Advertisement
ಸುದ್ದಿಗಳು

7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ | 20 ಭಾಷೆಯ 100ಕ್ಕೂ ಅಧಿಕ ಸಿನಿಮಾ ಪ್ರದರ್ಶನ

Share

ಇನೋವೇಟಿವ್ ಫಿಲ್ಮಂ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ  ಕಾರ್ಯದರ್ಶಿ ಸಂಜಯ ಜಾಜು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ ಚಿತ್ರರಂಗದ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಮೂರು ದಿನಗಳ ಕಾರ್ಯಕ್ರಮದಲ್ಲಿ   20ಕ್ಕೂ ಹೆಚ್ಚು ಭಾಷೆಯ   ನೂರಕ್ಕೂ  ಅಧಿಕ ಸಿನಿಮಾ ಪ್ರದರ್ಶನ,  15ಕ್ಕೂ ಹೆಚ್ಚು ದೇಶಗಳ ಸಿನಿ ಆಸಕ್ತರು ಮತ್ತು ತಜ್ಞರಿಂದ ಪರಸ್ಪರ ಮಾಹಿತಿ ವಿನಿಮಯ ಮತ್ತು ಚರ್ಚೆ ನಡೆಯಲಿವೆ. ಬಳಿಕ  ಸಂಜಯ್ ಜಾಜು, ಸಿನಿಮಾ,  ಎಲ್ಲ ತರಹದ ಭಾವನೆಗಳನ್ನು ಒಳಗೊಂಡ ಸಂಕಲನ. ಮನೋರಂಜನೆಯ ಮುಖ್ಯ ತಾಣ ಸಿನಿಮಾ.  ಇಂದು  ಉತ್ಸಾಹಿ ಯುವಕರಿಂದ  ಉತ್ತಮ ಚಿತ್ರಗಳು   ನಿರ್ಮಾಣಗೊಳ್ಳುತ್ತಿವೆ. ಯುವ ಸಮುದಾಯಕ್ಕೆ ಸಹಕಾರ  ಲಭಿಸಿದರೆ,  ಭವಿಷ್ಯದಲ್ಲಿ  ಗುಣಮಟ್ಟದ ಚಿತ್ರಗಳು  ಹೊರಬರಲು ಸಾಧ್ಯವಾಗಲಿದೆ ಎಂದರು. ಈ ವೇಳೆ  ನಟಿ ಮಾಲಾಶ್ರೀ ಅವರಿಗೆ  ಆಕ್ಷನ್ ಕ್ವೀನ್ ಆಫ್ ಇಂಡಿಯಾ ಪ್ರಶಸ್ತಿ, ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ  ಕೌಟುಂಬಿಕ ಮನರಂಜನಾ ಪ್ರಶಸ್ತಿ, ಅತ್ಯುತ್ತಮ ನಟ ಪ್ರಶಸ್ತಿಯನ್ನು ತೇಜ ಸಜ್ಜ ಪಡೆದರೆ,   ಮುರಳಿ ಶರ್ಮಾ ಬಹುಮುಖ ನಟ ಪ್ರಶಸ್ತಿಯನ್ನು ಹಾಗೂ   ಕುಟ್ಟಿ ಪದ್ಮಿನಿ ಅವರು  ಭಾರತೀಯ ಚಿತ್ರರಂಗದ ಸ್ಫೂರ್ತಿ ಪ್ರಶಸ್ತಿ  ಸ್ವೀಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

9 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

18 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

19 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

23 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

24 hours ago