Advertisement
MIRROR FOCUS

#independenceDay |ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ | ಊರುಗಳು ಚಿಕ್ಕದಾಗಿರಬಹುದು, ಅವುಗಳ ಶಕ್ತಿ ದೊಡ್ಡದಿದೆ |

Share

ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ನವದೆಹಲಿಯ ಕೆಂಪು ಕೋಟೆಯಲ್ಲಿ(RedFort)   ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು. ನಂತರ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಐಎಎಫ್ ಹೆಲಿಕಾಪ್ಟರ್ ತ್ರಿವರ್ಣ ಧ್ವಜಕ್ಕೆ ಪುಷ್ಪವೃಷ್ಟಿ ಮಾಡಿತು.

ಸ್ವಾತಂತ್ರೋತ್ಸವ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ನಾವು ತೆಗೆದುಕೊಳ್ಳುವ ನಿರ್ಧಾರ ಮುಂದಿನ ಒಂದು ಸಾವಿರ ವರ್ಷ ಭಾರತ ದಿಕ್ಕನ್ನು ತೋರಿಸಲಿದೆ. ಈ ಅವಧಿಯಲ್ಲಿ ತೆಗೆದುಕೊಳ್ಳುವ ನಿರ್ಧಾರ ಮುಂದಿನ ಒಂದು ಸಾವಿರ ವರ್ಷದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಸಮಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ, 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಗುಲಾಮಿ ಮನಸ್ಥಿತಿಯಿಂದ ಹೊರ ಬರುವ ನಿರ್ಧಾರ ತೆಗೆದುಕೊಳ್ಳುವ ಸಮಯವಾಗಿದೆ. ಭಾರತ ಹೊಸ ಸಾಮರ್ಥ್ಯದೊಂದಿಗೆ ಎಲ್ಲರನ್ನು ಸೆಳೆಯಲಿದೆ‌. ಈ ಹಿಂದಿನ ಗುಲಾಮಿ ವ್ಯವಸ್ಥೆ ಮತ್ತು ಮುಂದಿನ ಒಂದು ಸಾವಿರ ವರ್ಷದ ಭವ್ಯ ಭಾರತದ ನಡುವೆ ನಾವಿದ್ದೇವೆ ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟಗಾರದಲ್ಲಿ ಹೋರಾಟ ಮಾಡಿದ, ಬಲಿದಾನ ನೀಡಿದ ಎಲ್ಲ ಹೋರಾಟಗಾರಿಗೆ ಗೌರವ ಸಲ್ಲಿಸುತ್ತೇನೆ. ಇದು ಅಮೃತ ಕಾಲದ ಮೊದಲ ವರ್ಷ. ಈ ಅವಧಿಯಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರ ದೇಶದ ಎಲ್ಲ ಜನರ ಹಿತಾಸಕ್ತಿ ಕಾಪಾಡಲಿದೆ. ಇಂದು ನಮ್ಮ ಯುವಕರಿಗೆ ಹೊಸ ಅವಕಾಶ ಸಿಕ್ಕಿದೆ. ನಮ್ಮ ಸರ್ಕಾರದ ನೀತಿಯೂ ಯುವ ಶಕ್ತಿಗೆ ಬಲ ನೀಡಲಿದೆ. ಸ್ಟಾರ್ಟ್ ಅಪ್‌ಗೆ ಅವಕಾಶ ನೀಡಿದೆ. ಭಾರತ ಈಗ ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್ ಅಪ್ ದೇಶವಾಗಿದೆ.

ಸಣ್ಣ ನಗರಗಳಿಂದಲೂ ಪ್ರತಿಭೆಗಳು ಹೊರ ಬರುತ್ತಿವೆ. ಸಣ್ಣ ಊರುಗಳು ಚಿಕ್ಕದಾಗಿರಬಹುದು, ಅವುಗಳ ಶಕ್ತಿ ದೊಡ್ಡದಿದೆ. ಬಡ ಕುಟುಂಬಗಳಿಂದ ಬರುವ ಯುವಕರು ಸಾಧನೆ ಮಾಡುತ್ತಿದ್ದಾರೆ. ಅವಕಾಶಗಳಿಗೆ ಕಡಿಮೆ ಏನು ಇಲ್ಲ. ಎಲ್ಲ ಅವಕಾಶಗಳನ್ನು ಸರ್ಕಾರ ನೀಡಲಿದೆ ಎಂದರು. ಮಹಿಳೆಯರಿಂದ ದೇಶ ಮುಂದುವರಿಯುತ್ತಿದೆ. ದೇಶದ ಅಭಿವೃದ್ಧಿಗೆ ಕೆಲಸ ಮಾಡುತ್ತಿರುವ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ದೇಶದಲ್ಲಿ ಜಿ20 ಕಾರ್ಯಕ್ರಮ ನಡೆಯುತ್ತಿವೆ. ದೇಶದ ಶಕ್ತಿ, ವಿವಿಧತೆಯನ್ನು ಪರಿಚಯಿಸಲಾಗುತ್ತಿದೆ. ಭಾರತ ಎಲ್ಲರನ್ನು ಆಕರ್ಷಿಸುತ್ತಿದೆ. ಭಾರತದ ರಪ್ತು ಹೆಚ್ಚಾಗುತ್ತಿದೆ. ಇನ್ನು ಭಾರತವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೊರೋನಾ ಕಾಲದಲ್ಲಿ ವಿಶ್ವ ನಮ್ಮ ಶಕ್ತಿಯನ್ನು ನೋಡಿದೆ. ಸಂಕಷ್ಟದ ಸಮಯದಲ್ಲೂ ಮಾನವೀಯತೆ ಮೆರೆದಿದ್ದೇವೆ. ಭಾರತದ ಮೇಲೆ ಹೊಸ ವಿಶ್ವಾಸ ಮೂಡಿದೆ. ಈ ಸಮಯವನ್ನು ನಾವು ಬಿಟ್ಟು ಕೊಡಬಾರದು ಎಂದು ಕರೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

43 minutes ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

2 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

3 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

4 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

10 hours ago