ಇನೋವೇಟಿವ್ ಫಿಲ್ಮಂ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಸಂಜಯ ಜಾಜು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ ಚಿತ್ರರಂಗದ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಮೂರು ದಿನಗಳ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚು ಭಾಷೆಯ ನೂರಕ್ಕೂ ಅಧಿಕ ಸಿನಿಮಾ ಪ್ರದರ್ಶನ, 15ಕ್ಕೂ ಹೆಚ್ಚು ದೇಶಗಳ ಸಿನಿ ಆಸಕ್ತರು ಮತ್ತು ತಜ್ಞರಿಂದ ಪರಸ್ಪರ ಮಾಹಿತಿ ವಿನಿಮಯ ಮತ್ತು ಚರ್ಚೆ ನಡೆಯಲಿವೆ. ಬಳಿಕ ಸಂಜಯ್ ಜಾಜು, ಸಿನಿಮಾ, ಎಲ್ಲ ತರಹದ ಭಾವನೆಗಳನ್ನು ಒಳಗೊಂಡ ಸಂಕಲನ. ಮನೋರಂಜನೆಯ ಮುಖ್ಯ ತಾಣ ಸಿನಿಮಾ. ಇಂದು ಉತ್ಸಾಹಿ ಯುವಕರಿಂದ ಉತ್ತಮ ಚಿತ್ರಗಳು ನಿರ್ಮಾಣಗೊಳ್ಳುತ್ತಿವೆ. ಯುವ ಸಮುದಾಯಕ್ಕೆ ಸಹಕಾರ ಲಭಿಸಿದರೆ, ಭವಿಷ್ಯದಲ್ಲಿ ಗುಣಮಟ್ಟದ ಚಿತ್ರಗಳು ಹೊರಬರಲು ಸಾಧ್ಯವಾಗಲಿದೆ ಎಂದರು. ಈ ವೇಳೆ ನಟಿ ಮಾಲಾಶ್ರೀ ಅವರಿಗೆ ಆಕ್ಷನ್ ಕ್ವೀನ್ ಆಫ್ ಇಂಡಿಯಾ ಪ್ರಶಸ್ತಿ, ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಕೌಟುಂಬಿಕ ಮನರಂಜನಾ ಪ್ರಶಸ್ತಿ, ಅತ್ಯುತ್ತಮ ನಟ ಪ್ರಶಸ್ತಿಯನ್ನು ತೇಜ ಸಜ್ಜ ಪಡೆದರೆ, ಮುರಳಿ ಶರ್ಮಾ ಬಹುಮುಖ ನಟ ಪ್ರಶಸ್ತಿಯನ್ನು ಹಾಗೂ ಕುಟ್ಟಿ ಪದ್ಮಿನಿ ಅವರು ಭಾರತೀಯ ಚಿತ್ರರಂಗದ ಸ್ಫೂರ್ತಿ ಪ್ರಶಸ್ತಿ ಸ್ವೀಕರಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…