78ನೇ ಸ್ವಾತಂತ್ರ್ಯ ದಿನಾಚರಣೆ | ರಾಜಭವನದ ಅಂಗಳದಲ್ಲಿ ಧ್ವಜಾರೋಹಣ ನೇರವೇರಿಸಿದ ರಾಜ್ಯಪಾಲರು

August 15, 2024
11:53 AM

ಸ್ವಾತಂತ್ರ್ಯೋತ್ಸವದ(Independence day) ಅಮೃತ ಮಹೋತ್ಸವ ಹಾಗೂ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜಭವನದ(Rajabhavana) ಅಂಗಳದಲ್ಲಿ ಗುರುವಾರ ಕರ್ನಾಟಕದ(Karnataka) ರಾಜ್ಯಪಾಲರಾದ(Governor) ಶ್ರೀ ಥಾವರ್ ಚಂದ್ ಗೆಹ್ಲೋಟ್(Thaawarchand Gehlot) ಧ್ವಜಾರೋಹಣ(flag hoist) ನೆರವೇರಿಸಿದರು.

ರಾಜಭವನದ ಅಂಗಳದಲ್ಲಿರುವ ಮಹಾತ್ಮಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಭದ್ರತಾ ಅಧಿಕಾರಿ ಎಸಿಪಿ ನಿಂಗಾರೆಡ್ಡಿ ನೇತೃತ್ವದ ಪೊಲೀಸ್ ತಂಡದಿಂದ ಗೌರವ ರಕ್ಷೆ ನೀಡಲಾಯಿತು.

ರಾಜ್ಯದ ಜನತೆಗೆ ರಾಜ್ಯಪಾಲರ ಸಂದೇಶ: ಕರ್ನಾಟಕದ ಜನತೆಗೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಆಗಸ್ಟ್ 15 ನಮಗೆ ಐತಿಹಾಸಿಕ ದಿನ ಮತ್ತು ನಮಗೆ ಸ್ವಾತಂತ್ರ್ಯ ನೀಡಿದ ಆ ಮಹಾಪುರುಷರು ಮತ್ತು ಹುತಾತ್ಮರನ್ನು ಸ್ಮರಿಸುವ ದಿನ. ಈ ದಿನ ಅವರಿಂದ ಸ್ಫೂರ್ತಿ ಪಡೆದು ಹೊಸ ಹಾದಿ ಮತ್ತು ಹೊಸ ಸಂಕಲ್ಪದೊಂದಿಗೆ ಮುನ್ನಡೆಯಲು ಅವಕಾಶವಿದೆ ಎಂದರು.

ಕರ್ನಾಟಕ ದೇಶದ ಪ್ರಗತಿಪರ ರಾಜ್ಯ. ಕರ್ನಾಟಕ ರಾಜ್ಯವು ಅಭಿವೃದ್ಧಿ ಉಪಕ್ರಮಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಗುರಿಯೊಂದಿಗೆ ಮೂಲ ಸೇವೆಗಳಿಗೆ ಪ್ರವೇಶ ಸೇರಿದಂತೆ ವಿವಿಧ ನವೀನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಮ್ಮ ರಾಜ್ಯವು ಪ್ರವರ್ತಕವಾಗಿದೆ ಎಂದು ತಿಳಿಸಿದರು.

ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರದಿಂದ 5 ಖಾತರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಸ್ವಾತಂತ್ರ್ಯಾನಂತರ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿ ಸರ್ವತೋಮುಖ ಅಭಿವೃದ್ಧಿಯಾಗಿದ್ದು, ದೇಶದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ ಪ್ರಮುಖ ದೇಶಗಳಲ್ಲಿ 5 ನೇ ಸ್ಥಾನದಲ್ಲಿದೆ. ಸ್ವಾತಂತ್ರ್ಯದ 100 ನೇ ವರ್ಷಾಚರಣೆಯ ಸಂದರ್ಭದಲ್ಲಿ ಭಾರತವು 100% ವಿದ್ಯಾವಂತರಾಗಿ, ಆರ್ಥಿಕವಾಗಿ ಸದೃಢವಾಗಬೇಕು ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿರಬೇಕು ಎಂಬುದು ಭಾರತದ ಜನರ ನಿರೀಕ್ಷೆಯಾಗಿದೆ. ಇದಕ್ಕಾಗಿ ನಾವೆಲ್ಲರೂ ದೇಶಕ್ಕಾಗಿ ನಮ್ಮ ಕರ್ತವ್ಯಗಳನ್ನು ಭಕ್ತಿ ಮತ್ತು ಸಮರ್ಪಣಾ ಭಾವದಿಂದ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

Advertisement

ಪ್ರಸ್ತುತ ದೇಶ ಮತ್ತು ವಿಶ್ವದಲ್ಲಿ ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಇದೆ. ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ‘ಅಮ್ಮನ ಹೆಸರಲ್ಲಿ ಒಂದು ಮರ’ ಅಭಿಯಾನದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಮಹತ್ವದ ಕೆಲಸ ಮಾಡಬೇಕು. ಪ್ಯಾರಿಸ್‌ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪದಕಗಳನ್ನು ಗೆದ್ದು ಉತ್ತಮ ಪ್ರದರ್ಶನ ನೀಡಿದ ಎಲ್ಲಾ ಭಾರತೀಯ ಕ್ರೀಡಾಪಟುಗಳಿಗೆ ಅಭಿನಂದನೆಗಳು ಎಂದು ಅವರು ಹೇಳಿದರು.

ನಮ್ಮ ದೇಶದ ಆರ್ಥಿಕತೆಯನ್ನು ಬಲಪಡಿಸಲು, ಪರಿಸರವನ್ನು ಸಂರಕ್ಷಿಸಲು ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಮತ್ತು ದೇಶದ ಭವಿಷ್ಯದ ಪೀಳಿಗೆಗಳು ನಮ್ಮ ಬಗ್ಗೆ ಉತ್ತಮ ಗ್ರಹಿಕೆಯನ್ನು ಬೆಳೆಸಿಕೊಳ್ಳುವಂತೆ ಶ್ರಮಿಸೋಣ ಎಂದು ಗೌರವಾನ್ವಿತ ರಾಜ್ಯಪಾಲರು ಕರೆ ನೀಡಿದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?
January 9, 2026
10:08 PM
by: ದ ರೂರಲ್ ಮಿರರ್.ಕಾಂ
ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ
January 9, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror