ಇನೋವೇಟಿವ್ ಫಿಲ್ಮಂ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಸಂಜಯ ಜಾಜು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ ಚಿತ್ರರಂಗದ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಮೂರು ದಿನಗಳ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚು ಭಾಷೆಯ ನೂರಕ್ಕೂ ಅಧಿಕ ಸಿನಿಮಾ ಪ್ರದರ್ಶನ, 15ಕ್ಕೂ ಹೆಚ್ಚು ದೇಶಗಳ ಸಿನಿ ಆಸಕ್ತರು ಮತ್ತು ತಜ್ಞರಿಂದ ಪರಸ್ಪರ ಮಾಹಿತಿ ವಿನಿಮಯ ಮತ್ತು ಚರ್ಚೆ ನಡೆಯಲಿವೆ. ಬಳಿಕ ಸಂಜಯ್ ಜಾಜು, ಸಿನಿಮಾ, ಎಲ್ಲ ತರಹದ ಭಾವನೆಗಳನ್ನು ಒಳಗೊಂಡ ಸಂಕಲನ. ಮನೋರಂಜನೆಯ ಮುಖ್ಯ ತಾಣ ಸಿನಿಮಾ. ಇಂದು ಉತ್ಸಾಹಿ ಯುವಕರಿಂದ ಉತ್ತಮ ಚಿತ್ರಗಳು ನಿರ್ಮಾಣಗೊಳ್ಳುತ್ತಿವೆ. ಯುವ ಸಮುದಾಯಕ್ಕೆ ಸಹಕಾರ ಲಭಿಸಿದರೆ, ಭವಿಷ್ಯದಲ್ಲಿ ಗುಣಮಟ್ಟದ ಚಿತ್ರಗಳು ಹೊರಬರಲು ಸಾಧ್ಯವಾಗಲಿದೆ ಎಂದರು. ಈ ವೇಳೆ ನಟಿ ಮಾಲಾಶ್ರೀ ಅವರಿಗೆ ಆಕ್ಷನ್ ಕ್ವೀನ್ ಆಫ್ ಇಂಡಿಯಾ ಪ್ರಶಸ್ತಿ, ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಕೌಟುಂಬಿಕ ಮನರಂಜನಾ ಪ್ರಶಸ್ತಿ, ಅತ್ಯುತ್ತಮ ನಟ ಪ್ರಶಸ್ತಿಯನ್ನು ತೇಜ ಸಜ್ಜ ಪಡೆದರೆ, ಮುರಳಿ ಶರ್ಮಾ ಬಹುಮುಖ ನಟ ಪ್ರಶಸ್ತಿಯನ್ನು ಹಾಗೂ ಕುಟ್ಟಿ ಪದ್ಮಿನಿ ಅವರು ಭಾರತೀಯ ಚಿತ್ರರಂಗದ ಸ್ಫೂರ್ತಿ ಪ್ರಶಸ್ತಿ ಸ್ವೀಕರಿಸಿದರು.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…