7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ | 20 ಭಾಷೆಯ 100ಕ್ಕೂ ಅಧಿಕ ಸಿನಿಮಾ ಪ್ರದರ್ಶನ

October 5, 2024
8:02 PM

ಇನೋವೇಟಿವ್ ಫಿಲ್ಮಂ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ  ಕಾರ್ಯದರ್ಶಿ ಸಂಜಯ ಜಾಜು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ ಚಿತ್ರರಂಗದ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಮೂರು ದಿನಗಳ ಕಾರ್ಯಕ್ರಮದಲ್ಲಿ   20ಕ್ಕೂ ಹೆಚ್ಚು ಭಾಷೆಯ   ನೂರಕ್ಕೂ  ಅಧಿಕ ಸಿನಿಮಾ ಪ್ರದರ್ಶನ,  15ಕ್ಕೂ ಹೆಚ್ಚು ದೇಶಗಳ ಸಿನಿ ಆಸಕ್ತರು ಮತ್ತು ತಜ್ಞರಿಂದ ಪರಸ್ಪರ ಮಾಹಿತಿ ವಿನಿಮಯ ಮತ್ತು ಚರ್ಚೆ ನಡೆಯಲಿವೆ. ಬಳಿಕ  ಸಂಜಯ್ ಜಾಜು, ಸಿನಿಮಾ,  ಎಲ್ಲ ತರಹದ ಭಾವನೆಗಳನ್ನು ಒಳಗೊಂಡ ಸಂಕಲನ. ಮನೋರಂಜನೆಯ ಮುಖ್ಯ ತಾಣ ಸಿನಿಮಾ.  ಇಂದು  ಉತ್ಸಾಹಿ ಯುವಕರಿಂದ  ಉತ್ತಮ ಚಿತ್ರಗಳು   ನಿರ್ಮಾಣಗೊಳ್ಳುತ್ತಿವೆ. ಯುವ ಸಮುದಾಯಕ್ಕೆ ಸಹಕಾರ  ಲಭಿಸಿದರೆ,  ಭವಿಷ್ಯದಲ್ಲಿ  ಗುಣಮಟ್ಟದ ಚಿತ್ರಗಳು  ಹೊರಬರಲು ಸಾಧ್ಯವಾಗಲಿದೆ ಎಂದರು. ಈ ವೇಳೆ  ನಟಿ ಮಾಲಾಶ್ರೀ ಅವರಿಗೆ  ಆಕ್ಷನ್ ಕ್ವೀನ್ ಆಫ್ ಇಂಡಿಯಾ ಪ್ರಶಸ್ತಿ, ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ  ಕೌಟುಂಬಿಕ ಮನರಂಜನಾ ಪ್ರಶಸ್ತಿ, ಅತ್ಯುತ್ತಮ ನಟ ಪ್ರಶಸ್ತಿಯನ್ನು ತೇಜ ಸಜ್ಜ ಪಡೆದರೆ,   ಮುರಳಿ ಶರ್ಮಾ ಬಹುಮುಖ ನಟ ಪ್ರಶಸ್ತಿಯನ್ನು ಹಾಗೂ   ಕುಟ್ಟಿ ಪದ್ಮಿನಿ ಅವರು  ಭಾರತೀಯ ಚಿತ್ರರಂಗದ ಸ್ಫೂರ್ತಿ ಪ್ರಶಸ್ತಿ  ಸ್ವೀಕರಿಸಿದರು.

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..
December 17, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ
2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು
December 17, 2025
7:02 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror