Advertisement
Opinion

20 ಶತಮಾನಗಳಲ್ಲಿ 77 ಜಾತಿಯ ಮೃಗಗಳು ಕಣ್ಮರೆ | ಪ್ರಕೃತಿಯ ವಿರುದ್ಧ ನಿಂತ ಮನುಷ್ಯ

Share

ಕಳೆದ ಸುಮಾರು ಇಪ್ಪತ್ತು ಶತಮಾನಗಳಲ್ಲಿ ಎಪ್ಪತ್ತೇಳು ಜಾತಿಯ(species) ಮೃಗಗಳು(animal) ಕಣ್ಮರೆಯಾಗಿವೆಯೆಂದು(disappear) ತಜ್ಞರೊಬ್ಬರು(Expert) ಹೇಳುತ್ತಾರೆ. ಇವುಗಳಲ್ಲಿ ನಲವತ್ತೇಳು ಜಾತಿ ನಿಸರ್ಗದ(Natural) ಕಾರಣದಿಂದ ಕಳೆದಿವೆಯಂತೆ. ಮಿಕ್ಕ ಮೂವತ್ತು ಜಾತಿ ಮನುಷ್ಯನ(Human) ಕ್ರೌರ್ಯದಿಂದ ಕಾಣೆಯಾಗಿವೆಯಂತೆ! “ಪ್ರಕೃತಿಯ ವಿರುದ್ಧ ನಿಂತ ಮನುಷ್ಯ ನಿಜಕ್ಕೂ ತನ್ನ ಅವನತಿಯನ್ನು ತಾನೇ ಕಂಡುಕೊಳ್ಳುತ್ತಾನೆ” ಎನ್ನುತ್ತಾರೆ ಅವರು.

“ತಾಜಮಹಲಿನಂತಹ ಒಂದು ದಿವ್ಯ ಕಟ್ಟಡ ನಾಶವಾದರೆ, ಅದನ್ನು ಮರಳಿ ಕಟ್ಟಬಹುದು. ದಿಲ್ಲಿಯ ಕೆಂಪುಕೋಟೆಯೇ ನೆಲಸಮವಾದರೂ ಮತ್ತೆ ಅಂತಹ ಕೋಟೆಗಳನ್ನು ಹತ್ತು ಪಟ್ಟು ಬೃಹತ್ತಾಗಿ ಕಟ್ಟಿಸಬಹುದು. ಆದರೆ ಸಿಂಹದಂತಹ, ಹುಲಿಯಂತಹ ಒಂದು ಜೀವಿ ನಿರ್ನಾಮವಾದರೆ ಯಾರಿಂದಲೂ ಅವುಗಳ ಸಂತತಿಯನ್ನು ಬೆಳೆಸಲಾಗುವುದಿಲ್ಲ.” ಗೊಮ್ಮಟನನ್ನು ನಾವು ಕೆತ್ತಬಹುದು, ಆದರೆ ಅಳಿಯುವ ಗುಬ್ಬಿಯ ಸಂತತಿಯನ್ನು ಬೆಳೆಸುವುದು ಸಾಧ್ಯವಾಗುವುದಿಲ್ಲ ಎಂಬುದನ್ನು ಸದಾ ನಾವು ನೆನಪಿನಲ್ಲಿಟ್ಟುಕೊಂಡು ವರ್ತಿಸಬೇಕು.

ಮನುಷ್ಯನನ್ನೇ ಕೊಲ್ಲುವ, ಅದರಿಂದ ಸಂತೋಷಪಡುವ ಮನುಷ್ಯನಿಗೆ ಪ್ರಾಣಿ ಪಕ್ಷಿಗಳನ್ನು ಕೊಲ್ಲುವುದರಲ್ಲಿ ದುಃಖವಿರಲಾರದು ! ತನ್ನ ಆಹಾರಕ್ಕಾಗಿ ಮನುಷ್ಯ ಹಂದಿಶಿಕಾರಿ ಮಾಡಬಹುದು ; ಆದರೆ ಹಂದಿಗಳು ತಮ್ಮ ಆಹಾರಕ್ಕಾಗಿ ಮನುಷ್ಯನ ಬೆಳೆಗಳನ್ನು ತಿನ್ನಬಾರದು ! ತನ್ನ ರಕ್ಷಣೆಗೆಂದು ಮನುಷ್ಯ ಹುಲಿಶಿಕಾರಿ ಮಾಡಬಹುದು ; ಆದರೆ ತನ್ನ ರಕ್ಷಣೆಗೆಂದು ಹುಲಿ ಮನುಷ್ಯನ ಮೇಲೆ ಬೀಳಬಾರದು ! ಇದು ಮನುಷ್ಯ ನ್ಯಾಯ ; ಮನುಷ್ಯನೇ ನಿರ್ಮಿಸಿಕೊಂಡ ಅರಣ್ಯ ನಿಯಮ ! ಈ ಭೂಮಿ ಮನುಷ್ಯನೊಬ್ಬನಿಗಾಗಿ ಸೃಷ್ಟಿಗೊಂಡಿದ್ದೆ ? ಅವನೊಬ್ಬನಿಗೇ ಬದುಕುವ ಹಕ್ಕಿರುವುದೆ ? ಮಿಕ್ಕ ಪ್ರಾಣಿಪಕ್ಷಿಗಳು ನೆಮ್ಮದಿಯಿಂದ ಜೀವಿಸುವಂತಿಲ್ಲವೆ ?- ಇಂಥ ಪ್ರಶ್ನೆಗಳು ನಮ್ಮ ಮನಸ್ಸಿಗೆ ಬರುವುದಿಲ್ಲ ! ಇನ್ನು ಉತ್ತರ ಹೇಳುವ ಪ್ರಮೇಯವೆಲ್ಲಿದೆ ?

– ಹಾ.ಮಾ.ನಾಯಕ {ಡಾ.ಎಂ.ಪಿ ಮಂಜಪ್ಪ ಶೆಟ್ಟಿ ಅವರ ‘ಮಲೆನಾಡಿನ ಶಿಕಾರಿ’ ಪುಸ್ತಕದ ಮುನ್ನುಡಿ}

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

11 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

18 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago