತನ್ನ ಅವನತಿಯನ್ನು ತಾನೇ ಕಂಡುಕೊಳ್ಳುತ್ತಾನೆ” ಎನ್ನುತ್ತಾರೆ ಅವರು.

“ತಾಜಮಹಲಿನಂತಹ ಒಂದು ದಿವ್ಯ ಕಟ್ಟಡ ನಾಶವಾದರೆ, ಅದನ್ನು ಮರಳಿ ಕಟ್ಟಬಹುದು. ದಿಲ್ಲಿಯ ಕೆಂಪುಕೋಟೆಯೇ ನೆಲಸಮವಾದರೂ ಮತ್ತೆ ಅಂತಹ ಕೋಟೆಗಳನ್ನು ಹತ್ತು ಪಟ್ಟು ಬೃಹತ್ತಾಗಿ ಕಟ್ಟಿಸಬಹುದು. ಆದರೆ ಸಿಂಹದಂತಹ, ಹುಲಿಯಂತಹ ಒಂದು ಜೀವಿ ನಿರ್ನಾಮವಾದರೆ ಯಾರಿಂದಲೂ ಅವುಗಳ ಸಂತತಿಯನ್ನು ಬೆಳೆಸಲಾಗುವುದಿಲ್ಲ.” ಗೊಮ್ಮಟನನ್ನು ನಾವು ಕೆತ್ತಬಹುದು, ಆದರೆ ಅಳಿಯುವ ಗುಬ್ಬಿಯ ಸಂತತಿಯನ್ನು ಬೆಳೆಸುವುದು ಸಾಧ್ಯವಾಗುವುದಿಲ್ಲ ಎಂಬುದನ್ನು ಸದಾ ನಾವು ನೆನಪಿನಲ್ಲಿಟ್ಟುಕೊಂಡು ವರ್ತಿಸಬೇಕು.

ಮನುಷ್ಯನನ್ನೇ ಕೊಲ್ಲುವ, ಅದರಿಂದ ಸಂತೋಷಪಡುವ ಮನುಷ್ಯನಿಗೆ ಪ್ರಾಣಿ ಪಕ್ಷಿಗಳನ್ನು ಕೊಲ್ಲುವುದರಲ್ಲಿ ದುಃಖವಿರಲಾರದು ! ತನ್ನ ಆಹಾರಕ್ಕಾಗಿ ಮನುಷ್ಯ ಹಂದಿಶಿಕಾರಿ ಮಾಡಬಹುದು ; ಆದರೆ ಹಂದಿಗಳು ತಮ್ಮ ಆಹಾರಕ್ಕಾಗಿ ಮನುಷ್ಯನ ಬೆಳೆಗಳನ್ನು ತಿನ್ನಬಾರದು ! ತನ್ನ ರಕ್ಷಣೆಗೆಂದು ಮನುಷ್ಯ ಹುಲಿಶಿಕಾರಿ ಮಾಡಬಹುದು ; ಆದರೆ ತನ್ನ ರಕ್ಷಣೆಗೆಂದು ಹುಲಿ ಮನುಷ್ಯನ ಮೇಲೆ ಬೀಳಬಾರದು ! ಇದು ಮನುಷ್ಯ ನ್ಯಾಯ ; ಮನುಷ್ಯನೇ ನಿರ್ಮಿಸಿಕೊಂಡ ಅರಣ್ಯ ನಿಯಮ ! ಈ ಭೂಮಿ ಮನುಷ್ಯನೊಬ್ಬನಿಗಾಗಿ ಸೃಷ್ಟಿಗೊಂಡಿದ್ದೆ ? ಅವನೊಬ್ಬನಿಗೇ ಬದುಕುವ ಹಕ್ಕಿರುವುದೆ ? ಮಿಕ್ಕ ಪ್ರಾಣಿಪಕ್ಷಿಗಳು ನೆಮ್ಮದಿಯಿಂದ ಜೀವಿಸುವಂತಿಲ್ಲವೆ ?- ಇಂಥ ಪ್ರಶ್ನೆಗಳು ನಮ್ಮ ಮನಸ್ಸಿಗೆ ಬರುವುದಿಲ್ಲ ! ಇನ್ನು ಉತ್ತರ ಹೇಳುವ ಪ್ರಮೇಯವೆಲ್ಲಿದೆ ?

– ಹಾ.ಮಾ.ನಾಯಕ {ಡಾ.ಎಂ.ಪಿ ಮಂಜಪ್ಪ ಶೆಟ್ಟಿ ಅವರ ‘ಮಲೆನಾಡಿನ ಶಿಕಾರಿ’ ಪುಸ್ತಕದ ಮುನ್ನುಡಿ}

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

25 minutes ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

1 hour ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

7 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

8 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

10 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

11 hours ago