ಭಾರಿ ತಿಮಿಂಗಿಲಕ್ಕೆ ಬಲೆ ಬೀಸಿದ ಲೋಕಾಯುಕ್ತ | ಶಾಸಕನ ಪುತ್ರನ ಬಳಿ 8.12 ಕೋಟಿ ಪತ್ತೆ| ಬರೆದಿದ್ದ ದಾಖಲೆ ಅಗಿದು ನುಂಗಿದ ಭೂಪ…! |

March 3, 2023
3:37 PM

 ದಾವಣಗೆರೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. ಈ ಪ್ರಕರಣ ಸಂಬಂಧ ಲೋಕಾಯುಕ್ತ ಪೋಲೀಸರು ಪ್ರಶಾಂತ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪುತ್ರ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಕಾರಣ ದಾವಣಗೆರೆಯ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ರಾಜಿನಾಮೆ ಸಲ್ಲಿಸಿದ್ದಾರೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ವಸ್ತುಗಳ ಖರೀದಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಮುಖ್ಯ ಅಕೌಂಟೆಂಗ್ ಪ್ರಶಾಂತ್ ಮಾಡಾಳ್ ಗುತ್ತಿಗೆದಾರರಿಂದ 80 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಡಿದ್ದರು. 40 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದರು.

ಪುತ್ರ ಪ್ರಶಾಂತ್ ಮಾಡಾಳ್ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 8.12 ಕೋಟಿ ಕಂತೆ‌ ಕಂತೆ ಹಣ ಸಿಕ್ಕಿದೆ. ಆದರೂ ಇದು ನನ್ನ ಕುಟುಂಬದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ. ಆದ್ರೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ, ನೈತಿಕ ಹೊಣೆ ಹೊತ್ತು KSDL ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ವಿರುಪಾಕ್ಷಪ್ಪ ಹೇಳಿದ್ದಾರೆ.

ಲೋಕಾಯುಕ್ತ ದಾಳಿಯಿಂದ ಶಾಸಕ ಮಡಾಳ್ ವಿರೂಪಾಕ್ಷಪ್ಪ ಈ ತನಕ ಮಾಡಿರುವ ಭ್ರಷ್ಟಾಚಾರ ಪ್ರಕರಣ ಬಹಿರಂಗಗೊಳ್ಳುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣದಿಂದ ಕೆ.ಎಸ್.ಡಿ.ಎಲ್ ನಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ಆಗಿರೋ ಶಂಕೆ ವ್ಯಕ್ತವಾಗಿದೆ.

ಪ್ರಶಾಂತ್ ಬ್ಯಾಂಕ್ ಖಾತೆಗಳ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಹಿನ್ನೆಲೆ ಅಕೌಂಟ್ ಗಳ  ಪರಿಶೀಲನೆಗೂ ಮುಂದಾಗಿದ್ದಾರೆ. ಪ್ರಶಾಂತ್ ಮಡಾಳ್ ಮತ್ತು ಕುಟುಂಬಸ್ಥರ ಅಕೌಂಟ್ ಪರಿಶೀಲನೆ ಮಾಡುತ್ತಿರುವ ಅಧಿಕಾರಿಗಳು ಅಕೌಂಟ್ ಟ್ರಾಂಜಾಕ್ಷನ್ ಬಗ್ಗೆ ಗಮನ ಹರಿಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಪ್ರಶಾಂತ್ ತಾನು ಬರೆದಿದ್ದ ಕೆಲವು ದಾಖಲೆಗಳನ್ನು ಅಗಿದು ನುಂಗಿದ್ದಾನೆ. ತರುವಾಯ ಲೋಕಾಯುಕ್ತರು ಅದನ್ನೆಲ್ಲಾ ವಾಂತಿ ಮಾಡಿಸಿ ಅಧಿಕಾರಿಗಳು ತೆಗೆದಿದ್ದಾರೆ ಎನ್ನಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror