Advertisement
MIRROR FOCUS

#independenceDay |ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ | ಊರುಗಳು ಚಿಕ್ಕದಾಗಿರಬಹುದು, ಅವುಗಳ ಶಕ್ತಿ ದೊಡ್ಡದಿದೆ |

Share

ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ನವದೆಹಲಿಯ ಕೆಂಪು ಕೋಟೆಯಲ್ಲಿ(RedFort)   ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು. ನಂತರ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಐಎಎಫ್ ಹೆಲಿಕಾಪ್ಟರ್ ತ್ರಿವರ್ಣ ಧ್ವಜಕ್ಕೆ ಪುಷ್ಪವೃಷ್ಟಿ ಮಾಡಿತು.

Advertisement
Advertisement

Advertisement

ಸ್ವಾತಂತ್ರೋತ್ಸವ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ನಾವು ತೆಗೆದುಕೊಳ್ಳುವ ನಿರ್ಧಾರ ಮುಂದಿನ ಒಂದು ಸಾವಿರ ವರ್ಷ ಭಾರತ ದಿಕ್ಕನ್ನು ತೋರಿಸಲಿದೆ. ಈ ಅವಧಿಯಲ್ಲಿ ತೆಗೆದುಕೊಳ್ಳುವ ನಿರ್ಧಾರ ಮುಂದಿನ ಒಂದು ಸಾವಿರ ವರ್ಷದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಸಮಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ, 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಗುಲಾಮಿ ಮನಸ್ಥಿತಿಯಿಂದ ಹೊರ ಬರುವ ನಿರ್ಧಾರ ತೆಗೆದುಕೊಳ್ಳುವ ಸಮಯವಾಗಿದೆ. ಭಾರತ ಹೊಸ ಸಾಮರ್ಥ್ಯದೊಂದಿಗೆ ಎಲ್ಲರನ್ನು ಸೆಳೆಯಲಿದೆ‌. ಈ ಹಿಂದಿನ ಗುಲಾಮಿ ವ್ಯವಸ್ಥೆ ಮತ್ತು ಮುಂದಿನ ಒಂದು ಸಾವಿರ ವರ್ಷದ ಭವ್ಯ ಭಾರತದ ನಡುವೆ ನಾವಿದ್ದೇವೆ ಎಂದು ತಿಳಿಸಿದರು.

Advertisement

ಸ್ವಾತಂತ್ರ್ಯ ಹೋರಾಟಗಾರದಲ್ಲಿ ಹೋರಾಟ ಮಾಡಿದ, ಬಲಿದಾನ ನೀಡಿದ ಎಲ್ಲ ಹೋರಾಟಗಾರಿಗೆ ಗೌರವ ಸಲ್ಲಿಸುತ್ತೇನೆ. ಇದು ಅಮೃತ ಕಾಲದ ಮೊದಲ ವರ್ಷ. ಈ ಅವಧಿಯಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರ ದೇಶದ ಎಲ್ಲ ಜನರ ಹಿತಾಸಕ್ತಿ ಕಾಪಾಡಲಿದೆ. ಇಂದು ನಮ್ಮ ಯುವಕರಿಗೆ ಹೊಸ ಅವಕಾಶ ಸಿಕ್ಕಿದೆ. ನಮ್ಮ ಸರ್ಕಾರದ ನೀತಿಯೂ ಯುವ ಶಕ್ತಿಗೆ ಬಲ ನೀಡಲಿದೆ. ಸ್ಟಾರ್ಟ್ ಅಪ್‌ಗೆ ಅವಕಾಶ ನೀಡಿದೆ. ಭಾರತ ಈಗ ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್ ಅಪ್ ದೇಶವಾಗಿದೆ.

ಸಣ್ಣ ನಗರಗಳಿಂದಲೂ ಪ್ರತಿಭೆಗಳು ಹೊರ ಬರುತ್ತಿವೆ. ಸಣ್ಣ ಊರುಗಳು ಚಿಕ್ಕದಾಗಿರಬಹುದು, ಅವುಗಳ ಶಕ್ತಿ ದೊಡ್ಡದಿದೆ. ಬಡ ಕುಟುಂಬಗಳಿಂದ ಬರುವ ಯುವಕರು ಸಾಧನೆ ಮಾಡುತ್ತಿದ್ದಾರೆ. ಅವಕಾಶಗಳಿಗೆ ಕಡಿಮೆ ಏನು ಇಲ್ಲ. ಎಲ್ಲ ಅವಕಾಶಗಳನ್ನು ಸರ್ಕಾರ ನೀಡಲಿದೆ ಎಂದರು. ಮಹಿಳೆಯರಿಂದ ದೇಶ ಮುಂದುವರಿಯುತ್ತಿದೆ. ದೇಶದ ಅಭಿವೃದ್ಧಿಗೆ ಕೆಲಸ ಮಾಡುತ್ತಿರುವ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ದೇಶದಲ್ಲಿ ಜಿ20 ಕಾರ್ಯಕ್ರಮ ನಡೆಯುತ್ತಿವೆ. ದೇಶದ ಶಕ್ತಿ, ವಿವಿಧತೆಯನ್ನು ಪರಿಚಯಿಸಲಾಗುತ್ತಿದೆ. ಭಾರತ ಎಲ್ಲರನ್ನು ಆಕರ್ಷಿಸುತ್ತಿದೆ. ಭಾರತದ ರಪ್ತು ಹೆಚ್ಚಾಗುತ್ತಿದೆ. ಇನ್ನು ಭಾರತವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೊರೋನಾ ಕಾಲದಲ್ಲಿ ವಿಶ್ವ ನಮ್ಮ ಶಕ್ತಿಯನ್ನು ನೋಡಿದೆ. ಸಂಕಷ್ಟದ ಸಮಯದಲ್ಲೂ ಮಾನವೀಯತೆ ಮೆರೆದಿದ್ದೇವೆ. ಭಾರತದ ಮೇಲೆ ಹೊಸ ವಿಶ್ವಾಸ ಮೂಡಿದೆ. ಈ ಸಮಯವನ್ನು ನಾವು ಬಿಟ್ಟು ಕೊಡಬಾರದು ಎಂದು ಕರೆ ನೀಡಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

9 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

9 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

10 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

10 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

13 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

15 hours ago